ಬ್ರೇಕಿಂಗ್ ನ್ಯೂಸ್
02-03-26 03:10 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್ ನಾಯಕ ಅಯತೊಲ್ಲಾ ಅಲ್ ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಶಿಯಾ ಮುಸ್ಲಿಮರು ಭಾರೀ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದು ಪ್ರತಿಭಟನೆಗೆ ನಿರ್ಬಂಧ ವಿಧಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 15 ಲಕ್ಷಕ್ಕೂ ಹೆಚ್ಚು ಶಿಯಾ ಮುಸ್ಲಿಮರಿದ್ದಾರೆ.
ಕಾಶ್ಮೀರದಲ್ಲಿ ಹಲವು ಕಡೆ ಪ್ರತಿಭಟನೆಗೆ ನಿರ್ಬಂಧ ಹೇಳಲಾಗಿದೆ. ಅಲ್ಲದೆ,ಭಾರೀ ಪ್ರತಿಭಟನೆಗೆ ಸಾಕ್ಷಿಯಾಗಿದ್ದ ಘಂಟಾ ಘರ್ ನಲ್ಲಿ ಪೊಲೀಸರು ರಸ್ತೆಗೆ ಅಲ್ಲಲ್ಲಿ ತಡೆಬೇಲಿ ಹಾಕಿದ್ದಾರೆ. ನಗರದಲ್ಲಿ ಪ್ರತಿಭಟನೆ ತಪ್ಪಿಸಲು ಪೊಲೀಸ್ ಮತ್ತು ಸಿಆರ್ ಪಿಎಫ್ ನಿಯೋಜಿಸಲಾಗಿದೆ. ಖಮೇನಿ ಹತ್ಯೆ ಬಳಿಕ ಕಾಶ್ಮೀರದ ಅನಂತನಾಗ್, ಬುದ್ಗಾಂವ್, ಸೈದಾ ಕಡಲ್, ಲಾಲ್ ಚೌಕ, ಬಂಡೀಪುರ್, ಪುಲ್ವಾಮಾದಲ್ಲಿ ಭಾರೀ ಪ್ರತಿಭಟನೆ ನಡೆದಿದ್ದವು.

ಪ್ರತಿಭಟನೆಗಿಳಿದ ಜನರು ತಮ್ಮ ಎದೆಗೆ ಚಾಟಿಯಿಂದ ಹೊಡೆಯುತ್ತ ಇಸ್ರೇಲ್- ಅಮೆರಿಕ ವಿರುದ್ಧ ಘೋಷಣೆ ಕೂಗಿದ್ದಾರೆ. ಇದೀಗ ಶಿಯಾ ಪ್ರಾಬಲ್ಯ ಇರುವಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದಾರೆ. ಲಾಲ್ ಚೌಕ್ ನಗರವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಅಲ್ಲದೆ, ಕಾಶ್ಮೀರ ಕಣಿವೆಯಲ್ಲಿ ಮೊಬೈಲ್ ಇಂಟರ್ನೆಟ್ ವೇಗಕ್ಕೆ ನಿಯಂತ್ರಣ ಹೇರಲಾಗಿದ್ದು ವೈರಲ್ ವಿಡಿಯೋಗಳಿಂದ ಜನರು ಉದ್ರೇಕಗೊಳ್ಳದಂತೆ ತಡೆಯುವ ಕೆಲಸ ಮಾಡಿದ್ದಾರೆ. ಶ್ರೀನಗರದಲ್ಲಿಯೂ ನಿರ್ಬಂಧ ಹೇರಲಾಗಿದೆ. ಇದೇ ವೇಳೆ, ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಅವರು ಕಾಶ್ಮೀರಿ ಜನರಿಗೆ ತಮ್ಮ ಶೋಕಾಚರಣೆ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಹೇಳಿದ್ದಾರೆ.
ಮುತಾಹಿದ್ ಮಜ್ಲಿಸ್ ಉಲಮಾ ಸಂಘಟನೆ, ಮೆಹಬೂಬ ಮುಫ್ತಿ ಅವರ ಪಿಡಿಪಿ ಮುಷ್ಕರಕ್ಕೆ ಕರೆಕೊಟ್ಟ ಹಿನ್ನೆಲೆಯಲ್ಲಿ ಪೊಲೀಸರು ನಿರ್ಬಂಧಗಳನ್ನು ವಿಧಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am