ಬ್ರೇಕಿಂಗ್ ನ್ಯೂಸ್
02-03-26 06:51 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್- ಇಸ್ರೇಲ್ ಸಂಘರ್ಷ ಜೋರಾಗಿದ್ದು ಎರಡು ಕಡೆಗಳಿಂದಲೂ ಪರಸ್ಪರ ಮಿಸೈಲ್ ದಾಳಿಯಾಗುತ್ತಿದೆ. ಈ ನಡುವೆ, ಇರಾನ್ ನಲ್ಲಿ ಹೊಸತಾಗಿ ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ ಅಲಿರೆಝಾ ಅರಾಫಿ ಅವರನ್ನೂ ಮಿಸೈಲ್ ದಾಳಿಯಿಂದ ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಬಂದಿದೆ. ಈವರೆಗಿನ ದಾಳಿಯಲ್ಲಿ ಇರಾನಿನಲ್ಲಿ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.
ಹಂಗಾಮಿ ಸರ್ವೋಚ್ಛ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ ಈ ಸುದ್ದಿಯನ್ನು ಅಂತಾರಾಷ್ಟ್ರೀಯ ಮಟ್ಟದ ಮಾಧ್ಯಮಗಳು ದೃಢಪಡಿಸಿಲ್ಲ. ಇರಾನ್ ಅಥವಾ ಇಸ್ರೇಲ್ ಕಡೆಯಿಂದಲೂ ಈ ಸುದ್ದಿಯನ್ನು ಪುಷ್ಟೀಕರಿಸಿಲ್ಲ. ಆದರೆ ಅರಾಫಿ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಜೋರಾಗಿಯೇ ಸದ್ದು ಮಾಡಿದೆ.
ಮೊನ್ನೆ ಫೆ.28ರಂದು ಹಠಾತ್ತಾಗಿ ಇರಾನ್ ಮೇಲೆ ದಾಳಿ ನಡೆಸಿದ ಇಸ್ರೇಲ್ ಮಿಸೈಲ್ ಗಳು ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯವರನ್ನು ಹತ್ಯೆ ಮಾಡಿತ್ತು. ಆದರೆ ಹತ್ಯೆಯಾದ ಸುದ್ದಿ ಮೊದಲು ದೃಢಪಡಿಸಿರಲಿಲ್ಲ. ಇಸ್ರೇಲ್ ಗುಪ್ತಚರ ಪಡೆಗಳು ಖಚಿತಪಡಿಸಿದ ಬಳಿಕವೇ ಇರಾನ್ ಮಾಧ್ಯಮಗಳು ಕೂಡ ಖಮೇನಿ ಸಾವಾಗಿದ್ದನ್ನು ಹೇಳಿದ್ದವು. ಅಲಿ ಖಮೇನಿ ಹತ್ಯೆ ಬೆನ್ನಲ್ಲೇ ಹಿರಿಯ ಧರ್ಮಗುರು ಮತ್ತು ಖಮೇನಿ ಆಪ್ತರಾಗಿದ್ದ ಅಲಿರೆಝಾ ಅರಾಫಿ ಅವರನ್ನು ಪರಮೋಚ್ಛ ನಾಯಕರನ್ನಾಗಿ ನೇಮಿಸಲಾಗಿತ್ತು.
ಮುಂದಿನ ಸರ್ವೋಚ್ಛ ನಾಯಕನ ಆಯ್ಕೆ ಆಗುವ ವರೆಗೂ ಅರಾಫಿ ಅವರೇ ದೇಶವನ್ನು ಮುನ್ನಡೆಸಲಿದ್ದಾರೆ ಎನ್ನುವ ಸಂದೇಶ ಬಂದಿತ್ತು. ಅಲಿ ಖಮೇನಿ 1989ರಿಂದ ಇರಾನ್ ದೇಶದ ಸರ್ವೋಚ್ಛ ನಾಯಕರಾಗಿ ಅಧಿಕಾರದಲ್ಲಿದ್ದರು.
ಈ ವೇಳೆ, ಸರ್ವಾಧಿಕಾರಿ ಧೋರಣೆ ಹೊಂದಿದ್ದರು, ಹಲವರ ಹತ್ಯೆಗೆ ಕಾರಣವಾಗಿದ್ದರು ಎನ್ನುವ ಆರೋಪಗಳಿದ್ದವು. ಖಮೇನಿ ಅವರು ಅಧಿಕಾರ ತ್ಯಜಿಸಬೇಕೆಂದು ಅಲ್ಲಿನದ್ದೇ ಜನರು ಹಲವು ತಿಂಗಳುಗಳಿಂದ ಪ್ರತಿಭಟನೆಯನ್ನೂ ನಡೆಸಿದ್ದರು. ಇದೀಗ ಖಮೇನಿ ಅವರನ್ನು ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm