ಬ್ರೇಕಿಂಗ್ ನ್ಯೂಸ್
02-03-26 01:30 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 1: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ ಬೆನ್ನಲ್ಲೇ ಹಂಗಾಮಿ ಉತ್ತರಾಧಿಕಾರಿಯಾಗಿ ಖಮೇನಿ ಆಪ್ತನಾಗಿದ್ದ ಅಯತೊಲ್ಲಾ ಅಲಿರೆಜಾ ಅರಾಫಿ ಸುಪ್ರೀಂ ಲೀಡರ್ ಆಗಿದ್ದಾರೆ. ಖಮೇನಿಯವರ 37 ವರ್ಷಗಳ ಯುಗ ಅಂತ್ಯವಾಗಿದ್ದು, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ ಅವರು ಮುಂದಿನ ಆಯ್ಕೆ ವರೆಗೂ ದೇಶವನ್ನು ಮುನ್ನಡೆಸಲಿದ್ದಾರೆ.
ಇರಾನ್ ಸಂವಿಧಾನದ 111ನೇ ವಿಧಿಯ ಪ್ರಕಾರ ದೇಶದಲ್ಲಿ ಇದ್ದಕ್ಕಿದ್ದಂತೆ ಸರ್ವೋಚ್ಚ ನಾಯಕನ ಕೊರತೆ ಉಂಟಾದರೆ, ಶಾಶ್ವತ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವವರೆಗೆ ಸಂಪೂರ್ಣ ನಾಯಕತ್ವದ ಕರ್ತವ್ಯಗಳನ್ನು ವಹಿಸಿಕೊಳ್ಳಲು ತಾತ್ಕಾಲಿಕ ಮೂವರು ವ್ಯಕ್ತಿಗಳ ಮಂಡಳಿಯನ್ನು ರಚಿಸಬೇಕು. ಮಂಡಳಿಯ ಮುಖ್ಯಸ್ಥನೇ ಅಲ್ಲಿಯ ತನಕ ಸರ್ವೋಚ್ಚ ನಾಯಕನಾಗಿ ಕಾರ್ಯ ನಿರ್ವಹಿಸುತ್ತಾನೆ.
ನಿಯಮದ ಪ್ರಕಾರ, ಇರಾನ್ ನಾಯಕತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲು ತಾತ್ಕಾಲಿಕ ನ್ಯಾಯಮಂಡಳಿಯನ್ನು ನೇಮಿಸಲಾಗುತ್ತದೆ. ಇದರ ಮುಖ್ಯ ನ್ಯಾಯಶಾಸ್ತ್ರಜ್ಞ ಸದಸ್ಯರಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಕಾರ್ಯ ನಿರ್ವಹಿಸಲಿದ್ದಾರೆ. ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಮತ್ತು ಮುಖ್ಯ ನ್ಯಾಯಮೂರ್ತಿ ಘೋಲಮ್ಹೊಸೇನ್ ಮೊಹ್ಸೆನಿ ಸಹ ಮಂಡಳಿಯಲ್ಲಿ ಇರುತ್ತಾರೆ.
ಇರಾನ್ ಸಂಘರ್ಷದ ಪರಿಸ್ಥಿತಿಯಲ್ಲಿ ದೇಶವನ್ನು ಮುನ್ನಡೆಸುವ ಜೊತೆಗೆ ಖಮೇನಿ ಹತ್ಯೆಗೆ ಪ್ರತೀಕಾರ, ಮುಂದಿನ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡುವ ಕಾರ್ಯವನ್ನೂ ಮಾಡಲಿದ್ದಾರೆ. ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಹಕ್ಕನ್ನೂ ಅಲಿರೆಜಾ ಹೊಂದಲಿದ್ದಾರೆ.
ಅಯತೊಲ್ಲಾ ಅಲಿರೆಜಾ ಅರಾಫಿ 1959 ರಲ್ಲಿ ಜನಿಸಿದ್ದು ಈಗ 67 ವರ್ಷ. ಅಲಿರೆಜಾ ಅರಾಫಿ ಇರಾನಿನ ಇಸ್ಲಾಮಿಕ್ ರಿಪಬ್ಲಿಕ್ ಸ್ಥಾಪನೆಯಲ್ಲಿ ಪ್ರಮುಖರು. ಇಸ್ಲಾಮಿಕ್ ಸೆಮಿನರಿ ವ್ಯವಸ್ಥೆಯಲ್ಲಿ ನಿರ್ದೇಶಕರು. ಪ್ರಬಲ ಗಾರ್ಡಿಯನ್ ಕೌನ್ಸಿಲ್ನ ಪರಿಶೀಲನಾ ಸದಸ್ಯರು ಮತ್ತು ತಜ್ಞರ ಸಭೆಯ ಹಾಲಿ ಸದಸ್ಯರು. ಹೀಗೆ ಏಕಕಾಲಕ್ಕೆ ಮೂರು ಪ್ರಬಲ ಹುದ್ದೆಯಲ್ಲಿದ್ದರು. ಇವರನ್ನು ಇದರ ಮೊದಲೇ ಖಮೇನಿಯವರು ನೇಮಕ ಮಾಡಿದ್ದರು ಎನ್ನಲಾಗುತ್ತಿದೆ.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm