ಬ್ರೇಕಿಂಗ್ ನ್ಯೂಸ್
04-03-26 10:03 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಶ್ರೀಲಂಕಾ ಬಳಿ ತನ್ನ ನೌಕೆಯ ಮೇಲಿನ ದಾಳಿ ಬೆನ್ನಲ್ಲೇ ಹಿಂದೂ ಮಹಾಸಾಗರದಲ್ಲಿ ತನ್ನ ಕರಾವಳಿಯಿಂದ ಸುಮಾರು 650 ಕಿಮೀ ದೂರದಲ್ಲಿದ್ದ ಅಮೆರಿಕದ ಯುದ್ಧನೌಕೆಯ ಮೇಲೆ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿಕೊಂಡಿದೆ. ಆದರೆ ಇದರ ಬಗ್ಗೆ ಅಮೆರಿಕ ಯಾವುದೇ ಮಾಹಿತಿ ನೀಡಿಲ್ಲ.
ಶ್ರೀಲಂಕಾ ಕರಾವಳಿಯಲ್ಲಿ ಇರಾನಿನ ಹಡಗಿನ ಮೇಲೆ ಬುಧವಾರ ಬೆಳಗ್ಗೆ ಜಲಾಂತರ್ಗಾಮಿ ಮೂಲಕ ದಾಳಿ ನಡೆಸಲಾಗಿದ್ದು, ಅದರಲ್ಲಿದ್ದ ಕನಿಷ್ಠ 101 ಯೋಧರು ಕಾಣೆಯಾಗಿದ್ದಾರೆ. 78 ಜನ ಗಾಯಗೊಂಡಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ. ಇರಾನಿನ ಐರಿಸ್ ದೇನಾ ಹೆಸರಿನ ನೌಕಾಪಡೆಯ ಯುದ್ಧನೌಕೆ ಇದಾಗಿದ್ದು, ಫೆಬ್ರವರಿ ಮಧ್ಯದಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಭಾರತೀಯ ನೌಕಾಪಡೆಯ ಅಂತರರಾಷ್ಟ್ರೀಯ ಫ್ಲೀಟ್ ರಿವ್ಯೂ(IFR) ಮತ್ತು ಬಹುರಾಷ್ಟ್ರೀಯ ಕಾರ್ಯಾಚರಣೆ ಮಿಲನ್ನಲ್ಲಿ ಭಾಗವಹಿಸಿತ್ತು. ಭಾರತ ಆಯೋಜಿಸಿದ್ದ ನೌಕಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ ನಂತರ ಇರಾನ್ಗೆ ಹಿಂದಿರುಗುತ್ತಿದ್ದ ವೇಳೆ ಅಮೆರಿಕ ದಾಳಿ ನಡೆಸಿದೆ. ಅದರಲ್ಲಿದ್ದ ಹಲವರನ್ನು ಶ್ರೀಲಂಕಾ ಸೇನೆ ರಕ್ಷಣೆ ಮಾಡಿದೆ.
ಇದೇ ವೇಳೆ, ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶವನ್ನು ನಾವು ಹೊಂದಿಲ್ಲ. ಸಾಧ್ಯವಿರುವಷ್ಟು ಕಾಲ ಯುದ್ಧವನ್ನು ಮುಂದುವರಿಸುತ್ತೇವೆ ಎಂದು ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹಿರಿಯ ಸಹಾಯಕ ಮೊಹಮ್ಮದ್ ಮೊಖ್ಬರ್ ತಿಳಿಸಿದ್ದಾರೆ. "ಅಮೆರಿಕನ್ನರ ಮೇಲೆ ನಮಗೆ ನಂಬಿಕೆ ಇಲ್ಲ. ಅವರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ನಾವು ಬಯಸಿದಷ್ಟು ಕಾಲ ಯುದ್ಧವನ್ನು ಮುಂದುವರಿಸಬಹುದು" ಎಂದು ಅವರು ಹೇಳಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm