ಬ್ರೇಕಿಂಗ್ ನ್ಯೂಸ್
02-03-26 03:10 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್ ನಾಯಕ ಅಯತೊಲ್ಲಾ ಅಲ್ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಶಿಯಾ ಮುಸ್ಲಿಮರು ಭಾರೀ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದು ಪ್ರತಿಭಟನೆಗೆ ನಿರ್ಬಂಧ ವಿಧಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 15 ಲಕ್ಷಕ್ಕೂ ಹೆಚ್ಚು ಶಿಯಾ ಮುಸ್ಲಿಮರಿದ್ದಾರೆ.
ಕಾಶ್ಮೀರದಲ್ಲಿ ಹಲವು ಕಡೆ ಪ್ರತಿಭಟನೆಗೆ ನಿರ್ಬಂಧ ಹೇಳಲಾಗಿದೆ. ಅಲ್ಲದೆ,ಭಾರೀ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಘಂಟಾ ಘರ್ ನಲ್ಲಿ ಪೊಲೀಸರು ರಸ್ತೆಗೆ ಅಲ್ಲಲ್ಲಿ ತಡೆಬೇಲಿ ಹಾಕಿದ್ದಾರೆ. ನಗರದಲ್ಲಿ ಪ್ರತಿಭಟನೆ ತಪ್ಪಿಸಲು ಪೊಲೀಸ್ ಮತ್ತು ಸಿಆರ್ ಪಿಎಫ್ ನಿಯೋಜಿಸಲಾಗಿದೆ. ಖಮೇನಿ ಹತ್ಯೆ ಬಳಿಕ ಕಾಶ್ಮೀರದ ಅನಂತನಾಗ್, ಬುದ್ಗಾಂವ್, ಸೈದಾ ಕಡಲ್, ಲಾಲ್ ಚೌಕ, ಬಂಡೀಪುರ್, ಪುಲ್ವಾಮಾದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದವು.

ಪ್ರತಿಭಟನೆಗಿಳಿದ ಜನರು ತಮ್ಮ ಎದೆಗೆ ಚಾಟಿಯಿಂದ ಹೊಡೆಯುತ್ತ ಇಸ್ರೇಲ್- ಅಮೆರಿಕ ವಿರುದ್ಧ ಘೋಷಣೆ ಕೂಗಿದ್ದಾರೆ. ಇದೀಗ ಶಿಯಾ ಪ್ರಾಬಲ್ಯ ಇರುವಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದಾರೆ. ಲಾಲ್ ಚೌಕ್ ನಗರವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಅಲ್ಲದೆ, ಕಾಶ್ಮೀರ ಕಣಿವೆಯಲ್ಲಿ ಮೊಬೈಲ್ ಇಂಟರ್ನೆಟ್ ವೇಗಕ್ಕೆ ನಿಯಂತ್ರಣ ಹೇರಲಾಗಿದ್ದು ವೈರಲ್ ವಿಡಿಯೋಗಳಿಂದ ಜನರು ಉದ್ರೇಕಗೊಳ್ಳದಂತೆ ತಡೆಯುವ ಕೆಲಸ ಮಾಡಿದ್ದಾರೆ. ಶ್ರೀನಗರದಲ್ಲಿಯೂ ನಿರ್ಬಂಧ ಹೇರಲಾಗಿದೆ. ಇದೇ ವೇಳೆ, ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಅವರು ಕಾಶ್ಮೀರಿ ಜನರಿಗೆ ತಮ್ಮ ಶೋಕಾಚರಣೆ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಹೇಳಿದ್ದಾರೆ.
ಮುತಾಹಿದ್ ಮಜ್ಲಿಸ್ ಉಲಮಾ ಸಂಘಟನೆ, ಮೆಹಬೂಬ ಮುಫ್ತಿ ಅವರ ಪಿಡಿಪಿ ಮುಷ್ಕರಕ್ಕೆ ಕರೆಕೊಟ್ಟ ಹಿನ್ನೆಲೆಯಲ್ಲಿ ಪೊಲೀಸರು ನಿರ್ಬಂಧಗಳನ್ನು ವಿಧಿಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm