ಬ್ರೇಕಿಂಗ್ ನ್ಯೂಸ್
06-03-26 10:58 pm HK News Desk ದೇಶ - ವಿದೇಶ
ಮುಂಬೈ, ಮಾರ್ಚ್ 6: ಮಹಾರಾಷ್ಟ್ರ ಸರ್ಕಾರವು ಲವ್ ಜಿಹಾದ್ ನಿಯಂತ್ರಣದ ಉದ್ದೇಶದಿಂದ ಉತ್ತರ ಪ್ರದೇಶ ಮಾದರಿಯಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ರಚಿಸಿದ್ದು ಕರಡು ರೂಪಕ್ಕೆ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಮತಾಂತರಗೊಳ್ಳಲು ಇಚ್ಛಿಸುವ ಯಾವುದೇ ವ್ಯಕ್ತಿ 60 ದಿನಗಳ ಮೊದಲು ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಮತ್ತು ಅದಕ್ಕಾಗಿ ನೋಟಿಸ್ ನೀಡುವುದು ಕಡ್ಡಾಯವಾಗಿದೆ. ಮತಾಂತರದ ನಂತರ 25 ದಿನಗಳ ಒಳಗಾಗಿ ಅದನ್ನು ಅಧಿಕೃತವಾಗಿ ನೋಂದಣಿ ಮಾಡಿಸಬೇಕು. ಇಲ್ಲದಿದ್ದರೆ, ಅಂತಹ ಮತಾಂತರವನ್ನು ಅಸಿಂಧು ಎಂದು ಪರಿಗಣಿಸಲಾಗುತ್ತದೆ. ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಆ ಮತಾಂತರ ಕೃತ್ಯವು ಕಾನೂನುಬಾಹಿರ ಎಂದು ದೂರು ನೀಡಿದರೆ, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು.
ಬಲವಂತದ ಮತಾಂತರಕ್ಕೆ ನಿಷೇಧ
ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಎಂದರೆ ಬಲವಂತವಾಗಿ, ವಂಚನೆಯಿಂದ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಲ್ಲ. ಬದಲಾಗಿ, ಇಂತಹ ಕಾನೂನುಬಾಹಿರ ಚಟುವಟಿಕೆಗಳಿಂದ ರಕ್ಷಣೆ ಪಡೆಯುವ ಹಕ್ಕನ್ನು ಇದು ಒಳಗೊಂಡಿದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೀಶ್ ರಾಣೆ ಮಾತನಾಡಿ, "ಸಚಿವ ಸಂಪುಟವು ಪ್ರಬಲವಾದ ಮತಾಂತರ ವಿರೋಧಿ ಕಾಯ್ದೆಯನ್ನು ಅನುಮೋದಿಸಿದೆ. ಈ ಮೂಲಕ ಅಸೆಂಬ್ಲಿ ಚುನಾವಣೆಯ ಮೊದಲು ಬಿಜೆಪಿ ನೀಡಿದ್ದ ಭರವಸೆಯನ್ನು ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಿಕ್ಷೆ ಮತ್ತು ದಂಡದ ವಿವರಗಳು
ಬಲವಂತ ಅಥವಾ ಆಮಿಷದ ಮೂಲಕ ಮತಾಂತರ ಮಾಡಿದರೆ 1 ರಿಂದ 5 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ. ದಂಡ ವಿಧಿಸಲು ಅವಕಾಶವಿದೆ. ಅಪ್ರಾಪ್ತರು, ಮಹಿಳೆಯರು ಅಥವಾ ಎಸ್ಸಿ/ಎಸ್ಟಿ (SC/ST) ಸಮುದಾಯಕ್ಕೆ ಸೇರಿದವರನ್ನು ಅಕ್ರಮವಾಗಿ ಮತಾಂತರ ಮಾಡಿದರೆ ಶಿಕ್ಷೆ ಹೆಚ್ಚು ಕಠಿಣವಾಗಿರುತ್ತದೆ. ಇದರಲ್ಲಿ 3 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಬಹುದು.
ಸಮೂಹ ಮತಾಂತರ ಹೆಚ್ಚಿನ ಶಿಕ್ಷೆ
ಒಂದೇ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಜನರನ್ನು ಮತಾಂತರ ಮಾಡಿದರೆ, ಭಾಗಿಯಾದವರಿಗೆ 5 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡ ವಿಧಿಸುವ ನಿಬಂಧನೆ ಇದೆ.
ಮದುವೆಗಾಗಿ ಮತಾಂತರ ಅಸಿಂಧು
ಕೇವಲ ಮದುವೆಯ ಉದ್ದೇಶಕ್ಕಾಗಿ ಧರ್ಮವನ್ನು ಮರೆಮಾಚಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅಂತಹ ಮದುವೆಯನ್ನು ಈ ಕಾಯ್ದೆಯಡಿ ಅಸಿಂಧು ಎಂದು ಘೋಷಿಸುವ ಅಧಿಕಾರ ನ್ಯಾಯಾಲಯಕ್ಕೆ ಇರುತ್ತದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm