ಬ್ರೇಕಿಂಗ್ ನ್ಯೂಸ್
28-02-26 10:54 pm HK News Desk ದೇಶ - ವಿದೇಶ
ನವದೆಹಲಿ, ಫೆ.28: ಇರಾನ್ – ಇಸ್ರೇಲ್ – ಅಮೆರಿಕ ಸಂಘರ್ಷ ಹಿನ್ನೆಲೆಯಲ್ಲಿ ದುಬೈನತ್ತಲೂ ಮಿಸೈಲ್ ದಾಳಿ ಆಗುತ್ತಿರುವುದರಿಂದ ಜಗತ್ತಿನ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಎಲ್ಲ ಜನರು ತೆರವಾಗುವಂತೆ ಸೂಚಿಸಲಾಗಿದೆ.
ಇರಾನ್ ಪಡೆಗಳು ಅಲ್ ದಫ್ರಾದಲ್ಲಿರುವ ಅಮೆರಿಕದ ಮಿಲಿಟರಿ ಬೇಸನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದು, ಅಬುಧಾಬಿ ಮತ್ತು ದುಬೈನಲ್ಲೂ ಸ್ಫೋಟದ ಘಟನೆಗಳು ನಡೆದಿವೆ. ದುಬೈನ ಬುರ್ಜ್ ಖಲೀಫಾ ಕಟ್ಟಡದ ಬಳಿಯಲ್ಲೂ ಸ್ಫೋಟದ ಸದ್ದು ಕೇಳಿದ್ದು ಜನರು ಆತಂಕಗೊಂಡಿದ್ದಾರೆ. ದುಬೈನಲ್ಲಿ ಕೇರಳ, ಕರ್ನಾಟಕದ ಅತಿ ಹೆಚ್ಚು ಜನರಿದ್ದಾರೆ. ಯುಎಇ ರಾಜಧಾನಿ ಅಬುಧಾಬಿಯಲ್ಲಿ ಸ್ಫೋಟದ ಸದ್ದು ಕೇಳಿದ್ದು ಹೊಗೆ ಎದ್ದಿರುವ ದೃಶ್ಯವನ್ನು ಸಿಎನ್ಎನ್ ಟಿವಿ ವರದಿ ಮಾಡಿದೆ.
ಅಬುಧಾಬಿಯ ವಸತಿ ಪ್ರದೇಶಕ್ಕೂ ಇರಾನ್ ಕ್ಷಿಪಣಿ ದಾಳಿಯಾಗಿದ್ದರಿಂದ ಅಲ್ಲಿನ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ. ಇದರ ನಂತರ, ದುಬೈನಲ್ಲಿ ವಿಮಾನ ಸಂಚಾರ ರದ್ದುಪಡಿಸಿದ್ದು ಏರ್ ಡಿಫೆನ್ಸ್ ಸಿಸ್ಟಮ್ ಸಿದ್ಧವಾಗಿಸಲಾಗಿದೆ. ಇರಾನ್ ದಾಳಿಯನ್ನು ಯುಎಇ ಸಚಿವಾಲಯ, ಹೇಡಿತನದ್ದು ಮತ್ತು ಅಪಾಯಕಾರಿ ನಡೆ ಎಂದು ಹೇಳಿದೆ. ದುಬೈ ಬಳಿಯ ಪ್ರಸಿದ್ಧ ಪ್ರವಾಸಿ ತಾಣ ಪಾಮ್ ಐಲ್ಯಾಂಡ್ ಬಳಿಯೂ ಬೆಂಕಿ ಮತ್ತು ಹೊಗೆ ಎದ್ದಿದ್ದು ಕ್ಷಿಪಣಿ ದಾಳಿಯಾದ ಬಗ್ಗೆ ಹೇಳಲಾಗುತ್ತಿದೆ.
ಅಮೆರಿಕ ಮತ್ತು ಇಸ್ರೇಲಿ ಪಡೆಗಳ ದಾಳಿಯು ಇರಾನ್ ನಾಯಕ ಅಲಿ ಖಮೇನಿ ಮತ್ತು ಅಧ್ಯಕ್ಷ ಮಸೂದ್ ಪಜೆಶ್ಕಿಯಾನ್ ಅವರನ್ನು ಗುರಿಯಾಗಿಸಿದ್ದು ಇರಾನ್ ದೇಶದ ಉತ್ತರ ದಕ್ಷಿಣವೆಂದು ಎಲ್ಲ ಕಡೆಯೂ ದಾಳಿಯಾಗಿದೆ. ಬಾಲಕಿಯರ ಶಾಲೆಗೂ ಬಾಂಬ್ ದಾಳಿಯಾಗಿದ್ದು, ಅಲ್ಲಿ 57 ಮಂದಿ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಒಟ್ಟು 85 ಮಂದಿ ಇರಾನ್ ಕಡೆಯಲ್ಲಿ ಸಾವು ಸಂಭವಿಸಿದೆ ಎನ್ನಲಾಗುತ್ತಿದೆ. ಶನಿವಾರದ ಇಸ್ರೇಲ್ ದಾಳಿಯಿಂದ ಅಲಿ ಖಮೇನಿ ಸಾವಾಗಿದೆ ಎಂದು ಹೇಳಲಾಗುತ್ತಿದ್ದರೂ ಇರಾನ್ ಇದನ್ನು ದೃಢಪಡಿಸಿಲ್ಲ. ಇರಾನ್ ವಿದೇಶ ಮಂತ್ರಿ ಅಬ್ಬಾಸ್ ಅರಾಗ್ಚಿ, ಖಮೇನಿ ಇನ್ನೂ ಜೀವಂತ ಇದ್ದಾರೆ ಎಂದಿದ್ದಾರೆ. ಇರಾನ್ ಮೇಲಿನ ದಾಳಿಯನ್ನು ರಷ್ಯಾ ಮತ್ತು ಚೀನಾ ಖಂಡಿಸಿವೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:48 pm
HK News Staffer
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm