ಬ್ರೇಕಿಂಗ್ ನ್ಯೂಸ್
02-03-26 06:51 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಇರಾನ್- ಇಸ್ರೇಲ್ ಸಂಘರ್ಷ ಜೋರಾಗಿದ್ದು ಎರಡು ಕಡೆಗಳಿಂದಲೂ ಪರಸ್ಪರ ಮಿಸೈಲ್ ದಾಳಿಯಾಗುತ್ತಿದೆ. ಈ ನಡುವೆ, ಇರಾನ್ ನಲ್ಲಿ ಹೊಸತಾಗಿ ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ ಅಲಿರೆಝಾ ಅರಾಫಿ ಅವರನ್ನೂ ಮಿಸೈಲ್ ದಾಳಿಯಿಂದ ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಬಂದಿದೆ. ಈವರೆಗಿನ ದಾಳಿಯಲ್ಲಿ ಇರಾನಿನಲ್ಲಿ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.
ಹಂಗಾಮಿ ಸರ್ವೋಚ್ಛ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿದೆ ಎನ್ನುವ ಸುದ್ದಿ ಹರಿದಾಡಿದೆ. ಆದರೆ ಈ ಸುದ್ದಿಯನ್ನು ಅಂತಾರಾಷ್ಟ್ರೀಯ ಮಟ್ಟದ ಮಾಧ್ಯಮಗಳು ದೃಢಪಡಿಸಿಲ್ಲ. ಇರಾನ್ ಅಥವಾ ಇಸ್ರೇಲ್ ಕಡೆಯಿಂದಲೂ ಈ ಸುದ್ದಿಯನ್ನು ಪುಷ್ಟೀಕರಿಸಿಲ್ಲ. ಆದರೆ ಅರಾಫಿ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ಜೋರಾಗಿಯೇ ಸದ್ದು ಮಾಡಿದೆ.
ಮೊನ್ನೆ ಫೆ.28ರಂದು ಹಠಾತ್ತಾಗಿ ಇರಾನ್ ಮೇಲೆ ದಾಳಿ ನಡೆಸಿದ ಇಸ್ರೇಲ್ ಮಿಸೈಲ್ ಗಳು ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯವರನ್ನು ಹತ್ಯೆ ಮಾಡಿತ್ತು. ಆದರೆ ಹತ್ಯೆಯಾದ ಸುದ್ದಿ ಮೊದಲು ದೃಢಪಡಿಸಿರಲಿಲ್ಲ. ಇಸ್ರೇಲ್ ಗುಪ್ತಚರ ಪಡೆಗಳು ಖಚಿತಪಡಿಸಿದ ಬಳಿಕವೇ ಇರಾನ್ ಮಾಧ್ಯಮಗಳು ಕೂಡ ಖಮೇನಿ ಸಾವಾಗಿದ್ದನ್ನು ಹೇಳಿದ್ದವು. ಅಲಿ ಖಮೇನಿ ಹತ್ಯೆ ಬೆನ್ನಲ್ಲೇ ಹಿರಿಯ ಧರ್ಮಗುರು ಮತ್ತು ಖಮೇನಿ ಆಪ್ತರಾಗಿದ್ದ ಅಲಿರೆಝಾ ಅರಾಫಿ ಅವರನ್ನು ಪರಮೋಚ್ಛ ನಾಯಕರನ್ನಾಗಿ ನೇಮಿಸಲಾಗಿತ್ತು.
ಮುಂದಿನ ಸರ್ವೋಚ್ಛ ನಾಯಕನ ಆಯ್ಕೆ ಆಗುವ ವರೆಗೂ ಅರಾಫಿ ಅವರೇ ದೇಶವನ್ನು ಮುನ್ನಡೆಸಲಿದ್ದಾರೆ ಎನ್ನುವ ಸಂದೇಶ ಬಂದಿತ್ತು. ಅಲಿ ಖಮೇನಿ 1989ರಿಂದ ಇರಾನ್ ದೇಶದ ಸರ್ವೋಚ್ಛ ನಾಯಕರಾಗಿ ಅಧಿಕಾರದಲ್ಲಿದ್ದರು.
ಈ ವೇಳೆ, ಸರ್ವಾಧಿಕಾರಿ ಧೋರಣೆ ಹೊಂದಿದ್ದರು, ಹಲವರ ಹತ್ಯೆಗೆ ಕಾರಣವಾಗಿದ್ದರು ಎನ್ನುವ ಆರೋಪಗಳಿದ್ದವು. ಖಮೇನಿ ಅವರು ಅಧಿಕಾರ ತ್ಯಜಿಸಬೇಕೆಂದು ಅಲ್ಲಿನದ್ದೇ ಜನರು ಹಲವು ತಿಂಗಳುಗಳಿಂದ ಪ್ರತಿಭಟನೆಯನ್ನೂ ನಡೆಸಿದ್ದರು. ಇದೀಗ ಖಮೇನಿ ಅವರನ್ನು ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm