ಬ್ರೇಕಿಂಗ್ ನ್ಯೂಸ್
10-03-26 01:31 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಮಾರ್ಚ್ 10: ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ 100 ಡಾಲರ್ ದಾಟಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ ಆಗಿದೆ. ತೈಲ ದರ ವಿಪರೀತ ಏರಿಕೆಯಾಗಿದ್ದು ಪಾಕ್ ಸರ್ಕಾರ ದೇಶಾದ್ಯಂತ ಶಾಲೆಗಳಿಗೆ ಎರಡು ವಾರಗಳ ಕಾಲ ರಜೆ ಘೋಷಣೆ ಮಾಡಿದೆ. ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಗಳ ಕಾಲ ಕಾರ್ಯ ನಿರ್ವಹಿಸುವಂತೆ ಮತ್ತು ವಾಹನಗಳನ್ನು ಅರ್ಧಕ್ಕರ್ಧ ಬಳಕೆ ಕಡಿಮೆ ಮಾಡುವಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಜನರಿಗೆ ಕರೆ ನೀಡಿದ್ದಾರೆ.
ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ತುರ್ತಾಗಿ ಇಂಧನ ಉಳಿತಾಯ ಕ್ರಮಗಳನ್ನು ಘೋಷಿಸಿದರು. ಇದರ ಭಾಗವಾಗಿ, ಶಾಲೆಗಳನ್ನು ಹದಿನೈದು ದಿನಗಳ ಕಾಲ ಮುಚ್ಚಲಾಗುತ್ತದೆ. ಇಂಧನವನ್ನು ಉಳಿಸಲು ಸರ್ಕಾರಿ ಕಚೇರಿಗಳು ವಾರದಲ್ಲಿ ನಾಲ್ಕು ದಿನಕ್ಕೆ ಸೀಮಿತ ಮಾಡಲಾಗುತ್ತದೆ. ಇದಲ್ಲದೆ ಇಂಧನವನ್ನು ಉಳಿಸಲು ಉನ್ನತ ಶಿಕ್ಷಣ ಸಂಸ್ಥೆಗಳು ಕಾಲೇಜು ಮುಚ್ಚಿ ತಕ್ಷಣವೇ ಆನ್ಲೈನ್ ಕ್ಲಾಸ್ ನಡೆಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರದ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಇಂಧನ ಉಳಿಸಲು ಮುಂದಿನ ಎರಡು ತಿಂಗಳ ಕಾಲ ಸರ್ಕಾರಿ ಇಲಾಖೆಗಳ ಇಂಧನ ಭತ್ಯೆಯಲ್ಲಿ ಶೇ. 50ರಷ್ಟು ಕಡಿತ ಮಾಡಲಾಗುವುದು ಎಂದು ಶರೀಫ್ ತಿಳಿಸಿದ್ದಾರೆ.
ವಾಹನಗಳ ಬಳಕೆಗೆ ಬ್ರೇಕ್:
ಸದ್ಯಕ್ಕೆ ಸಾರ್ವಜನಿಕ ಸಾರಿಗೆ ಬಸ್ಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಹೊರತುಪಡಿಸಿ, ಶೇ. 60ರಷ್ಟು ಅಧಿಕೃತ ಸರ್ಕಾರಿ ವಾಹನಗಳನ್ನು ಚಾಲನೆಯಿಂದ ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇಂಧನ ಉಳಿತಾಯದ ಭಾಗವಾಗಿ ಕೇವಲ ಶೇ. 50ರಷ್ಟು ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕೆಲಸ ಮಾಡಲಿದ್ದಾರೆ. ಉಳಿದವರು ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ಪಾಕಿಸ್ತಾನದಲ್ಲಿ ಲೀಟರ್ ಪೆಟ್ರೋಲ್ ಬೆಲೆ 325 ಪಾಕಿಸ್ತಾನ ರುಪಾಯಿ ಆಗಿದೆ. ಡಾಲರ್ ಎದುರಲ್ಲಿ ಪಾಕಿಸ್ತಾನದ ರುಪಾಯಿ 279ಕ್ಕೆ ಕುಸಿದಿದೆ. ಕಚ್ಚಾ ತೈಲ ದರ ಏರಿಕೆ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ ಒಮ್ಮೆಗೆ 55 ಪಿಕೆಆರ್ ಹೆಚ್ಚಿಸಿರುವುದು ದೇಶದಲ್ಲಿ ಭಾರೀ ತಳಮಳಕ್ಕೆ ಕಾರಣವಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm