ಬ್ರೇಕಿಂಗ್ ನ್ಯೂಸ್
06-03-26 10:58 pm HK News Desk ದೇಶ - ವಿದೇಶ
ಮುಂಬೈ, ಮಾರ್ಚ್ 6: ಮಹಾರಾಷ್ಟ್ರ ಸರ್ಕಾರವು ಲವ್ ಜಿಹಾದ್ ನಿಯಂತ್ರಣದ ಉದ್ದೇಶದಿಂದ ಉತ್ತರ ಪ್ರದೇಶ ಮಾದರಿಯಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ರಚಿಸಿದ್ದು ಕರಡು ರೂಪಕ್ಕೆ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಮತಾಂತರಗೊಳ್ಳಲು ಇಚ್ಛಿಸುವ ಯಾವುದೇ ವ್ಯಕ್ತಿ 60 ದಿನಗಳ ಮೊದಲು ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಮತ್ತು ಅದಕ್ಕಾಗಿ ನೋಟಿಸ್ ನೀಡುವುದು ಕಡ್ಡಾಯವಾಗಿದೆ. ಮತಾಂತರದ ನಂತರ 25 ದಿನಗಳ ಒಳಗಾಗಿ ಅದನ್ನು ಅಧಿಕೃತವಾಗಿ ನೋಂದಣಿ ಮಾಡಿಸಬೇಕು. ಇಲ್ಲದಿದ್ದರೆ, ಅಂತಹ ಮತಾಂತರವನ್ನು ಅಸಿಂಧು ಎಂದು ಪರಿಗಣಿಸಲಾಗುತ್ತದೆ. ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಆ ಮತಾಂತರ ಕೃತ್ಯವು ಕಾನೂನುಬಾಹಿರ ಎಂದು ದೂರು ನೀಡಿದರೆ, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು.
ಬಲವಂತದ ಮತಾಂತರಕ್ಕೆ ನಿಷೇಧ
ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಎಂದರೆ ಬಲವಂತವಾಗಿ, ವಂಚನೆಯಿಂದ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಲ್ಲ. ಬದಲಾಗಿ, ಇಂತಹ ಕಾನೂನುಬಾಹಿರ ಚಟುವಟಿಕೆಗಳಿಂದ ರಕ್ಷಣೆ ಪಡೆಯುವ ಹಕ್ಕನ್ನು ಇದು ಒಳಗೊಂಡಿದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೀಶ್ ರಾಣೆ ಮಾತನಾಡಿ, "ಸಚಿವ ಸಂಪುಟವು ಪ್ರಬಲವಾದ ಮತಾಂತರ ವಿರೋಧಿ ಕಾಯ್ದೆಯನ್ನು ಅನುಮೋದಿಸಿದೆ. ಈ ಮೂಲಕ ಅಸೆಂಬ್ಲಿ ಚುನಾವಣೆಯ ಮೊದಲು ಬಿಜೆಪಿ ನೀಡಿದ್ದ ಭರವಸೆಯನ್ನು ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಿಕ್ಷೆ ಮತ್ತು ದಂಡದ ವಿವರಗಳು
ಬಲವಂತ ಅಥವಾ ಆಮಿಷದ ಮೂಲಕ ಮತಾಂತರ ಮಾಡಿದರೆ 1 ರಿಂದ 5 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ. ದಂಡ ವಿಧಿಸಲು ಅವಕಾಶವಿದೆ. ಅಪ್ರಾಪ್ತರು, ಮಹಿಳೆಯರು ಅಥವಾ ಎಸ್ಸಿ/ಎಸ್ಟಿ (SC/ST) ಸಮುದಾಯಕ್ಕೆ ಸೇರಿದವರನ್ನು ಅಕ್ರಮವಾಗಿ ಮತಾಂತರ ಮಾಡಿದರೆ ಶಿಕ್ಷೆ ಹೆಚ್ಚು ಕಠಿಣವಾಗಿರುತ್ತದೆ. ಇದರಲ್ಲಿ 3 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಬಹುದು.
ಸಮೂಹ ಮತಾಂತರ ಹೆಚ್ಚಿನ ಶಿಕ್ಷೆ
ಒಂದೇ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಜನರನ್ನು ಮತಾಂತರ ಮಾಡಿದರೆ, ಭಾಗಿಯಾದವರಿಗೆ 5 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡ ವಿಧಿಸುವ ನಿಬಂಧನೆ ಇದೆ.
ಮದುವೆಗಾಗಿ ಮತಾಂತರ ಅಸಿಂಧು
ಕೇವಲ ಮದುವೆಯ ಉದ್ದೇಶಕ್ಕಾಗಿ ಧರ್ಮವನ್ನು ಮರೆಮಾಚಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅಂತಹ ಮದುವೆಯನ್ನು ಈ ಕಾಯ್ದೆಯಡಿ ಅಸಿಂಧು ಎಂದು ಘೋಷಿಸುವ ಅಧಿಕಾರ ನ್ಯಾಯಾಲಯಕ್ಕೆ ಇರುತ್ತದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am