ಬ್ರೇಕಿಂಗ್ ನ್ಯೂಸ್
01-01-21 11:09 pm Headline Karnataka News Network ದೇಶ - ವಿದೇಶ
Photo credits : Hauterfly
ಕೊಲ್ಲಂ, ಜ.1: ತಾನು ಕಸ ಗುಡಿಸುತ್ತಿದ್ದ ಪಂಚಾಯಿತಿಯಲ್ಲೇ ಆಕೆ ಅಧ್ಯಕ್ಷೆಯಾಗಿದ್ದಾರೆ. ಹೌದು... ಕೊಲ್ಲಂ ಜಿಲ್ಲೆಯ ಪತ್ತನಾಪುರಂ ಬ್ಲಾಕ್ ಪಂಚಾಯಿತಿಯಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಗೆ ಅದೃಷ್ಟ ಒಲಿದಿದ್ದು, ಈಗ ಅದೇ ಪಂಚಾಯತಿನ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಆಕೆಯ ಹೆಸರು ಆನಂದವಲ್ಲಿ. 46 ವರ್ಷದ ಈ ಮಹಿಳೆ ಪತ್ತನಾಪುರಂ ಪಂಚಾಯತಿಯಲ್ಲಿ ಕಸ ಗುಡಿಸುತ್ತಾ, ಅಧಿಕಾರಿಗಳಿಗೆ ಚಹಾ ತಂದು ಕೊಡುವ ಕೆಲಸ ಮಾಡುತ್ತಿದ್ದರು. ಹೀಗೆ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಯ ಮಹಿಳೆಯನ್ನು ಸಿಪಿಎಂ ಪಕ್ಷದಲ್ಲಿ ತಲವೂರು ಕ್ಷೇತ್ರದಲ್ಲಿ ಕಣಕ್ಕಿಳಿಸಲಾಗಿತ್ತು. ಅದೃಷ್ಟದಲ್ಲಿ ಗೆಲುವನ್ನೂ ಕಂಡಿದ್ದರು.
13 ಸ್ಥಾನಗಳ ಪತ್ತನಾಪುರಂ ಬ್ಲಾಕ್ ಪಂಚಾಯಿತಿಯಲ್ಲಿ ಸಿಪಿಎಂ ಏಳು ಸ್ಥಾನಗಳನ್ನು ಪಡೆದಿದ್ದು ಅಧಿಕಾರಕ್ಕೇರಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಮಹಿಳೆಗೆ ಮೀಸಲಾಗಿದ್ದರಿಂದ ಆನಂದವಲ್ಲಿ ಬಿಟ್ಟರೆ ಬೇರೆ ಯಾರು ಕೂಡ ಸೂಕ್ತ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ಸಿಪಿಎಂ ಘಟಕ ಆನಂದವಲ್ಲಿಯನ್ನು ಅಧ್ಯಕ್ಷೆಯಾಗಿ ಆಯ್ಕೆ ಮಾಡಿದೆ. ಪತಿ ಮೋಹನ್, ಸಿಪಿಎಂ ಪಕ್ಷದ ಸ್ಥಳೀಯ ಸಮಿತಿ ಸದಸ್ಯರಾಗಿದ್ದಾರೆ.

ಆನಂದವಲ್ಲಿ 2011ರಲ್ಲಿ ಪತ್ತನಾಪುರಂ ಬ್ಲಾಕ್ ಪಂಚಾಯಿತಿಗೆ ಕಸ ಗುಡಿಸುವ ಕೆಲಸಕ್ಕೆ ಸೇರಿದ್ದರು. ಆಗ ಅವರಿಗೆ 2 ಸಾವಿರ ರೂ. ವೇತನ ಇತ್ತು. 2017ರಲ್ಲಿ ವೇತನ ಪರಿಷ್ಕರಣೆಯಾಗಿ ಆರು ಸಾವಿರಕ್ಕೆ ಏರಿಕೆಯಾಗಿತ್ತು. ಕಸ ಗುಡಿಸುವ ಜೊತೆಗೆ ಪಂಚಾಯಿತಿಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು. ದ್ವಿತೀಯ ಪಿಯುಸಿ ಓದಿರುವ ಆನಂದವಲ್ಲಿ ಪಂಚಾಯಿತಿಯಲ್ಲಿ ಕಳೆದ ವಾರದ ವರೆಗೂ ಅಧಿಕಾರಿಗಳಿಗೆ ಚಹಾ ತಂದು ಕೊಡುತ್ತಿದ್ದರು.
ಇಂಥ ಹುದ್ದೆಯನ್ನು ಅಲಂಕರಿಸುತ್ತೇನೆಂದು ಕನಸಿನಲ್ಲೂ ಎಣಿಸಿರಲಿಲ್ಲ. ನಾನೇ ಕಸ ಗುಡಿಸುತ್ತಿದ್ದ ಪಂಚಾಯಿತಿಯಲ್ಲೇ ಮುಖ್ಯಸ್ಥಳಾಗುವ ಅದೃಷ್ಟ ಬಂದಿರುವುದು ನಿಜಕ್ಕೂ ಊಹಿಸಲು ಸಾಧ್ಯವಾಗದ ವಿಷಯ ಎಂದು ಆನಂದವಲ್ಲಿ ಪ್ರತಿಕ್ರಿಯಿಸಿದ್ದಾರೆ.
For almost 10 years she had swept floors and dusted chairs at the panchayat office but on Wednesday A Anandavalli (46) occupied the chair of the block panchayat president in Pathanapuram in south Kerala’s Kollam district.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm