ಬ್ರೇಕಿಂಗ್ ನ್ಯೂಸ್
27-02-26 03:55 pm HK News Staffer ದೇಶ - ವಿದೇಶ
ನವದೆಹಲಿ, ಫೆ.27: ಮಹತ್ವದ ಬೆಳವಣಿಗೆಯಲ್ಲಿ ಭಾರೀ ಸಂಚಲನ ಎಬ್ಬಿಸಿದ್ದ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಕರಣದಲ್ಲಿ ಆರೋಪಿಗಳೆಂದು ಗುರುತಿಸಿದ್ದ ಎಲ್ಲ 23 ಮಂದಿಯನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ಬಗ್ಗೆ ಸಿಬಿಐ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ ಯಾವುದೇ ಬಲವಾದ ಪುರಾವೆಗಳಿಲ್ಲ ಎಂದು ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಕೇವಲ ಊಹೆಗಳ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಅಬಕಾರಿ ನೀತಿ ರೂಪಿಸುವಲ್ಲಿ ಯಾವುದೇ ಕ್ರಿಮಿನಲ್ ಪಿತೂರಿ ಅಥವಾ ದುರುದ್ದೇಶ ಸಿಬಿಐ ಆರೋಪ ಪಟ್ಟಿಯಲ್ಲಿ ಕಂಡುಬಂದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಇದರೊಂದಿಗೆ, ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮಾತ್ರವಲ್ಲದೆ, ಬಿಆರ್ಎಸ್ ನಾಯಕಿ ಕೆ. ಕವಿತಾ, ವಿಜಯ್ ನಾಯರ್ ಸೇರಿದಂತೆ ದೋಷಾರೋಪ ಪಟ್ಟಿಯಲ್ಲಿದ್ದ ಎಲ್ಲರಿಗೂ ಈ ಮೂಲಕ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದ್ದಲ್ಲದೆ, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನಾಯಕರನ್ನು ದೋಷಾರೋಪಣೆಗೆ ಒಳಪಡಿಸಿದ್ದಕ್ಕಾಗಿ ಸಿಬಿಐ ಅನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.
ನಾನು ಭ್ರಷ್ಟನಲ್ಲ, ಅತಿದೊಡ್ಡ ಪಿತೂರಿ ; ಕೇಜ್ರಿವಾಲ್:
ತೀರ್ಪು ಹೊರಬಿದ್ದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾವುಕರಾಗಿ ಕಣ್ಣೀರಿಟ್ಟರು. "ನಾನು ಭ್ರಷ್ಟನಲ್ಲ. ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರು ಪ್ರಾಮಾಣಿಕರು (ಕಟ್ಟರ್ ಇಮಂದಾರ್) ಎಂದು ಇಂದು ನ್ಯಾಯಾಲಯವೇ ಸಾಬೀತುಪಡಿಸಿದೆ. ಇದು ಸ್ವತಂತ್ರ ಭಾರತದ ಇತಿಹಾಸದಲ್ಲೇ ನಡೆದ ಅತಿದೊಡ್ಡ ರಾಜಕೀಯ ಪಿತೂರಿ" ಎಂದು ಅವರು ಹೇಳಿದರು.
2021-22ರ ದೆಹಲಿ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿತ್ತು. ಈ ಸಂಬಂಧ ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರು ಸುದೀರ್ಘ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಸದ್ಯ ಸಿಬಿಐ ಪ್ರಕರಣದಿಂದ ಇವರು ಮುಕ್ತರಾಗಿದ್ದು ಕೇಂದ್ರ ಸರ್ಕಾರದ ನಡೆ ಚರ್ಚೆಗೀಡು ಮಾಡಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm