ಬ್ರೇಕಿಂಗ್ ನ್ಯೂಸ್
06-03-26 10:58 pm HK News Desk ದೇಶ - ವಿದೇಶ
ಮುಂಬೈ, ಮಾರ್ಚ್ 6: ಮಹಾರಾಷ್ಟ್ರ ಸರ್ಕಾರವು ಲವ್ ಜಿಹಾದ್ ನಿಯಂತ್ರಣದ ಉದ್ದೇಶದಿಂದ ಉತ್ತರ ಪ್ರದೇಶ ಮಾದರಿಯಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ರಚಿಸಿದ್ದು ಕರಡು ರೂಪಕ್ಕೆ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಮತಾಂತರಗೊಳ್ಳಲು ಇಚ್ಛಿಸುವ ಯಾವುದೇ ವ್ಯಕ್ತಿ 60 ದಿನಗಳ ಮೊದಲು ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಮತ್ತು ಅದಕ್ಕಾಗಿ ನೋಟಿಸ್ ನೀಡುವುದು ಕಡ್ಡಾಯವಾಗಿದೆ. ಮತಾಂತರದ ನಂತರ 25 ದಿನಗಳ ಒಳಗಾಗಿ ಅದನ್ನು ಅಧಿಕೃತವಾಗಿ ನೋಂದಣಿ ಮಾಡಿಸಬೇಕು. ಇಲ್ಲದಿದ್ದರೆ, ಅಂತಹ ಮತಾಂತರವನ್ನು ಅಸಿಂಧು ಎಂದು ಪರಿಗಣಿಸಲಾಗುತ್ತದೆ. ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಆ ಮತಾಂತರ ಕೃತ್ಯವು ಕಾನೂನುಬಾಹಿರ ಎಂದು ದೂರು ನೀಡಿದರೆ, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು.
ಬಲವಂತದ ಮತಾಂತರಕ್ಕೆ ನಿಷೇಧ
ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಎಂದರೆ ಬಲವಂತವಾಗಿ, ವಂಚನೆಯಿಂದ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಲ್ಲ. ಬದಲಾಗಿ, ಇಂತಹ ಕಾನೂನುಬಾಹಿರ ಚಟುವಟಿಕೆಗಳಿಂದ ರಕ್ಷಣೆ ಪಡೆಯುವ ಹಕ್ಕನ್ನು ಇದು ಒಳಗೊಂಡಿದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೀಶ್ ರಾಣೆ ಮಾತನಾಡಿ, "ಸಚಿವ ಸಂಪುಟವು ಪ್ರಬಲವಾದ ಮತಾಂತರ ವಿರೋಧಿ ಕಾಯ್ದೆಯನ್ನು ಅನುಮೋದಿಸಿದೆ. ಈ ಮೂಲಕ ಅಸೆಂಬ್ಲಿ ಚುನಾವಣೆಯ ಮೊದಲು ಬಿಜೆಪಿ ನೀಡಿದ್ದ ಭರವಸೆಯನ್ನು ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಿಕ್ಷೆ ಮತ್ತು ದಂಡದ ವಿವರಗಳು
ಬಲವಂತ ಅಥವಾ ಆಮಿಷದ ಮೂಲಕ ಮತಾಂತರ ಮಾಡಿದರೆ 1 ರಿಂದ 5 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ. ದಂಡ ವಿಧಿಸಲು ಅವಕಾಶವಿದೆ. ಅಪ್ರಾಪ್ತರು, ಮಹಿಳೆಯರು ಅಥವಾ ಎಸ್ಸಿ/ಎಸ್ಟಿ (SC/ST) ಸಮುದಾಯಕ್ಕೆ ಸೇರಿದವರನ್ನು ಅಕ್ರಮವಾಗಿ ಮತಾಂತರ ಮಾಡಿದರೆ ಶಿಕ್ಷೆ ಹೆಚ್ಚು ಕಠಿಣವಾಗಿರುತ್ತದೆ. ಇದರಲ್ಲಿ 3 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಬಹುದು.
ಸಮೂಹ ಮತಾಂತರ ಹೆಚ್ಚಿನ ಶಿಕ್ಷೆ
ಒಂದೇ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಜನರನ್ನು ಮತಾಂತರ ಮಾಡಿದರೆ, ಭಾಗಿಯಾದವರಿಗೆ 5 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡ ವಿಧಿಸುವ ನಿಬಂಧನೆ ಇದೆ.
ಮದುವೆಗಾಗಿ ಮತಾಂತರ ಅಸಿಂಧು
ಕೇವಲ ಮದುವೆಯ ಉದ್ದೇಶಕ್ಕಾಗಿ ಧರ್ಮವನ್ನು ಮರೆಮಾಚಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅಂತಹ ಮದುವೆಯನ್ನು ಈ ಕಾಯ್ದೆಯಡಿ ಅಸಿಂಧು ಎಂದು ಘೋಷಿಸುವ ಅಧಿಕಾರ ನ್ಯಾಯಾಲಯಕ್ಕೆ ಇರುತ್ತದೆ.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm