ಬ್ರೇಕಿಂಗ್ ನ್ಯೂಸ್
05-03-26 05:02 pm HK News Staffer ದೇಶ - ವಿದೇಶ
ಕೊಲಂಬೊ, ಮಾರ್ಚ್ 4: ಕಳೆದ ಐದು ದಿನಗಳಿಂದ ಮಧ್ಯಪ್ರಾಚ್ಯವನ್ನು ಉದ್ವಿಗ್ನಗೊಳಿಸಿದ್ದ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಇದೀಗ ಭಾರತದ ಸಮೀಪದ ಸಮುದ್ರ ಪ್ರದೇಶಗಳಿಗೂ ವ್ಯಾಪಿಸಿರುವ ಬೆಳವಣಿಗೆ ನಡೆದಿದೆ. ಶ್ರೀಲಂಕಾ ಕರಾವಳಿ ಸಮೀಪ ಇರಾನ್ನ ಯುದ್ಧನೌಕೆ ಮೇಲೆ ಅಮೆರಿಕ ದಾಳಿ ನಡೆಸಿದ ಪರಿಣಾಮ ಕನಿಷ್ಠ 87 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ದಾಳಿಗೆ ಗುರಿಯಾದ ನೌಕೆಯನ್ನು ಇರಾನ್ ನೌಕಾಪಡೆಯ ಐಆರ್ಐಎಸ್ ಡೆನಾ ಎಂದು ಗುರುತಿಸಲಾಗಿದೆ. ಅಮೆರಿಕದ ಸಬ್ಮರೀನ್ನಿಂದ ಹಾರಿಸಲಾದ ಟಾರ್ಪೆಡೋ ಕ್ಷಿಪಣಿಯಿಂದ ಈ ನೌಕೆಯನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ರಕ್ಷಣಾ ಇಲಾಖೆ ಹೇಳಿಕೆ ನೀಡಿದೆ.
ದಾಳಿಯ ತೀವ್ರತೆಗೆ ನೌಕೆ ಸಂಪೂರ್ಣವಾಗಿ ಮುಳುಗಿದ್ದು, ಅದರಲ್ಲಿದ್ದ ಸಿಬ್ಬಂದಿಯಲ್ಲಿ 32 ಮಂದಿಯನ್ನು ಮಾತ್ರ ರಕ್ಷಿಸಲಾಗಿದೆ. ಸುಮಾರು 61 ಮಂದಿ ನಾಪತ್ತೆಯಾಗಿದ್ದು, ಅವರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 87ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಎಂದು ಶ್ರೀಲಂಕಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಎರಡನೇ ವಿಶ್ವಯುದ್ಧದ ನಂತರ ಅಮೆರಿಕ ಸಬ್ಮರೀನ್ನಿಂದ ಶತ್ರು ರಾಷ್ಟ್ರದ ನೌಕೆಯನ್ನು ಟಾರ್ಪೆಡೋ ಮೂಲಕ ಹೊಡೆದುರುಳಿಸಿದ ಅಪರೂಪದ ಘಟನೆ ಎನ್ನಲಾಗಿದೆ.
ಇತ್ತೀಚೆಗೆ ವಿಶಾಖಪಟ್ಟಣಂನಲ್ಲಿ ಭಾರತ ಮತ್ತು ಇರಾನ್ ನೌಕಾಪಡೆಗಳ ಜಂಟಿ ಸಮರಾಭ್ಯಾಸ ನಡೆದಿತ್ತು. ಫೆಬ್ರವರಿ 18ರಿಂದ 25ರವರೆಗೆ ನಡೆದ ಈ ಕಸರತ್ತಿನಲ್ಲಿ ಪಾಲ್ಗೊಳ್ಳಲು ಐಆರ್ಐಎಸ್ ಡೆನಾ ನೌಕೆ ಭಾರತಕ್ಕೆ ಆಗಮಿಸಿತ್ತು. ಸಮರಾಭ್ಯಾಸ ಮುಗಿದ ನಂತರ ನೌಕೆ ಸಿಂಗಾಪುರಗೆ ತೆರಳಿ ಅಲ್ಲಿ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ಇರಾನ್ಗೆ ವಾಪಸ್ಸಾಗುತ್ತಿತ್ತು.
ಬುಧವಾರ ಬೆಳಗಿನ ಜಾವ ಶ್ರೀಲಂಕಾದ ದಕ್ಷಿಣ ಕರಾವಳಿ ನಗರ ಗಾಲೆ ಸಮೀಪ ಸುಮಾರು 40 ನಾಟಿಕಲ್ ಮೈಲು ದೂರದ ಅಂತಾರಾಷ್ಟ್ರೀಯ ಸಮುದ್ರ ವಲಯದಲ್ಲಿ ಸಾಗುತ್ತಿದ್ದ ವೇಳೆ ನೌಕೆ ಮೇಲೆ ದಾಳಿ ನಡೆದಿದೆ.
ನೌಕೆಯಿಂದ ಬಂದ ತುರ್ತು ಸಂದೇಶದ ಹಿನ್ನೆಲೆಯಲ್ಲಿ ಶ್ರೀಲಂಕಾ ನೌಕಾಪಡೆ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿತು. ಈ ವೇಳೆ ಬದುಕುಳಿದ ಕೆಲ ಸಿಬ್ಬಂದಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೀಟ್ ಹೆಗ್ಸೆತ್ ಅವರು, “ಶ್ರೀಲಂಕಾದ ದಕ್ಷಿಣ ಕರಾವಳಿಯ ಬಳಿ ಇರಾನ್ ನೌಕೆಯನ್ನು ನಾವು ಟಾರ್ಪೆಡೋ ಮೂಲಕ ಧ್ವಂಸಗೊಳಿಸಿದ್ದೇವೆ. ಎರಡನೇ ವಿಶ್ವಯುದ್ಧದ ನಂತರ ಇಂತಹ ದಾಳಿ ಇದೇ ಮೊದಲ ಬಾರಿ” ಎಂದು ಹೇಳಿದ್ದಾರೆ.
ಈ ದಾಳಿಯಿಂದ ಮಧ್ಯಪ್ರಾಚ್ಯ ಸಂಘರ್ಷವು ಸಮುದ್ರದಲ್ಲಿಯೂ ತೀವ್ರಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಹೊಸ ಭದ್ರತಾ ಆತಂಕಗಳು ಮೂಡಿವೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm