ಬ್ರೇಕಿಂಗ್ ನ್ಯೂಸ್
02-03-26 06:51 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್- ಇಸ್ರೇಲ್ ಸಂಘರ್ಷ ಜೋರಾಗಿದ್ದು ಎರಡು ಕಡೆಗಳಿಂದಲೂ ಪರಸ್ಪರ ಮಿಸೈಲ್ ದಾಳಿಯಾಗುತ್ತಿದೆ. ಈ ನಡುವೆ, ಇರಾನ್ ನಲ್ಲಿ ಹೊಸತಾಗಿ ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ ಅಲಿರೆಝಾ ಅರಾಫಿ ಅವರನ್ನೂ ಮಿಸೈಲ್ ದಾಳಿಯಿಂದ ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಬಂದಿದೆ. ಈವರೆಗಿನ ದಾಳಿಯಲ್ಲಿ ಇರಾನಿನಲ್ಲಿ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.
ಹಂಗಾಮಿ ಸರ್ವೋಚ್ಛ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ ಈ ಸುದ್ದಿಯನ್ನು ಅಂತಾರಾಷ್ಟ್ರೀಯ ಮಟ್ಟದ ಮಾಧ್ಯಮಗಳು ದೃಢಪಡಿಸಿಲ್ಲ. ಇರಾನ್ ಅಥವಾ ಇಸ್ರೇಲ್ ಕಡೆಯಿಂದಲೂ ಈ ಸುದ್ದಿಯನ್ನು ಪುಷ್ಟೀಕರಿಸಿಲ್ಲ. ಆದರೆ ಅರಾಫಿ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಜೋರಾಗಿಯೇ ಸದ್ದು ಮಾಡಿದೆ.
ಮೊನ್ನೆ ಫೆ.28ರಂದು ಹಠಾತ್ತಾಗಿ ಇರಾನ್ ಮೇಲೆ ದಾಳಿ ನಡೆಸಿದ ಇಸ್ರೇಲ್ ಮಿಸೈಲ್ ಗಳು ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯವರನ್ನು ಹತ್ಯೆ ಮಾಡಿತ್ತು. ಆದರೆ ಹತ್ಯೆಯಾದ ಸುದ್ದಿ ಮೊದಲು ದೃಢಪಡಿಸಿರಲಿಲ್ಲ. ಇಸ್ರೇಲ್ ಗುಪ್ತಚರ ಪಡೆಗಳು ಖಚಿತಪಡಿಸಿದ ಬಳಿಕವೇ ಇರಾನ್ ಮಾಧ್ಯಮಗಳು ಕೂಡ ಖಮೇನಿ ಸಾವಾಗಿದ್ದನ್ನು ಹೇಳಿದ್ದವು. ಅಲಿ ಖಮೇನಿ ಹತ್ಯೆ ಬೆನ್ನಲ್ಲೇ ಹಿರಿಯ ಧರ್ಮಗುರು ಮತ್ತು ಖಮೇನಿ ಆಪ್ತರಾಗಿದ್ದ ಅಲಿರೆಝಾ ಅರಾಫಿ ಅವರನ್ನು ಪರಮೋಚ್ಛ ನಾಯಕರನ್ನಾಗಿ ನೇಮಿಸಲಾಗಿತ್ತು.
ಮುಂದಿನ ಸರ್ವೋಚ್ಛ ನಾಯಕನ ಆಯ್ಕೆ ಆಗುವ ವರೆಗೂ ಅರಾಫಿ ಅವರೇ ದೇಶವನ್ನು ಮುನ್ನಡೆಸಲಿದ್ದಾರೆ ಎನ್ನುವ ಸಂದೇಶ ಬಂದಿತ್ತು. ಅಲಿ ಖಮೇನಿ 1989ರಿಂದ ಇರಾನ್ ದೇಶದ ಸರ್ವೋಚ್ಛ ನಾಯಕರಾಗಿ ಅಧಿಕಾರದಲ್ಲಿದ್ದರು.
ಈ ವೇಳೆ, ಸರ್ವಾಧಿಕಾರಿ ಧೋರಣೆ ಹೊಂದಿದ್ದರು, ಹಲವರ ಹತ್ಯೆಗೆ ಕಾರಣವಾಗಿದ್ದರು ಎನ್ನುವ ಆರೋಪಗಳಿದ್ದವು. ಖಮೇನಿ ಅವರು ಅಧಿಕಾರ ತ್ಯಜಿಸಬೇಕೆಂದು ಅಲ್ಲಿನದ್ದೇ ಜನರು ಹಲವು ತಿಂಗಳುಗಳಿಂದ ಪ್ರತಿಭಟನೆಯನ್ನೂ ನಡೆಸಿದ್ದರು. ಇದೀಗ ಖಮೇನಿ ಅವರನ್ನು ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am