ಬ್ರೇಕಿಂಗ್ ನ್ಯೂಸ್
01-01-21 11:09 pm Headline Karnataka News Network ದೇಶ - ವಿದೇಶ
Photo credits : Hauterfly
ಕೊಲ್ಲಂ, ಜ.1: ತಾನು ಕಸ ಗುಡಿಸುತ್ತಿದ್ದ ಪಂಚಾಯಿತಿಯಲ್ಲೇ ಆಕೆ ಅಧ್ಯಕ್ಷೆಯಾಗಿದ್ದಾರೆ. ಹೌದು... ಕೊಲ್ಲಂ ಜಿಲ್ಲೆಯ ಪತ್ತನಾಪುರಂ ಬ್ಲಾಕ್ ಪಂಚಾಯಿತಿಯಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಗೆ ಅದೃಷ್ಟ ಒಲಿದಿದ್ದು, ಈಗ ಅದೇ ಪಂಚಾಯತಿನ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಆಕೆಯ ಹೆಸರು ಆನಂದವಲ್ಲಿ. 46 ವರ್ಷದ ಈ ಮಹಿಳೆ ಪತ್ತನಾಪುರಂ ಪಂಚಾಯತಿಯಲ್ಲಿ ಕಸ ಗುಡಿಸುತ್ತಾ, ಅಧಿಕಾರಿಗಳಿಗೆ ಚಹಾ ತಂದು ಕೊಡುವ ಕೆಲಸ ಮಾಡುತ್ತಿದ್ದರು. ಹೀಗೆ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಯ ಮಹಿಳೆಯನ್ನು ಸಿಪಿಎಂ ಪಕ್ಷದಲ್ಲಿ ತಲವೂರು ಕ್ಷೇತ್ರದಲ್ಲಿ ಕಣಕ್ಕಿಳಿಸಲಾಗಿತ್ತು. ಅದೃಷ್ಟದಲ್ಲಿ ಗೆಲುವನ್ನೂ ಕಂಡಿದ್ದರು.
13 ಸ್ಥಾನಗಳ ಪತ್ತನಾಪುರಂ ಬ್ಲಾಕ್ ಪಂಚಾಯಿತಿಯಲ್ಲಿ ಸಿಪಿಎಂ ಏಳು ಸ್ಥಾನಗಳನ್ನು ಪಡೆದಿದ್ದು ಅಧಿಕಾರಕ್ಕೇರಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಮಹಿಳೆಗೆ ಮೀಸಲಾಗಿದ್ದರಿಂದ ಆನಂದವಲ್ಲಿ ಬಿಟ್ಟರೆ ಬೇರೆ ಯಾರು ಕೂಡ ಸೂಕ್ತ ಅಭ್ಯರ್ಥಿ ಇರಲಿಲ್ಲ. ಹೀಗಾಗಿ ಸಿಪಿಎಂ ಘಟಕ ಆನಂದವಲ್ಲಿಯನ್ನು ಅಧ್ಯಕ್ಷೆಯಾಗಿ ಆಯ್ಕೆ ಮಾಡಿದೆ. ಪತಿ ಮೋಹನ್, ಸಿಪಿಎಂ ಪಕ್ಷದ ಸ್ಥಳೀಯ ಸಮಿತಿ ಸದಸ್ಯರಾಗಿದ್ದಾರೆ.

ಆನಂದವಲ್ಲಿ 2011ರಲ್ಲಿ ಪತ್ತನಾಪುರಂ ಬ್ಲಾಕ್ ಪಂಚಾಯಿತಿಗೆ ಕಸ ಗುಡಿಸುವ ಕೆಲಸಕ್ಕೆ ಸೇರಿದ್ದರು. ಆಗ ಅವರಿಗೆ 2 ಸಾವಿರ ರೂ. ವೇತನ ಇತ್ತು. 2017ರಲ್ಲಿ ವೇತನ ಪರಿಷ್ಕರಣೆಯಾಗಿ ಆರು ಸಾವಿರಕ್ಕೆ ಏರಿಕೆಯಾಗಿತ್ತು. ಕಸ ಗುಡಿಸುವ ಜೊತೆಗೆ ಪಂಚಾಯಿತಿಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು. ದ್ವಿತೀಯ ಪಿಯುಸಿ ಓದಿರುವ ಆನಂದವಲ್ಲಿ ಪಂಚಾಯಿತಿಯಲ್ಲಿ ಕಳೆದ ವಾರದ ವರೆಗೂ ಅಧಿಕಾರಿಗಳಿಗೆ ಚಹಾ ತಂದು ಕೊಡುತ್ತಿದ್ದರು.
ಇಂಥ ಹುದ್ದೆಯನ್ನು ಅಲಂಕರಿಸುತ್ತೇನೆಂದು ಕನಸಿನಲ್ಲೂ ಎಣಿಸಿರಲಿಲ್ಲ. ನಾನೇ ಕಸ ಗುಡಿಸುತ್ತಿದ್ದ ಪಂಚಾಯಿತಿಯಲ್ಲೇ ಮುಖ್ಯಸ್ಥಳಾಗುವ ಅದೃಷ್ಟ ಬಂದಿರುವುದು ನಿಜಕ್ಕೂ ಊಹಿಸಲು ಸಾಧ್ಯವಾಗದ ವಿಷಯ ಎಂದು ಆನಂದವಲ್ಲಿ ಪ್ರತಿಕ್ರಿಯಿಸಿದ್ದಾರೆ.
For almost 10 years she had swept floors and dusted chairs at the panchayat office but on Wednesday A Anandavalli (46) occupied the chair of the block panchayat president in Pathanapuram in south Kerala’s Kollam district.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm