ಬ್ರೇಕಿಂಗ್ ನ್ಯೂಸ್
25-02-26 10:10 pm HK News Desk ದೇಶ - ವಿದೇಶ
ಬೆಂಗಳೂರು, ಫೆ.25 ತಮ್ಮ ಬೇಡಿಕೆ ಈಡೇರಿಸಲು ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮತ್ತು ಇಲಾಖೆಯ ಎಲ್ಲಾ ವೃಂದ ಸಂಘಗಳು ಮುಷ್ಕರಕ್ಕೆ ಕರೆ ನೀಡಿವೆ.
ಅನಿರ್ದಿಷ್ಟ ಮುಷ್ಕರದ ಮೊದಲ ಹಂತವಾಗಿ ಮಾರ್ಚ್ 11ರಿಂದ 15ರ ವರೆಗೆ ಓಪಿಡಿ ಸೇವೆ (ಹೊರರೋಗಿಗಳ ಸೇವೆ) ಬಂದ್ ಮಾಡಲು ನಿರ್ಧರಿಸಿದ್ದು ತುರ್ತು ಸೇವೆ ಮಾತ್ರ ಇರಲಿದೆ ಎಂದು ತಿಳಿಸಿದ್ದಾರೆ. ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಸುವುದಾಗಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ ರವೀಂದ್ರನಾಛ ಎನ್ ಮೇಟಿ, ಕಾರ್ಯದರ್ಶಿ ಡಾ. ತಿಮ್ಮರಾಜು ಪಿ.ಆರ್, ಆರೋಗ್ಯ ಇಲಾಖೆ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ ಬಳ್ಳಾರಿ, ಕಾರ್ಯದರ್ಶಿ ಎಚ್ ಪುಟ್ಟರಾಜು ತಿಳಿಸಿದ್ದಾರೆ.
ಎರಡು ಹಂತದಲ್ಲಿ ಮುಷ್ಕರ
ಎರಡು ಹಂತದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಓಪಿಡಿ ಬಂದ್ ಮಾಡಿ ಮುಷ್ಕರ ನಡೆಸುವುದು, ಎರಡನೇ ಹಂತದಲ್ಲಿ ಆಸ್ಪತ್ರೆಗೆ ಗೈರಾಗುವ ಮೂಲಕ ವೈದ್ಯರು ಮುಷ್ಕರ ನಡೆಸಲಿದ್ದಾರೆ. ಮಾರ್ಚ್ 11ರಿಂದ 15ರ ವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಡಿಸ್ಪೆನ್ಸರಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಹೊರ ರೋಗಿ ಚಿಕಿತ್ಸೆ ಸ್ಥಗಿತಗೊಳಿಸಲು ವೈದ್ಯರು ತೀರ್ಮಾನಿಸಿದ್ದಾರೆ. ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ. ಮಾರ್ಚ್ 16ರಿಂದ ಕರ್ತವ್ಯಕ್ಕೆ ಅನಿರ್ದಿಷ್ಟಾವಧಿ ವರೆಗೂ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸಲು ನಿರ್ಧಾರಿಸಲಾಗಿದೆ ಎಂದು ಸಂಘಟನೆ ಪದಾಧಿಕಾರಿಗಳು ತಿಳಿಸಿದ್ದಾರೆ.
ವೈದ್ಯರ ಸಂಘದ ಬೇಡಿಕೆಗಳು
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm