ಬ್ರೇಕಿಂಗ್ ನ್ಯೂಸ್
24-02-26 01:21 pm HK News Desk ದೇಶ - ವಿದೇಶ
ಟೆಹ್ರಾನ್, ಫೆ.24: ಇರಾನ್ನಲ್ಲಿ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಅಮೆರಿಕ ದಾಳಿ ಭೀತಿಯಲ್ಲಿ ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ನಿಗೂಢ ಸ್ಥಳಕ್ಕೆ ತೆರಳಿ ಅಡಗಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ರಾಯಭಾರ ಕಚೇರಿ, ಭಾರತೀಯ ಪ್ರಜೆಗಳನ್ನು ಕೂಡಲೇ ದೇಶ ತೊರೆಯುವಂತೆ ಸೂಚನೆ ನೀಡಿದೆ. ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು ಲಭ್ಯವಿರುವ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ.
ಇರಾನ್ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟು ಭಾರತ ಸರ್ಕಾರ ಜ.5 ರಂದು ಇದೇ ರೀತಿಯ ಸಲಹೆಗಳನ್ನು ನೀಡಿತ್ತು. ಈಗ ಮತ್ತೆ ಅದೇ ರೀತಿಯ ವಾತಾವರಣ ಎದುರಾಗಿದ್ದು ಎಲ್ಲಾ ಭಾರತೀಯ ಮೂಲದವರು ಎಚ್ಚರಿಕೆ ವಹಿಸಬೇಕು. ಪ್ರತಿಭಟನೆಗಳು ನಡೆಯುವ ಸ್ಥಳಗಳಿಂದ ದೂರವಿರಬೇಕು, ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕೆಂದು ಸೂಚಿಸಿದೆ.
ಅಲ್ಲದೇ ಬೆಳವಣಿಗೆ ತಿಳಿಯಲು ಸ್ಥಳೀಯ ಮಾಧ್ಯಮಗಳ ಮೇಲೆ ಗಮನ ಹರಿಸಿ. ಯಾವುದೇ ಕ್ಷಣದಲ್ಲೂ ನಿಮ್ಮ ಪಾಸ್ಪೋರ್ಟ್, ಇತರ ಪ್ರಯಾಣ ದಾಖಲೆಗಳನ್ನ ಸಿದ್ಧವಾಗಿಟ್ಟುಕೊಳ್ಳಿ. ರಾಯಭಾರ ಕಚೇರಿಯಲ್ಲಿ ನೋಂದಾಯಿಸದವರು ಆನ್ಲೈನ್ ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.
ಪ್ರತಿಭಟನೆಗಳು ನಡೆಯುತ್ತಿರುವ ಕಾರಣ, ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಅಂತಹ ಪ್ರದೇಶಗಳಲ್ಲಿ ಭಾರತೀಯರು ಸಿಲುಕಿದ್ದರೆ, ಅವರ ಪರವಾಗಿ ಭಾರತದ ಕುಟುಂಬಗಳು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಅದಕ್ಕಾಗಿ ತುರ್ತು ಸಹಾಯವಾಣಿ ಸಂಖ್ಯೆಯನ್ನ ಬಿಡುಗಡೆಗೊಳಿಸಲಾಗಿದೆ.
ತುರ್ತು ಸಂಪರ್ಕ ಸಹಾಯವಾಣಿ ಸಂಖ್ಯೆ
ಇದೇ ವೇಳೆ, ಅಮೆರಿಕ ಪ್ರತಿನಿಧಿಗಳು ಇರಾನ್ ಜೊತೆಗೆ ನ್ಯೂಕ್ಲಿಯರ್ ಒಪ್ಪಂದ ವಿಚಾರದಲ್ಲಿ ಒತ್ತಡ ಹೇರುತ್ತಿದ್ದಾರೆ. ಇರಾನ್ ನ್ಯೂಕ್ಲಿಯರ್ ವಿಚಾರದಲ್ಲಿ ಬಗ್ಗದಿದ್ದರೆ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಇದಕ್ಕಾಗಿ ಮಧ್ಯ ಪ್ರಾಚ್ಯದ ಸೇನಾ ನೆಲೆಗಳಲ್ಲಿ ಯುದ್ಧ ವಿಮಾನಗಳನ್ನು, ಮಿಲಿಟರಿಯನ್ನು ಸಜ್ಜುಗೊಳಿಸಿದೆ. ಯಾವುದೇ ಕ್ಷಣದಲ್ಲಿ ದಾಳಿ ಆಗಬಹುದೆಂದು ಎಚ್ಚರಿಕೆ ರವಾನಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm