ಬ್ರೇಕಿಂಗ್ ನ್ಯೂಸ್
02-03-26 09:23 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡ ಯುದ್ಧ ಸ್ಥಿತಿಯ ಪರಿಣಾಮ ಅಂತಾರಾಷ್ಟ್ರೀಯ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರೀ ಸಂಚಲನ ಉಂಟಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರಲ್ಗೆ 80 ಡಾಲರ್ ದಾಟಿದ್ದು, ಹಲವು ತಿಂಗಳ ಬಳಿಕ ಗರಿಷ್ಠ ಮಟ್ಟ ತಲುಪಿದೆ.
ಭಾರತ ತನ್ನ ಅಗತ್ಯದ ಬಹುಪಾಲು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಇರಾನ್ ಹಾಗೂ ಕೊಲ್ಲಿ ರಾಷ್ಟ್ರಗಳು ಪ್ರಮುಖ ಪೂರೈಕೆದಾರರು. ದೇಶದ ಒಟ್ಟಾರೆ ಆಮದುಗಳಲ್ಲಿ ತೈಲ ಮತ್ತು ಚಿನ್ನದ ಪಾಲು ಹೆಚ್ಚಿರುವುದರಿಂದ ಕರೆಂಟ್ ಅಕೌಂಟ್ ಡೆಫಿಸಿಟ್ ಈಗಾಗಲೇ ಉನ್ನತ ಮಟ್ಟದಲ್ಲಿದೆ. ಕಚ್ಚಾ ತೈಲದ ಬೆಲೆ ಏರಿಕೆಯಿಂದ ಆಮದು ವೆಚ್ಚವೂ ಏರಿಕೆಯಾಗಿದ್ದು, ಸಿಎಡಿ ಇನ್ನಷ್ಟು ವಿಸ್ತರಿಸುವ ಸಾಧ್ಯತೆ ಇದೆ.
ತಜ್ಞರ ಪ್ರಕಾರ, ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆಯಲ್ಲಿ 1 ಡಾಲರ್ ಏರಿದರೆ ಭಾರತಕ್ಕೆ ವಾರ್ಷಿಕವಾಗಿ ಸುಮಾರು 2 ಬಿಲಿಯನ್ ಡಾಲರ್ ಹೆಚ್ಚುವರಿ ಹೊರೆ ಬೀಳುತ್ತದೆ. ಇದು ಭಾರತೀಯ ಕರೆನ್ಸಿಯಲ್ಲಿ ಅಂದಾಜು 19,000 ಕೋಟಿ ರೂಪಾಯಿಗೆ ಸಮವಾಗಿದೆ.
ಹಾರ್ಮುಜ್ ಜಲಸಂಧಿ ಮಹತ್ವ
ಭಾರತ ತನ್ನ ತೈಲ ಅಗತ್ಯದ ಶೇ.50ಕ್ಕೂ ಹೆಚ್ಚು ಭಾಗವನ್ನು ಇರಾನ್ ಹಾಗೂ ಕೊಲ್ಲಿ ರಾಷ್ಟ್ರಗಳಿಂದ ಪಡೆಯುತ್ತದೆ. ಶೇ.35ರಿಂದ 50ರಷ್ಟು ತೈಲವು ಮಧ್ಯಪ್ರಾಚ್ಯದ ಹಾರ್ಮುಜ್ ಜಲಸಂಧಿ ಮೂಲಕ ಬರುತ್ತದೆ. ಈ ಮಾರ್ಗದಲ್ಲಿ ಯಾವುದೇ ವ್ಯತ್ಯಯ ಉಂಟಾದರೆ ಪೂರೈಕೆ ತೊಂದರೆಗೊಳಗಾಗಿ ಬೆಲೆಗಳು ಮತ್ತಷ್ಟು ಏರುತ್ತದೆ.
ರಷ್ಯಾ ಮತ್ತು ಅಮೆರಿಕದಿಂದಲೂ ಭಾರತ ತೈಲ ಪೂರೈಕೆ ಪಡೆಯುತ್ತಿದ್ದು ದೊಡ್ಡ ಆತಂಕ ಉಂಟಾಗದು. ಆದರೂ ಒಟ್ಟು ಅಂದಾಜು ಪ್ರಕಾರ, ಪ್ರಸ್ತುತ 80 ಡಾಲರ್ ಮಟ್ಟದಲ್ಲಿರುವ ಬ್ರೆಂಟ್ ಬೆಲೆ ಮುಂದಿನ ದಿನಗಳಲ್ಲಿ 100 ರಿಂದ 110 ಡಾಲರ್ ಗಡಿಗೂ ಏರಬಹುದೆಂಬ ನಿರೀಕ್ಷೆ ವ್ಯಕ್ತವಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm