ಬ್ರೇಕಿಂಗ್ ನ್ಯೂಸ್
06-03-26 10:58 pm HK News Desk ದೇಶ - ವಿದೇಶ
ಮುಂಬೈ, ಮಾರ್ಚ್ 6: ಮಹಾರಾಷ್ಟ್ರ ಸರ್ಕಾರವು ಲವ್ ಜಿಹಾದ್ ನಿಯಂತ್ರಣದ ಉದ್ದೇಶದಿಂದ ಉತ್ತರ ಪ್ರದೇಶ ಮಾದರಿಯಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ರಚಿಸಿದ್ದು ಕರಡು ರೂಪಕ್ಕೆ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಮತಾಂತರಗೊಳ್ಳಲು ಇಚ್ಛಿಸುವ ಯಾವುದೇ ವ್ಯಕ್ತಿ 60 ದಿನಗಳ ಮೊದಲು ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಮತ್ತು ಅದಕ್ಕಾಗಿ ನೋಟಿಸ್ ನೀಡುವುದು ಕಡ್ಡಾಯವಾಗಿದೆ. ಮತಾಂತರದ ನಂತರ 25 ದಿನಗಳ ಒಳಗಾಗಿ ಅದನ್ನು ಅಧಿಕೃತವಾಗಿ ನೋಂದಣಿ ಮಾಡಿಸಬೇಕು. ಇಲ್ಲದಿದ್ದರೆ, ಅಂತಹ ಮತಾಂತರವನ್ನು ಅಸಿಂಧು ಎಂದು ಪರಿಗಣಿಸಲಾಗುತ್ತದೆ. ಮತಾಂತರಗೊಳ್ಳುವ ವ್ಯಕ್ತಿಯ ರಕ್ತ ಸಂಬಂಧಿಗಳು ಆ ಮತಾಂತರ ಕೃತ್ಯವು ಕಾನೂನುಬಾಹಿರ ಎಂದು ದೂರು ನೀಡಿದರೆ, ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು.
ಬಲವಂತದ ಮತಾಂತರಕ್ಕೆ ನಿಷೇಧ
ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಎಂದರೆ ಬಲವಂತವಾಗಿ, ವಂಚನೆಯಿಂದ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಲ್ಲ. ಬದಲಾಗಿ, ಇಂತಹ ಕಾನೂನುಬಾಹಿರ ಚಟುವಟಿಕೆಗಳಿಂದ ರಕ್ಷಣೆ ಪಡೆಯುವ ಹಕ್ಕನ್ನು ಇದು ಒಳಗೊಂಡಿದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ನಿತೀಶ್ ರಾಣೆ ಮಾತನಾಡಿ, "ಸಚಿವ ಸಂಪುಟವು ಪ್ರಬಲವಾದ ಮತಾಂತರ ವಿರೋಧಿ ಕಾಯ್ದೆಯನ್ನು ಅನುಮೋದಿಸಿದೆ. ಈ ಮೂಲಕ ಅಸೆಂಬ್ಲಿ ಚುನಾವಣೆಯ ಮೊದಲು ಬಿಜೆಪಿ ನೀಡಿದ್ದ ಭರವಸೆಯನ್ನು ಈಡೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಿಕ್ಷೆ ಮತ್ತು ದಂಡದ ವಿವರಗಳು
ಬಲವಂತ ಅಥವಾ ಆಮಿಷದ ಮೂಲಕ ಮತಾಂತರ ಮಾಡಿದರೆ 1 ರಿಂದ 5 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 25,000 ರೂ. ದಂಡ ವಿಧಿಸಲು ಅವಕಾಶವಿದೆ. ಅಪ್ರಾಪ್ತರು, ಮಹಿಳೆಯರು ಅಥವಾ ಎಸ್ಸಿ/ಎಸ್ಟಿ (SC/ST) ಸಮುದಾಯಕ್ಕೆ ಸೇರಿದವರನ್ನು ಅಕ್ರಮವಾಗಿ ಮತಾಂತರ ಮಾಡಿದರೆ ಶಿಕ್ಷೆ ಹೆಚ್ಚು ಕಠಿಣವಾಗಿರುತ್ತದೆ. ಇದರಲ್ಲಿ 3 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಬಹುದು.
ಸಮೂಹ ಮತಾಂತರ ಹೆಚ್ಚಿನ ಶಿಕ್ಷೆ
ಒಂದೇ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಜನರನ್ನು ಮತಾಂತರ ಮಾಡಿದರೆ, ಭಾಗಿಯಾದವರಿಗೆ 5 ರಿಂದ 10 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡ ವಿಧಿಸುವ ನಿಬಂಧನೆ ಇದೆ.
ಮದುವೆಗಾಗಿ ಮತಾಂತರ ಅಸಿಂಧು
ಕೇವಲ ಮದುವೆಯ ಉದ್ದೇಶಕ್ಕಾಗಿ ಧರ್ಮವನ್ನು ಮರೆಮಾಚಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅಂತಹ ಮದುವೆಯನ್ನು ಈ ಕಾಯ್ದೆಯಡಿ ಅಸಿಂಧು ಎಂದು ಘೋಷಿಸುವ ಅಧಿಕಾರ ನ್ಯಾಯಾಲಯಕ್ಕೆ ಇರುತ್ತದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm