ಬ್ರೇಕಿಂಗ್ ನ್ಯೂಸ್
28-02-26 10:54 pm HK News Desk ದೇಶ - ವಿದೇಶ
ನವದೆಹಲಿ, ಫೆ.28: ಇರಾನ್ – ಇಸ್ರೇಲ್ – ಅಮೆರಿಕ ಸಂಘರ್ಷ ಹಿನ್ನೆಲೆಯಲ್ಲಿ ದುಬೈನತ್ತಲೂ ಮಿಸೈಲ್ ದಾಳಿ ಆಗುತ್ತಿರುವುದರಿಂದ ಜಗತ್ತಿನ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಎಲ್ಲ ಜನರು ತೆರವಾಗುವಂತೆ ಸೂಚಿಸಲಾಗಿದೆ.
ಇರಾನ್ ಪಡೆಗಳು ಅಲ್ ದಫ್ರಾದಲ್ಲಿರುವ ಅಮೆರಿಕದ ಮಿಲಿಟರಿ ಬೇಸನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದು, ಅಬುಧಾಬಿ ಮತ್ತು ದುಬೈನಲ್ಲೂ ಸ್ಫೋಟದ ಘಟನೆಗಳು ನಡೆದಿವೆ. ದುಬೈನ ಬುರ್ಜ್ ಖಲೀಫಾ ಕಟ್ಟಡದ ಬಳಿಯಲ್ಲೂ ಸ್ಫೋಟದ ಸದ್ದು ಕೇಳಿದ್ದು ಜನರು ಆತಂಕಗೊಂಡಿದ್ದಾರೆ. ದುಬೈನಲ್ಲಿ ಕೇರಳ, ಕರ್ನಾಟಕದ ಅತಿ ಹೆಚ್ಚು ಜನರಿದ್ದಾರೆ. ಯುಎಇ ರಾಜಧಾನಿ ಅಬುಧಾಬಿಯಲ್ಲಿ ಸ್ಫೋಟದ ಸದ್ದು ಕೇಳಿದ್ದು ಹೊಗೆ ಎದ್ದಿರುವ ದೃಶ್ಯವನ್ನು ಸಿಎನ್ಎನ್ ಟಿವಿ ವರದಿ ಮಾಡಿದೆ.
ಅಬುಧಾಬಿಯ ವಸತಿ ಪ್ರದೇಶಕ್ಕೂ ಇರಾನ್ ಕ್ಷಿಪಣಿ ದಾಳಿಯಾಗಿದ್ದರಿಂದ ಅಲ್ಲಿನ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ. ಇದರ ನಂತರ, ದುಬೈನಲ್ಲಿ ವಿಮಾನ ಸಂಚಾರ ರದ್ದುಪಡಿಸಿದ್ದು ಏರ್ ಡಿಫೆನ್ಸ್ ಸಿಸ್ಟಮ್ ಸಿದ್ಧವಾಗಿಸಲಾಗಿದೆ. ಇರಾನ್ ದಾಳಿಯನ್ನು ಯುಎಇ ಸಚಿವಾಲಯ, ಹೇಡಿತನದ್ದು ಮತ್ತು ಅಪಾಯಕಾರಿ ನಡೆ ಎಂದು ಹೇಳಿದೆ. ದುಬೈ ಬಳಿಯ ಪ್ರಸಿದ್ಧ ಪ್ರವಾಸಿ ತಾಣ ಪಾಮ್ ಐಲ್ಯಾಂಡ್ ಬಳಿಯೂ ಬೆಂಕಿ ಮತ್ತು ಹೊಗೆ ಎದ್ದಿದ್ದು ಕ್ಷಿಪಣಿ ದಾಳಿಯಾದ ಬಗ್ಗೆ ಹೇಳಲಾಗುತ್ತಿದೆ.
ಅಮೆರಿಕ ಮತ್ತು ಇಸ್ರೇಲಿ ಪಡೆಗಳ ದಾಳಿಯು ಇರಾನ್ ನಾಯಕ ಅಲಿ ಖಮೇನಿ ಮತ್ತು ಅಧ್ಯಕ್ಷ ಮಸೂದ್ ಪಜೆಶ್ಕಿಯಾನ್ ಅವರನ್ನು ಗುರಿಯಾಗಿಸಿದ್ದು ಇರಾನ್ ದೇಶದ ಉತ್ತರ ದಕ್ಷಿಣವೆಂದು ಎಲ್ಲ ಕಡೆಯೂ ದಾಳಿಯಾಗಿದೆ. ಬಾಲಕಿಯರ ಶಾಲೆಗೂ ಬಾಂಬ್ ದಾಳಿಯಾಗಿದ್ದು, ಅಲ್ಲಿ 57 ಮಂದಿ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಒಟ್ಟು 85 ಮಂದಿ ಇರಾನ್ ಕಡೆಯಲ್ಲಿ ಸಾವು ಸಂಭವಿಸಿದೆ ಎನ್ನಲಾಗುತ್ತಿದೆ. ಶನಿವಾರದ ಇಸ್ರೇಲ್ ದಾಳಿಯಿಂದ ಅಲಿ ಖಮೇನಿ ಸಾವಾಗಿದೆ ಎಂದು ಹೇಳಲಾಗುತ್ತಿದ್ದರೂ ಇರಾನ್ ಇದನ್ನು ದೃಢಪಡಿಸಿಲ್ಲ. ಇರಾನ್ ವಿದೇಶ ಮಂತ್ರಿ ಅಬ್ಬಾಸ್ ಅರಾಗ್ಚಿ, ಖಮೇನಿ ಇನ್ನೂ ಜೀವಂತ ಇದ್ದಾರೆ ಎಂದಿದ್ದಾರೆ. ಇರಾನ್ ಮೇಲಿನ ದಾಳಿಯನ್ನು ರಷ್ಯಾ ಮತ್ತು ಚೀನಾ ಖಂಡಿಸಿವೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am