ಬ್ರೇಕಿಂಗ್ ನ್ಯೂಸ್
04-03-26 10:03 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಐದನೇ ದಿನಕ್ಕೆ ಕಾಲಿಟ್ಟಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಶ್ರೀಲಂಕಾ ಬಳಿ ತನ್ನ ನೌಕೆಯ ಮೇಲಿನ ದಾಳಿ ಬೆನ್ನಲ್ಲೇ ಹಿಂದೂ ಮಹಾಸಾಗರದಲ್ಲಿ ತನ್ನ ಕರಾವಳಿಯಿಂದ ಸುಮಾರು 650 ಕಿಮೀ ದೂರದಲ್ಲಿದ್ದ ಅಮೆರಿಕದ ಯುದ್ಧನೌಕೆಯ ಮೇಲೆ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿಕೊಂಡಿದೆ. ಆದರೆ ಇದರ ಬಗ್ಗೆ ಅಮೆರಿಕ ಯಾವುದೇ ಮಾಹಿತಿ ನೀಡಿಲ್ಲ.
ಶ್ರೀಲಂಕಾ ಕರಾವಳಿಯಲ್ಲಿ ಇರಾನಿನ ಹಡಗಿನ ಮೇಲೆ ಬುಧವಾರ ಬೆಳಗ್ಗೆ ಜಲಾಂತರ್ಗಾಮಿ ಮೂಲಕ ದಾಳಿ ನಡೆಸಲಾಗಿದ್ದು, ಅದರಲ್ಲಿದ್ದ ಕನಿಷ್ಠ 101 ಯೋಧರು ಕಾಣೆಯಾಗಿದ್ದಾರೆ. 78 ಜನ ಗಾಯಗೊಂಡಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ. ಇರಾನಿನ ಐರಿಸ್ ದೇನಾ ಹೆಸರಿನ ನೌಕಾಪಡೆಯ ಯುದ್ಧನೌಕೆ ಇದಾಗಿದ್ದು, ಫೆಬ್ರವರಿ ಮಧ್ಯದಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಭಾರತೀಯ ನೌಕಾಪಡೆಯ ಅಂತರರಾಷ್ಟ್ರೀಯ ಫ್ಲೀಟ್ ರಿವ್ಯೂ(IFR) ಮತ್ತು ಬಹುರಾಷ್ಟ್ರೀಯ ಕಾರ್ಯಾಚರಣೆ ಮಿಲನ್ನಲ್ಲಿ ಭಾಗವಹಿಸಿತ್ತು. ಭಾರತ ಆಯೋಜಿಸಿದ್ದ ನೌಕಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ ನಂತರ ಇರಾನ್ಗೆ ಹಿಂದಿರುಗುತ್ತಿದ್ದ ವೇಳೆ ಅಮೆರಿಕ ದಾಳಿ ನಡೆಸಿದೆ. ಅದರಲ್ಲಿದ್ದ ಹಲವರನ್ನು ಶ್ರೀಲಂಕಾ ಸೇನೆ ರಕ್ಷಣೆ ಮಾಡಿದೆ.
ಇದೇ ವೇಳೆ, ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶವನ್ನು ನಾವು ಹೊಂದಿಲ್ಲ. ಸಾಧ್ಯವಿರುವಷ್ಟು ಕಾಲ ಯುದ್ಧವನ್ನು ಮುಂದುವರಿಸುತ್ತೇವೆ ಎಂದು ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹಿರಿಯ ಸಹಾಯಕ ಮೊಹಮ್ಮದ್ ಮೊಖ್ಬರ್ ತಿಳಿಸಿದ್ದಾರೆ. "ಅಮೆರಿಕನ್ನರ ಮೇಲೆ ನಮಗೆ ನಂಬಿಕೆ ಇಲ್ಲ. ಅವರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ. ನಾವು ಬಯಸಿದಷ್ಟು ಕಾಲ ಯುದ್ಧವನ್ನು ಮುಂದುವರಿಸಬಹುದು" ಎಂದು ಅವರು ಹೇಳಿದ್ದಾರೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm