ಬ್ರೇಕಿಂಗ್ ನ್ಯೂಸ್
04-03-26 10:09 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 4: ಏಷ್ಯಾ ರಾಷ್ಟ್ರಗಳ ಪಾಲಿಗೆ ನೌಕಾ ಯಾನಕ್ಕೆ ಪ್ರಮುಖ ಕೊಂಡಿಯಾಗಿದ್ದ ಹರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ ಹೇರಿದೆ. ನಿರ್ಬಂಧ ಉಲ್ಲಂಘಿಸಿದರೆ ದಾಳಿ ನಡೆಸುವುದಾಗಿ ಇರಾನ್ ಘೋಷಿಸಿದ್ದು ಇದರಿಂದಾಗಿ ನೂರಾರು ಹಡಗುಗಳು ಅಲ್ಲಿ ಸಿಕ್ಕಿಬಿದ್ದಿವೆ. ಇದೇ ವೇಳೆ, ನಿರ್ಬಂಧವನ್ನು ಉಲ್ಲಂಘಿಸಿ ತೈಲ ಸಾಗಿಸುತ್ತಿದ್ದ 10 ಹಡಗುಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ಮಾಹಿತಿ ನೀಡಿದೆ.
ಜಲಸಂಧಿಯು ವಿಶ್ವದ ಒಟ್ಟು ತೈಲ ಪೂರೈಕೆಯ ಶೇಕಡ 20 ರಷ್ಟು ಭಾಗವನ್ನು ಸಾಗಿಸುವ ಪ್ರಮುಖ ಜಲಮಾರ್ಗವಾಗಿದೆ. ಜಲಸಂಧಿ ನಿರ್ಬಂಧ ವಿಧಿಸಿರುವ ಘಟನೆಯಿಂದ ಭಾರತದ ಮೇಲೆ ನೇರ ಪರಿಣಾಮ ಬೀರಿದೆ. ಸುಮಾರು 37 ಭಾರತೀಯ ಹಡಗುಗಳು, 10,000 ಕೋಟಿ ರೂ. ಮೌಲ್ಯದ ಸರಕುಗಳೊಂದಿಗೆ ಮತ್ತು 1,109 ನಾವಿಕರೊಂದಿಗೆ ಹೊರ್ಮುಜ್ ಜಲಸಂಧಿ ಅಥವಾ ಒಮಾನ್ ಕೊಲ್ಲಿಯಲ್ಲಿ ಸಿಕ್ಕಿಕೊಂಡಿವೆ.
ಭಾರತವು ಈ ಜಲಸಂಧಿಯ ಮೂಲಕ ಪ್ರತಿದಿನ ಸುಮಾರು 26 ಲಕ್ಷ ಬ್ಯಾರೆಲ್ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಸದ್ಯದ ಪರಿಸ್ಥಿತಿ ಮುಂದುವರಿದರೆ, ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ತೈಲ ಪೂರೈಕೆ ಇಲ್ಲದೆ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಭಾರತ ಸರ್ಕಾರ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಚಿಂತಿಸುತ್ತಿದ್ದು, ಒಂದು ತಿಂಗಳ ಕಾಲಕ್ಕೆ ಬೇಕಾಗುವಷ್ಟು ತೈಲ ಸಂಗ್ರಹ ಇದೆ ಎನ್ನುತ್ತಿದೆ.
ಈಗ ಹರ್ಮುಜ್ ಸಮುದ್ರದಲ್ಲಿ ದಾಳಿಗೀಡಾಗಿರುವ ಹಡಗು ಯಾವ ದೇಶದ್ದು ಎಂದು ಗೊತ್ತಾಗಿಲ್ಲ. ಅಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ನೂರಾರು ಹಡಗುಗಳಿದ್ದು ಯಾವುದಕ್ಕೆ ಬಾಂಬ್ ದಾಳಿಯಾಗಿದೆ ಎಂಬ ಮಾಹಿತಿ ಲಭಿಸಿಲ್ಲ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm