ಬ್ರೇಕಿಂಗ್ ನ್ಯೂಸ್
04-03-26 10:03 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಶ್ರೀಲಂಕಾ ಬಳಿ ತನ್ನ ನೌಕೆಯ ಮೇಲಿನ ದಾಳಿ ಬೆನ್ನಲ್ಲೇ ಹಿಂದೂ ಮಹಾಸಾಗರದಲ್ಲಿ ತನ್ನ ಕರಾವಳಿಯಿಂದ ಸುಮಾರು 650 ಕಿಮೀ ದೂರದಲ್ಲಿದ್ದ ಅಮೆರಿಕದ ಯುದ್ಧನೌಕೆಯ ಮೇಲೆ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿಕೊಂಡಿದೆ. ಆದರೆ ಇದರ ಬಗ್ಗೆ ಅಮೆರಿಕ ಯಾವುದೇ ಮಾಹಿತಿ ನೀಡಿಲ್ಲ.
ಶ್ರೀಲಂಕಾ ಕರಾವಳಿಯಲ್ಲಿ ಇರಾನಿನ ಹಡಗಿನ ಮೇಲೆ ಬುಧವಾರ ಬೆಳಗ್ಗೆ ಜಲಾಂತರ್ಗಾಮಿ ಮೂಲಕ ದಾಳಿ ನಡೆಸಲಾಗಿದ್ದು, ಅದರಲ್ಲಿದ್ದ ಕನಿಷ್ಠ 101 ಯೋಧರು ಕಾಣೆಯಾಗಿದ್ದಾರೆ. 78 ಜನ ಗಾಯಗೊಂಡಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ. ಇರಾನಿನ ಐರಿಸ್ ದೇನಾ ಹೆಸರಿನ ನೌಕಾಪಡೆಯ ಯುದ್ಧನೌಕೆ ಇದಾಗಿದ್ದು, ಫೆಬ್ರವರಿ ಮಧ್ಯದಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಭಾರತೀಯ ನೌಕಾಪಡೆಯ ಅಂತರರಾಷ್ಟ್ರೀಯ ಫ್ಲೀಟ್ ರಿವ್ಯೂ(IFR) ಮತ್ತು ಬಹುರಾಷ್ಟ್ರೀಯ ಕಾರ್ಯಾಚರಣೆ ಮಿಲನ್ನಲ್ಲಿ ಭಾಗವಹಿಸಿತ್ತು. ಭಾರತ ಆಯೋಜಿಸಿದ್ದ ನೌಕಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ ನಂತರ ಇರಾನ್ಗೆ ಹಿಂದಿರುಗುತ್ತಿದ್ದ ವೇಳೆ ಅಮೆರಿಕ ದಾಳಿ ನಡೆಸಿದೆ. ಅದರಲ್ಲಿದ್ದ ಹಲವರನ್ನು ಶ್ರೀಲಂಕಾ ಸೇನೆ ರಕ್ಷಣೆ ಮಾಡಿದೆ.
ಇದೇ ವೇಳೆ, ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶವನ್ನು ನಾವು ಹೊಂದಿಲ್ಲ. ಸಾಧ್ಯವಿರುವಷ್ಟು ಕಾಲ ಯುದ್ಧವನ್ನು ಮುಂದುವರಿಸುತ್ತೇವೆ ಎಂದು ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹಿರಿಯ ಸಹಾಯಕ ಮೊಹಮ್ಮದ್ ಮೊಖ್ಬರ್ ತಿಳಿಸಿದ್ದಾರೆ. "ಅಮೆರಿಕನ್ನರ ಮೇಲೆ ನಮಗೆ ನಂಬಿಕೆ ಇಲ್ಲ. ಅವರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ನಾವು ಬಯಸಿದಷ್ಟು ಕಾಲ ಯುದ್ಧವನ್ನು ಮುಂದುವರಿಸಬಹುದು" ಎಂದು ಅವರು ಹೇಳಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm