ಬ್ರೇಕಿಂಗ್ ನ್ಯೂಸ್
02-03-26 01:30 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 1: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ ಬೆನ್ನಲ್ಲೇ ಹಂಗಾಮಿ ಉತ್ತರಾಧಿಕಾರಿಯಾಗಿ ಖಮೇನಿ ಆಪ್ತನಾಗಿದ್ದ ಅಯತೊಲ್ಲಾ ಅಲಿರೆಜಾ ಅರಾಫಿ ಸುಪ್ರೀಂ ಲೀಡರ್ ಆಗಿದ್ದಾರೆ. ಖಮೇನಿಯವರ 37 ವರ್ಷಗಳ ಯುಗ ಅಂತ್ಯವಾಗಿದ್ದು, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ ಅವರು ಮುಂದಿನ ಆಯ್ಕೆ ವರೆಗೂ ದೇಶವನ್ನು ಮುನ್ನಡೆಸಲಿದ್ದಾರೆ.
ಇರಾನ್ ಸಂವಿಧಾನದ 111ನೇ ವಿಧಿಯ ಪ್ರಕಾರ ದೇಶದಲ್ಲಿ ಇದ್ದಕ್ಕಿದ್ದಂತೆ ಸರ್ವೋಚ್ಚ ನಾಯಕನ ಕೊರತೆ ಉಂಟಾದರೆ, ಶಾಶ್ವತ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವವರೆಗೆ ಸಂಪೂರ್ಣ ನಾಯಕತ್ವದ ಕರ್ತವ್ಯಗಳನ್ನು ವಹಿಸಿಕೊಳ್ಳಲು ತಾತ್ಕಾಲಿಕ ಮೂವರು ವ್ಯಕ್ತಿಗಳ ಮಂಡಳಿಯನ್ನು ರಚಿಸಬೇಕು. ಮಂಡಳಿಯ ಮುಖ್ಯಸ್ಥನೇ ಅಲ್ಲಿಯ ತನಕ ಸರ್ವೋಚ್ಚ ನಾಯಕನಾಗಿ ಕಾರ್ಯ ನಿರ್ವಹಿಸುತ್ತಾನೆ.
ನಿಯಮದ ಪ್ರಕಾರ, ಇರಾನ್ ನಾಯಕತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲು ತಾತ್ಕಾಲಿಕ ನ್ಯಾಯಮಂಡಳಿಯನ್ನು ನೇಮಿಸಲಾಗುತ್ತದೆ. ಇದರ ಮುಖ್ಯ ನ್ಯಾಯಶಾಸ್ತ್ರಜ್ಞ ಸದಸ್ಯರಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಕಾರ್ಯ ನಿರ್ವಹಿಸಲಿದ್ದಾರೆ. ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಮತ್ತು ಮುಖ್ಯ ನ್ಯಾಯಮೂರ್ತಿ ಘೋಲಮ್ಹೊಸೇನ್ ಮೊಹ್ಸೆನಿ ಸಹ ಮಂಡಳಿಯಲ್ಲಿ ಇರುತ್ತಾರೆ.
ಇರಾನ್ ಸಂಘರ್ಷದ ಪರಿಸ್ಥಿತಿಯಲ್ಲಿ ದೇಶವನ್ನು ಮುನ್ನಡೆಸುವ ಜೊತೆಗೆ ಖಮೇನಿ ಹತ್ಯೆಗೆ ಪ್ರತೀಕಾರ, ಮುಂದಿನ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡುವ ಕಾರ್ಯವನ್ನೂ ಮಾಡಲಿದ್ದಾರೆ. ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಹಕ್ಕನ್ನೂ ಅಲಿರೆಜಾ ಹೊಂದಲಿದ್ದಾರೆ.
ಅಯತೊಲ್ಲಾ ಅಲಿರೆಜಾ ಅರಾಫಿ 1959 ರಲ್ಲಿ ಜನಿಸಿದ್ದು ಈಗ 67 ವರ್ಷ. ಅಲಿರೆಜಾ ಅರಾಫಿ ಇರಾನಿನ ಇಸ್ಲಾಮಿಕ್ ರಿಪಬ್ಲಿಕ್ ಸ್ಥಾಪನೆಯಲ್ಲಿ ಪ್ರಮುಖರು. ಇಸ್ಲಾಮಿಕ್ ಸೆಮಿನರಿ ವ್ಯವಸ್ಥೆಯಲ್ಲಿ ನಿರ್ದೇಶಕರು. ಪ್ರಬಲ ಗಾರ್ಡಿಯನ್ ಕೌನ್ಸಿಲ್ನ ಪರಿಶೀಲನಾ ಸದಸ್ಯರು ಮತ್ತು ತಜ್ಞರ ಸಭೆಯ ಹಾಲಿ ಸದಸ್ಯರು. ಹೀಗೆ ಏಕಕಾಲಕ್ಕೆ ಮೂರು ಪ್ರಬಲ ಹುದ್ದೆಯಲ್ಲಿದ್ದರು. ಇವರನ್ನು ಇದರ ಮೊದಲೇ ಖಮೇನಿಯವರು ನೇಮಕ ಮಾಡಿದ್ದರು ಎನ್ನಲಾಗುತ್ತಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:48 pm
HK News Staffer
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm