ಬ್ರೇಕಿಂಗ್ ನ್ಯೂಸ್
23-02-26 06:57 pm HK News Desk ದೇಶ - ವಿದೇಶ
ಜೈಪುರ, ಫೆ.23: ರಾಜಸ್ಥಾನದಲ್ಲಿ ಕಂಬಳಿ ವಿತರಣೆ ಕಾರ್ಯಕ್ರಮದ ವೇಳೆ ಮುಸ್ಲಿಂ ಮಹಿಳೆಗೆ ಕಂಬಳಿ ನೀಡಲು ನಿರಾಕರಿಸಿರುವ ಬಿಜೆಪಿ ಸಂಸದನ ನಡೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಘಟನೆಗೆ ಸಂಬಂಧಿಸಿ ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಮಾಜಿ ಬಿಜೆಪಿ ಸಂಸದ ಸುಖಬೀರ್ ಸಿಂಗ್ ಜೌನಪುರಿಯಾ ವಿರುದ್ಧ ಮುಸ್ಲಿಂ ಮಹಿಳೆ ಬಗ್ಗೆ ತಾರತಮ್ಯದ ಆರೋಪ ಕೇಳಿಬಂದಿದೆ.
ಫೆಬ್ರವರಿ 22 ರಂದು ನಿವಾಯ್ ತಹಸಿಲಿನ ಕರೇರಾ ಗ್ರಾಮದಲ್ಲಿ ಕಂಬಳಿ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು. 2014 ರಿಂದ 2024ರ ವರೆಗೆ ಸಂಸದರಾಗಿದ್ದ ಸುಖಬೀರ್ ಸಿಂಗ್ ಜೌನಪುರಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಿಳೆಯರಿಗೆ ಕಂಬಳಿಗಳನ್ನು ವಿತರಿಸುತ್ತಿದ್ದರು.
ಈ ಸಂದರ್ಭದಲ್ಲಿ ಒಬ್ಬ ಮಹಿಳೆ ಕಂಬಳಿ ಸ್ವೀಕರಿಸಲು ಬಂದಿದ್ದು ಆಕೆಯದ್ದು ಮುಸ್ಲಿಂ ಹೆಸರು ಎಂದು ತಿಳಿಯುತ್ತಲೇ ಸುಖಬೀರ್ ಸಿಂಗ್, “ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸುವವರಿಗೆ ಕಂಬಳಿ ತೆಗೆದುಕೊಳ್ಳುವ ಹಕ್ಕಿಲ್ಲ. ನಿಮಗಿದು ಕೆಟ್ಟದು ಅಂತನಿಸಿದರೆ ನನಗೇನೂ ಮಾಡಲಾಗದು" ಎಂದು ಹೇಳಿ ಕಂಬಳಿಯನ್ನು ನೀಡಲು ನಿರಾಕರಿಸಿದ ವಿಡಿಯೋ ವೈರಲ್ ಆಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟೋಂಕ್–ಸವಾಯಿ ಮಾಧೋಪುರ ಕ್ಷೇತ್ರದ ಕಾಂಗ್ರೆಸ್ ಸಂಸದ ಹರೀಶ್ ಚಂದ್ರ ಮೀನಾ ಈ ವೀಡಿಯೋವನ್ನು ಹಂಚಿಕೊಂಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿಂಗ್ ಅವರ ನಡವಳಿಕೆ ದೇಶದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಟಿಕಾರಂ ಜೂಲಿ ಕೂಡ ಘಟನೆಯನ್ನು ತಾರತಮ್ಯದ ನಡವಳಿಕೆ ಎಂದು ಟೀಕಿಸಿದ್ದು ಜನಪ್ರತಿನಿಧಿಯೊಬ್ಬರು ಈ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.
ವಿವಾದ ತೀವ್ರಗೊಂಡ ನಂತರ ಸುಖಬೀರ್ ಸಿಂಗ್ ಜೌನಪುರಿಯಾ ಸ್ಪಷ್ಟನೆ ನೀಡಿದ್ದು, ಕಂಬಳಿ ವಿತರಣೆ ಸಂಪೂರ್ಣ ತಮ್ಮ ವೈಯಕ್ತಿಕ ಕಾರ್ಯಕ್ರಮವಾಗಿದ್ದು ಯಾವುದೇ ಸರ್ಕಾರಿ ಯೋಜನೆ ಅಥವಾ ಸಾರ್ವಜನಿಕ ಹಣವನ್ನು ಬಳಸಲಾಗಿಲ್ಲ ಎಂದು ತಿಳಿಸಿದ್ದಾರೆ. ತಾವು ಯಾರ ಮೇಲೂ ತಾರತಮ್ಯ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm