ಬ್ರೇಕಿಂಗ್ ನ್ಯೂಸ್
23-02-26 04:45 pm HK News Desk ದೇಶ - ವಿದೇಶ
ಕಠ್ಮಂಡು, ಫೆ 23: ನೇಪಾಳದ ರಾಜಧಾನಿ ಸುಮಾರು 90 ಕಿಲೋಮೀಟರ್ ದೂರದಲ್ಲಿರುವ ದಾಡಿಂಗ್ ಜಿಲ್ಲೆಯ ಗಜುರಿ ಬಳಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಪ್ರಯಾಣಿಕ ಬಸ್ ಇಂದು ಬೆಳಗಿನ ಜಾವ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ ಬಸ್ನಲ್ಲಿದ್ದ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 26ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಜುರಿ ಸಮೀಪದ ಭೈಸೆಪತಿ ಪ್ರದೇಶದ ಬಳಿ ಬಸ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿದೆ. ವಾಹನವು ರಸ್ತೆ ಬದಿಯಿಂದ ಜಾರಿ ಸುಮಾರು 300 ಮೀಟರ್ ಇಳಿಜಾರಿನಲ್ಲಿ ಉರುಳಿ ತ್ರಿಶೂಲಿ ನದಿ ದಡದಲ್ಲಿ ಬಿದ್ದಿದೆ. ಅಪಘಾತದಿಂದ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆಯ ಕುರಿತು ಮಾಹಿತಿ ನೀಡಿದ ನೇಪಾಳ ಸಶಸ್ತ್ರ ಪೊಲೀಸ್ ಪಡೆ ವಕ್ತಾರ ಬಿಷ್ಣು ಪ್ರಸಾದ್ ಭಟ್ಟ, ಸ್ಥಳದಿಂದ 18 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬಸ್ನಿಂದ 28 ಗಾಯಾಳು ಪ್ರಯಾಣಿಕರನ್ನು ರಕ್ಷಿಸಲಾಗಿದ್ದು. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ನೇಪಾಳ ಸೇನೆ ಮತ್ತು ಸ್ಥಳೀಯ ಪೊಲೀಸ್ ಪಡೆಗಳು ಪಾಲ್ಗೊಂಡಿವೆ ಎಂದಿದ್ದಾರೆ.
ಅಪಘಾತದಲ್ಲಿ ನ್ಯೂಜಿಲೆಂಡ್ನ ಪುರುಷ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರಲ್ಲಿ ಜಪಾನ್ನ ಮಹಿಳೆ ಹಾಗೂ ನೆದರ್ಲ್ಯಾಂಡ್ಸ್ನ ಪ್ರಜೆ ಸೇರಿದ್ದಾರೆ. ಬಸ್ನಲ್ಲಿ ಸುಮಾರು 40 ರಿಂದ 45 ಪ್ರಯಾಣಿಕರು ಇದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಅಪಘಾತಕ್ಕೆ ನಿಖರ ಕಾರಣ ಇನ್ನೂ ದೃಢವಾಗಿಲ್ಲ. ಆದರೆ ಚಾಲಕನ ಅತಿವೇಗದ ಚಾಲನೆ ಅಥವಾ ರಸ್ತೆ ಪರಿಸ್ಥಿತಿ ಕಳಪೆಯಾಗಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬಸ್ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ.
ರಾತ್ರಿಯ ಸಮಯದಲ್ಲಿ ಅಪಘಾತ ಸಂಭವಿಸಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಹೆಚ್ಚಿನ ಸವಾಲು ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಸಮಗ್ರ ತನಿಖೆ ಮುಂದುವರಿದಿದೆ. ಈ ದುರಂತವು ನೇಪಾಳದಲ್ಲಿ ಮತ್ತೆ ರಸ್ತೆ ಸುರಕ್ಷತೆ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm