ಬ್ರೇಕಿಂಗ್ ನ್ಯೂಸ್
04-03-26 10:09 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಏಷ್ಯಾ ರಾಷ್ಟ್ರಗಳ ಪಾಲಿಗೆ ನೌಕಾ ಯಾನಕ್ಕೆ ಪ್ರಮುಖ ಕೊಂಡಿಯಾಗಿದ್ದ ಹರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ ಹೇರಿದೆ. ನಿರ್ಬಂಧ ಉಲ್ಲಂಘಿಸಿದರೆ ದಾಳಿ ನಡೆಸುವುದಾಗಿ ಇರಾನ್ ಘೋಷಿಸಿದ್ದು ಇದರಿಂದಾಗಿ ನೂರಾರು ಹಡಗುಗಳು ಅಲ್ಲಿ ಸಿಕ್ಕಿಬಿದ್ದಿವೆ. ಇದೇ ವೇಳೆ, ನಿರ್ಬಂಧವನ್ನು ಉಲ್ಲಂಘಿಸಿ ತೈಲ ಸಾಗಿಸುತ್ತಿದ್ದ 10 ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಮಾಹಿತಿ ನೀಡಿದೆ.
ಜಲಸಂಧಿಯು ವಿಶ್ವದ ಒಟ್ಟು ತೈಲ ಪೂರೈಕೆಯ ಶೇಕಡ 20 ರಷ್ಟು ಭಾಗವನ್ನು ಸಾಗಿಸುವ ಪ್ರಮುಖ ಜಲಮಾರ್ಗವಾಗಿದೆ. ಜಲಸಂಧಿ ನಿರ್ಬಂಧ ವಿಧಿಸಿರುವ ಘಟನೆಯಿಂದ ಭಾರತದ ಮೇಲೆ ನೇರ ಪರಿಣಾಮ ಬೀರಿದೆ. ಸುಮಾರು 37 ಭಾರತೀಯ ಹಡಗುಗಳು, 10,000 ಕೋಟಿ ರೂ. ಮೌಲ್ಯದ ಸರಕುಗಳೊಂದಿಗೆ ಮತ್ತು 1,109 ನಾವಿಕರೊಂದಿಗೆ ಹೊರ್ಮುಜ್ ಜಲಸಂಧಿ ಅಥವಾ ಒಮಾನ್ ಕೊಲ್ಲಿಯಲ್ಲಿ ಸಿಕ್ಕಿಕೊಂಡಿವೆ.
ಭಾರತವು ಈ ಜಲಸಂಧಿಯ ಮೂಲಕ ಪ್ರತಿದಿನ ಸುಮಾರು 26 ಲಕ್ಷ ಬ್ಯಾರೆಲ್ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಸದ್ಯದ ಪರಿಸ್ಥಿತಿ ಮುಂದುವರಿದರೆ, ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ತೈಲ ಪೂರೈಕೆ ಇಲ್ಲದೆ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಭಾರತ ಸರ್ಕಾರ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಚಿಂತಿಸುತ್ತಿದ್ದು, ಒಂದು ತಿಂಗಳ ಕಾಲಕ್ಕೆ ಬೇಕಾಗುವಷ್ಟು ತೈಲ ಸಂಗ್ರಹ ಇದೆ ಎನ್ನುತ್ತಿದೆ.
ಈಗ ಹರ್ಮುಜ್ ಸಮುದ್ರದಲ್ಲಿ ದಾಳಿಗೀಡಾಗಿರುವ ಹಡಗು ಯಾವ ದೇಶದ್ದು ಎಂದು ಗೊತ್ತಾಗಿಲ್ಲ. ಅಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ನೂರಾರು ಹಡಗುಗಳಿದ್ದು ಯಾವುದಕ್ಕೆ ಬಾಂಬ್ ದಾಳಿಯಾಗಿದೆ ಎಂಬ ಮಾಹಿತಿ ಲಭಿಸಿಲ್ಲ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm