ಬ್ರೇಕಿಂಗ್ ನ್ಯೂಸ್
05-03-26 05:02 pm HK News Staffer ದೇಶ - ವಿದೇಶ
ಕೊಲಂಬೊ, ಮಾರ್ಚ್ 4: ಕಳೆದ ಐದು ದಿನಗಳಿಂದ ಮಧ್ಯಪ್ರಾಚ್ಯವನ್ನು ಉದ್ವಿಗ್ನಗೊಳಿಸಿದ್ದ ಅಮೆರಿಕ–ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಇದೀಗ ಭಾರತದ ಸಮೀಪದ ಸಮುದ್ರ ಪ್ರದೇಶಗಳಿಗೂ ವ್ಯಾಪಿಸಿರುವ ಬೆಳವಣಿಗೆ ನಡೆದಿದೆ. ಶ್ರೀಲಂಕಾ ಕರಾವಳಿ ಸಮೀಪ ಇರಾನ್ನ ಯುದ್ಧನೌಕೆ ಮೇಲೆ ಅಮೆರಿಕ ದಾಳಿ ನಡೆಸಿದ ಪರಿಣಾಮ ಕನಿಷ್ಠ 87 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ದಾಳಿಗೆ ಗುರಿಯಾದ ನೌಕೆಯನ್ನು ಇರಾನ್ ನೌಕಾಪಡೆಯ ಐಆರ್ಐಎಸ್ ಡೆನಾ ಎಂದು ಗುರುತಿಸಲಾಗಿದೆ. ಅಮೆರಿಕದ ಸಬ್ಮರೀನ್ನಿಂದ ಹಾರಿಸಲಾದ ಟಾರ್ಪೆಡೋ ಕ್ಷಿಪಣಿಯಿಂದ ಈ ನೌಕೆಯನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ರಕ್ಷಣಾ ಇಲಾಖೆ ಹೇಳಿಕೆ ನೀಡಿದೆ.
ದಾಳಿಯ ತೀವ್ರತೆಗೆ ನೌಕೆ ಸಂಪೂರ್ಣವಾಗಿ ಮುಳುಗಿದ್ದು, ಅದರಲ್ಲಿದ್ದ ಸಿಬ್ಬಂದಿಯಲ್ಲಿ 32 ಮಂದಿಯನ್ನು ಮಾತ್ರ ರಕ್ಷಿಸಲಾಗಿದೆ. ಸುಮಾರು 61 ಮಂದಿ ನಾಪತ್ತೆಯಾಗಿದ್ದು, ಅವರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 87ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಎಂದು ಶ್ರೀಲಂಕಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಎರಡನೇ ವಿಶ್ವಯುದ್ಧದ ನಂತರ ಅಮೆರಿಕ ಸಬ್ಮರೀನ್ನಿಂದ ಶತ್ರು ರಾಷ್ಟ್ರದ ನೌಕೆಯನ್ನು ಟಾರ್ಪೆಡೋ ಮೂಲಕ ಹೊಡೆದುರುಳಿಸಿದ ಅಪರೂಪದ ಘಟನೆ ಎನ್ನಲಾಗಿದೆ.
ಇತ್ತೀಚೆಗೆ ವಿಶಾಖಪಟ್ಟಣಂನಲ್ಲಿ ಭಾರತ ಮತ್ತು ಇರಾನ್ ನೌಕಾಪಡೆಗಳ ಜಂಟಿ ಸಮರಾಭ್ಯಾಸ ನಡೆದಿತ್ತು. ಫೆಬ್ರವರಿ 18ರಿಂದ 25ರವರೆಗೆ ನಡೆದ ಈ ಕಸರತ್ತಿನಲ್ಲಿ ಪಾಲ್ಗೊಳ್ಳಲು ಐಆರ್ಐಎಸ್ ಡೆನಾ ನೌಕೆ ಭಾರತಕ್ಕೆ ಆಗಮಿಸಿತ್ತು. ಸಮರಾಭ್ಯಾಸ ಮುಗಿದ ನಂತರ ನೌಕೆ ಸಿಂಗಾಪುರಗೆ ತೆರಳಿ ಅಲ್ಲಿ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ಇರಾನ್ಗೆ ವಾಪಸ್ಸಾಗುತ್ತಿತ್ತು.
ಬುಧವಾರ ಬೆಳಗಿನ ಜಾವ ಶ್ರೀಲಂಕಾದ ದಕ್ಷಿಣ ಕರಾವಳಿ ನಗರ ಗಾಲೆ ಸಮೀಪ ಸುಮಾರು 40 ನಾಟಿಕಲ್ ಮೈಲು ದೂರದ ಅಂತಾರಾಷ್ಟ್ರೀಯ ಸಮುದ್ರ ವಲಯದಲ್ಲಿ ಸಾಗುತ್ತಿದ್ದ ವೇಳೆ ನೌಕೆ ಮೇಲೆ ದಾಳಿ ನಡೆದಿದೆ.
ನೌಕೆಯಿಂದ ಬಂದ ತುರ್ತು ಸಂದೇಶದ ಹಿನ್ನೆಲೆಯಲ್ಲಿ ಶ್ರೀಲಂಕಾ ನೌಕಾಪಡೆ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿತು. ಈ ವೇಳೆ ಬದುಕುಳಿದ ಕೆಲ ಸಿಬ್ಬಂದಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೀಟ್ ಹೆಗ್ಸೆತ್ ಅವರು, “ಶ್ರೀಲಂಕಾದ ದಕ್ಷಿಣ ಕರಾವಳಿಯ ಬಳಿ ಇರಾನ್ ನೌಕೆಯನ್ನು ನಾವು ಟಾರ್ಪೆಡೋ ಮೂಲಕ ಧ್ವಂಸಗೊಳಿಸಿದ್ದೇವೆ. ಎರಡನೇ ವಿಶ್ವಯುದ್ಧದ ನಂತರ ಇಂತಹ ದಾಳಿ ಇದೇ ಮೊದಲ ಬಾರಿ” ಎಂದು ಹೇಳಿದ್ದಾರೆ.
ಈ ದಾಳಿಯಿಂದ ಮಧ್ಯಪ್ರಾಚ್ಯ ಸಂಘರ್ಷವು ಸಮುದ್ರದಲ್ಲಿಯೂ ತೀವ್ರಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಹೊಸ ಭದ್ರತಾ ಆತಂಕಗಳು ಮೂಡಿವೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm