ಬ್ರೇಕಿಂಗ್ ನ್ಯೂಸ್
01-01-21 11:09 pm Headline Karnataka News Network ದೇಶ - ವಿದೇಶ
Photo credits : Hauterfly
ಕೊಲ್ಲಂ, ಜ.1: ತಾನು ಕಸ ಗುಡಿಸುತ್ತಿದ್ದ ಪಂಚಾಯಿತಿಯಲ್ಲೇ ಆಕೆ ಅಧ್ಯಕ್ಷೆಯಾಗಿದ್ದಾರೆ. ಹೌದು... ಕೊಲ್ಲಂ ಜಿಲ್ಲೆಯ ಪತ್ತನಾಪುರಂ ಬ್ಲಾಕ್ ಪಂಚಾಯಿತಿಯಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಗೆ ಅದೃಷ್ಟ ಒಲಿದಿದ್ದು, ಈಗ ಅದೇ ಪಂಚಾಯತಿನ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಆಕೆಯ ಹೆಸರು ಆನಂದವಲ್ಲಿ. 46 ವರ್ಷದ ಈ ಮಹಿಳೆ ಪತ್ತನಾಪುರಂ ಪಂಚಾಯತಿಯಲ್ಲಿ ಕಸ ಗುಡಿಸುತ್ತಾ, ಅಧಿಕಾರಿಗಳಿಗೆ ಚಹಾ ತಂದು ಕೊಡುವ ಕೆಲಸ ಮಾಡುತ್ತಿದ್ದರು. ಹೀಗೆ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಯ ಮಹಿಳೆಯನ್ನು ಸಿಪಿಎಂ ಪಕ್ಷದಲ್ಲಿ ತಲವೂರು ಕ್ಷೇತ್ರದಲ್ಲಿ ಕಣಕ್ಕಿಳಿಸಲಾಗಿತ್ತು. ಅದೃಷ್ಟದಲ್ಲಿ ಗೆಲುವನ್ನೂ ಕಂಡಿದ್ದರು.
13 ಸ್ಥಾನಗಳ ಪತ್ತನಾಪುರಂ ಬ್ಲಾಕ್ ಪಂಚಾಯಿತಿಯಲ್ಲಿ ಸಿಪಿಎಂ ಏಳು ಸ್ಥಾನಗಳನ್ನು ಪಡೆದಿದ್ದು ಅಧಿಕಾರಕ್ಕೇರಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಮಹಿಳೆಗೆ ಮೀಸಲಾಗಿದ್ದರಿಂದ ಆನಂದವಲ್ಲಿ ಬಿಟ್ಟರೆ ಬೇರೆ ಯಾರು ಕೂಡ ಸೂಕ್ತ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ಸಿಪಿಎಂ ಘಟಕ ಆನಂದವಲ್ಲಿಯನ್ನು ಅಧ್ಯಕ್ಷೆಯಾಗಿ ಆಯ್ಕೆ ಮಾಡಿದೆ. ಪತಿ ಮೋಹನ್, ಸಿಪಿಎಂ ಪಕ್ಷದ ಸ್ಥಳೀಯ ಸಮಿತಿ ಸದಸ್ಯರಾಗಿದ್ದಾರೆ.

ಆನಂದವಲ್ಲಿ 2011ರಲ್ಲಿ ಪತ್ತನಾಪುರಂ ಬ್ಲಾಕ್ ಪಂಚಾಯಿತಿಗೆ ಕಸ ಗುಡಿಸುವ ಕೆಲಸಕ್ಕೆ ಸೇರಿದ್ದರು. ಆಗ ಅವರಿಗೆ 2 ಸಾವಿರ ರೂ. ವೇತನ ಇತ್ತು. 2017ರಲ್ಲಿ ವೇತನ ಪರಿಷ್ಕರಣೆಯಾಗಿ ಆರು ಸಾವಿರಕ್ಕೆ ಏರಿಕೆಯಾಗಿತ್ತು. ಕಸ ಗುಡಿಸುವ ಜೊತೆಗೆ ಪಂಚಾಯಿತಿಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು. ದ್ವಿತೀಯ ಪಿಯುಸಿ ಓದಿರುವ ಆನಂದವಲ್ಲಿ ಪಂಚಾಯಿತಿಯಲ್ಲಿ ಕಳೆದ ವಾರದ ವರೆಗೂ ಅಧಿಕಾರಿಗಳಿಗೆ ಚಹಾ ತಂದು ಕೊಡುತ್ತಿದ್ದರು.
ಇಂಥ ಹುದ್ದೆಯನ್ನು ಅಲಂಕರಿಸುತ್ತೇನೆಂದು ಕನಸಿನಲ್ಲೂ ಎಣಿಸಿರಲಿಲ್ಲ. ನಾನೇ ಕಸ ಗುಡಿಸುತ್ತಿದ್ದ ಪಂಚಾಯಿತಿಯಲ್ಲೇ ಮುಖ್ಯಸ್ಥಳಾಗುವ ಅದೃಷ್ಟ ಬಂದಿರುವುದು ನಿಜಕ್ಕೂ ಊಹಿಸಲು ಸಾಧ್ಯವಾಗದ ವಿಷಯ ಎಂದು ಆನಂದವಲ್ಲಿ ಪ್ರತಿಕ್ರಿಯಿಸಿದ್ದಾರೆ.
For almost 10 years she had swept floors and dusted chairs at the panchayat office but on Wednesday A Anandavalli (46) occupied the chair of the block panchayat president in Pathanapuram in south Kerala’s Kollam district.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm