ಬ್ರೇಕಿಂಗ್ ನ್ಯೂಸ್
14-03-26 07:38 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 14: ಇರಾನ್–ಇಸ್ರೇಲ್ ಮತ್ತು ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿ ಇದೀಗ ವಿಮಾನಯಾನ ಕ್ಷೇತ್ರಕ್ಕೂ ತಟ್ಟಿದೆ. ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ತನ್ನ ವಿಮಾನ ಟಿಕೆಟ್ಗಳ ಮೇಲೆ ಇಂಧನ ಸರ್ಚಾರ್ಜ್ ವಿಧಿಸುವುದಾಗಿ ಘೋಷಿಸಿದೆ.
ಯುದ್ಧ ಪರಿಸ್ಥಿತಿಯಿಂದಾಗಿ ವಿಮಾನ ಯಾನ ಟರ್ಬೈನ್ ಇಂಧನ (ಎಟಿಎಫ್) ಬೆಲೆಗಳು ಏರಿಕೆಯಾಗಿದ್ದು, ಇದರಿಂದ ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣಾ ವೆಚ್ಚ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂಡಿಗೋ ಇಂದಿನಿಂದ ಅಂದರೆ ಮಾ.14ರಿಂದ ಟಿಕೆಟ್ಗಳ ಮೇಲೆ ಹೆಚ್ಚುವರಿ ಇಂಧನ ಶುಲ್ಕವನ್ನು ವಿಧಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸ ದರಗಳ ಪ್ರಕಾರ, ಭಾರತ ಒಳನಾಡು ವಿಮಾನ ಪ್ರಯಾಣಕ್ಕೆ 425 ರೂ. ಇಂಧನ ಸರ್ಚಾರ್ಜ್ ವಿಧಿಸಲಾಗುತ್ತದೆ. ಮಧ್ಯಪ್ರಾಚ್ಯ ದೇಶಗಳಿಗೆ ಪ್ರಯಾಣಿಸುವವರಿಗೆ 900 ರೂ. ಶುಲ್ಕ ನಿಗದಿಪಡಿಸಲಾಗಿದೆ. ದಕ್ಷಿಣ–ಪೂರ್ವ ಏಷ್ಯಾ ಮತ್ತು ಚೀನಾ ಮಾರ್ಗಗಳಿಗೆ 1,800 ರೂ. ಇಂಧನ ಶುಲ್ಕ ಇರಲಿದೆ. ಯೂರೋಪ್ ದೇಶಗಳಿಗೆ ಪ್ರಯಾಣಿಸುವವರಿಗೆ 2,300 ರೂ. ಸರ್ಚಾರ್ಜ್ ವಿಧಿಸಲಾಗುತ್ತದೆ. ಈ ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.
ಇಂಧನ ಸರಬರಾಜಿನ ಅನಿಶ್ಚಿತತೆ ಹಾಗೂ ಕೆಲವು ವಾಯು ಮಾರ್ಗಗಳಲ್ಲಿ ಉಂಟಾದ ಅಡಚಣೆಗಳಿಂದಾಗಿ ವಿಮಾನಯಾನ ವೆಚ್ಚ ಹೆಚ್ಚಾಗಿದೆ. ವಿಮಾನಯಾನ ಟರ್ಬೈನ್ ಇಂಧನವು ವಿಮಾನಯಾನ ಸಂಸ್ಥೆಗಳ ಒಟ್ಟು ನಿರ್ವಹಣಾ ವೆಚ್ಚದ ಪ್ರಮುಖ ಭಾಗವಾಗಿದ್ದು, ಸಾಮಾನ್ಯವಾಗಿ 35 ರಿಂದ 40 ಶೇಕಡಾ ವೆಚ್ಚವನ್ನು ಇದುವೇ ಹೊಂದಿದೆ ಎಂದು ಉದ್ಯಮ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇಂಧನ ಸರ್ಚಾರ್ಜ್ ದೇಶೀಯ ಮತ್ತು ಅಂತರರಾಷ್ಟ್ರೀಯ ಟಿಕೆಟ್ಗಳಿಗೂ ಅನ್ವಯವಾಗಲಿದೆ. ಮಾರ್ಗದ ದೂರ ಹಾಗೂ ಟಿಕೆಟ್ ದರ ವರ್ಗವನ್ನು ಅವಲಂಬಿಸಿ ಶುಲ್ಕದಲ್ಲಿ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇದೆ. ಇಂಧನ ಬೆಲೆ ಏರಿಕೆ ಮತ್ತು ವಾಯುಪ್ರದೇಶದ ನಿರ್ಬಂಧಗಳಿಂದ ವಿಮಾನ ಕಾರ್ಯಾಚರಣೆಗಳು ಹೆಚ್ಚು ಸವಾಲಿನದ್ದಾಗಿವೆ ಎಂದು ತಜ್ಞರು ತಿಳಿಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am