ಬ್ರೇಕಿಂಗ್ ನ್ಯೂಸ್
12-03-26 09:01 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 12: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ 13ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಇರಾನ್ ಯುದ್ಧ ಕೊನೆಗೊಳಿಸಲು ಅಮೆರಿಕಕ್ಕೆ ಷರತ್ತುಗಳನ್ನು ವಿಧಿಸಿದೆ. ಯುದ್ಧ ನಿಲ್ಲಬೇಕಾದರೆ ನಮ್ಮ ಮೂರು ಷರತ್ತನ್ನುಗಳನ್ನು ಒಪ್ಪಿಕೊಳ್ಳಬೇಕು. ಶಾಂತಿ ಸ್ಥಾಪನೆಗಾಗಿ ಮೂರು ಪ್ರಮುಖ ಷರತ್ತುಗಳನ್ನು ಜಾರಿಗೆ ತರಬೇಕೆಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಹೇಳಿದ್ದಾರೆ.
ಅಮೆರಿಕವು ಇರಾನ್ ದೇಶದ ಕಾನೂನುಬದ್ಧ ಹಕ್ಕುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕು ಮತ್ತು ಇತ್ತೀಚಿನ ಸಂಘರ್ಷದಿಂದ ಉಂಟಾದ ನಷ್ಟಗಳಿಗೆ ಪರಿಹಾರ ನೀಡಬೇಕು. ಹಾಗೂ ಭವಿಷ್ಯದಲ್ಲಿ ಇರಾನ್ ಮೇಲೆ ಯಾವುದೇ ದಾಳಿ ನಡೆಯಬಾರದು ಎಂಬ ಸ್ಪಷ್ಟ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರವಸೆ ನೀಡಬೇಕು. ಈ ಷರತ್ತುಗಳನ್ನು ಒಪ್ಪಿದರೆ ಮಾತ್ರ ಯುದ್ಧ ನಿಲ್ಲುತ್ತದೆ ಎಂದು ಇರಾನ್ ಅಧ್ಯಕ್ಷರು ಹೇಳಿದ್ದು ಅಮೆರಿಕ ಮತ್ತು ಇಸ್ರೇಲ್ ಮೇಲೆ ಒತ್ತಡ ಹೆಚ್ಚಿಸಿದೆ.
ರಷ್ಯಾ ಮತ್ತು ಪಾಕಿಸ್ತಾನದ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ಪೆಜೆಶ್ಲಿಯಾನ್, ಈ ಷರತ್ತುಗಳನ್ನು ಹಾಕಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ತಮ್ಮ ದೇಶ ಬದ್ಧವಾಗಿದೆ ಎಂದೂ ಪೆಜೆಶ್ಕಿಯಾನ್ ಪುನರುಚ್ಚರಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮಸೌದ್ ಪೆಜೆಶ್ಕಿಯನ್, ರಷ್ಯಾ ಮತ್ತು ಪಾಕಿಸ್ತಾನದ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದೆ. ಮಧ್ಯ ಪ್ರಾಚ್ಯದಲ್ಲಿ ಶಾಂತಿಗಾಗಿ ಇರಾನ್ನ ಬದ್ಧತೆಯನ್ನು ಪುನರುಚ್ಚರಿಸಿದ್ದೇನೆ ಎಂದಿದ್ದಾರೆ.
ಇಸ್ರೇಲ್ ಖಡಕ್ ಪ್ರತಿಕ್ರಿಯೆ:
ಯುದ್ಧ ನಿಲ್ಲಲು ಇರಾನ್ ಷರತ್ತು ವಿಧಿಸಿದ್ದಕ್ಕೆ ಇಸ್ರೇಲ್ ಖಡಕ್ ಪ್ರತಿಕ್ರಿಯೆ ನೀಡಿದೆ. "ಅಗತ್ಯ ಇರುವ ವರೆಗೆ ಇರಾನ್ನೊಂದಿಗೆ ಯುದ್ಧ ಮುಂದುವರಿಸಲು ನಾವು ಸಿದ್ಧರಿದ್ದೇವೆ" ಎಂದು ಇಸ್ರೇಲ್ನ ಸೇನಾ ವಕ್ತಾರರು ಹೇಳಿದ್ದಾರೆ. ಇತ್ತೀಚೆಗಷ್ಟೇ ದಾಳಿ ನಡೆಸಿದ್ದ ಇಸ್ರೇಲ್ ಪಡೆಗಳು ಸಮುದ್ರದಲ್ಲಿ ಬಾಂಬ್ ಇಡುತ್ತಿದ್ದ ಇರಾನ್ನ 16 ಹಡಗುಗಳನ್ನು ಧ್ವಂಸ ಮಾಡಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಅಮೆರಿಕದ ತೈಲ ಟ್ಯಾಂಕರ್ ಮೇಲೆ ದಾಳಿ ನಡೆಸಿ ತೀವ್ರ ಹಾನಿ ಉಂಟು ಮಾಡಿದೆ. ಈ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವಿಗೀಡಾಗಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm