ಬ್ರೇಕಿಂಗ್ ನ್ಯೂಸ್
14-03-26 07:38 pm HK News Staffer ದೇಶ - ವಿದೇಶ
ನವದೆಹಲಿ, ಮಾರ್ಚ್ 14: ಇರಾನ್–ಇಸ್ರೇಲ್ ಮತ್ತು ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿ ಇದೀಗ ವಿಮಾನಯಾನ ಕ್ಷೇತ್ರಕ್ಕೂ ತಟ್ಟಿದೆ. ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ತನ್ನ ವಿಮಾನ ಟಿಕೆಟ್ಗಳ ಮೇಲೆ ಇಂಧನ ಸರ್ಚಾರ್ಜ್ ವಿಧಿಸುವುದಾಗಿ ಘೋಷಿಸಿದೆ.
ಯುದ್ಧ ಪರಿಸ್ಥಿತಿಯಿಂದಾಗಿ ವಿಮಾನ ಯಾನ ಟರ್ಬೈನ್ ಇಂಧನ (ಎಟಿಎಫ್) ಬೆಲೆಗಳು ಏರಿಕೆಯಾಗಿದ್ದು, ಇದರಿಂದ ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣಾ ವೆಚ್ಚ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂಡಿಗೋ ಇಂದಿನಿಂದ ಅಂದರೆ ಮಾ.14ರಿಂದ ಟಿಕೆಟ್ಗಳ ಮೇಲೆ ಹೆಚ್ಚುವರಿ ಇಂಧನ ಶುಲ್ಕವನ್ನು ವಿಧಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹೊಸ ದರಗಳ ಪ್ರಕಾರ, ಭಾರತ ಒಳನಾಡು ವಿಮಾನ ಪ್ರಯಾಣಕ್ಕೆ 425 ರೂ. ಇಂಧನ ಸರ್ಚಾರ್ಜ್ ವಿಧಿಸಲಾಗುತ್ತದೆ. ಮಧ್ಯಪ್ರಾಚ್ಯ ದೇಶಗಳಿಗೆ ಪ್ರಯಾಣಿಸುವವರಿಗೆ 900 ರೂ. ಶುಲ್ಕ ನಿಗದಿಪಡಿಸಲಾಗಿದೆ. ದಕ್ಷಿಣ–ಪೂರ್ವ ಏಷ್ಯಾ ಮತ್ತು ಚೀನಾ ಮಾರ್ಗಗಳಿಗೆ 1,800 ರೂ. ಇಂಧನ ಶುಲ್ಕ ಇರಲಿದೆ. ಯೂರೋಪ್ ದೇಶಗಳಿಗೆ ಪ್ರಯಾಣಿಸುವವರಿಗೆ 2,300 ರೂ. ಸರ್ಚಾರ್ಜ್ ವಿಧಿಸಲಾಗುತ್ತದೆ. ಈ ನೂತನ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.
ಇಂಧನ ಸರಬರಾಜಿನ ಅನಿಶ್ಚಿತತೆ ಹಾಗೂ ಕೆಲವು ವಾಯು ಮಾರ್ಗಗಳಲ್ಲಿ ಉಂಟಾದ ಅಡಚಣೆಗಳಿಂದಾಗಿ ವಿಮಾನಯಾನ ವೆಚ್ಚ ಹೆಚ್ಚಾಗಿದೆ. ವಿಮಾನಯಾನ ಟರ್ಬೈನ್ ಇಂಧನವು ವಿಮಾನಯಾನ ಸಂಸ್ಥೆಗಳ ಒಟ್ಟು ನಿರ್ವಹಣಾ ವೆಚ್ಚದ ಪ್ರಮುಖ ಭಾಗವಾಗಿದ್ದು, ಸಾಮಾನ್ಯವಾಗಿ 35 ರಿಂದ 40 ಶೇಕಡಾ ವೆಚ್ಚವನ್ನು ಇದುವೇ ಹೊಂದಿದೆ ಎಂದು ಉದ್ಯಮ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇಂಧನ ಸರ್ಚಾರ್ಜ್ ದೇಶೀಯ ಮತ್ತು ಅಂತರರಾಷ್ಟ್ರೀಯ ಟಿಕೆಟ್ಗಳಿಗೂ ಅನ್ವಯವಾಗಲಿದೆ. ಮಾರ್ಗದ ದೂರ ಹಾಗೂ ಟಿಕೆಟ್ ದರ ವರ್ಗವನ್ನು ಅವಲಂಬಿಸಿ ಶುಲ್ಕದಲ್ಲಿ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇದೆ. ಇಂಧನ ಬೆಲೆ ಏರಿಕೆ ಮತ್ತು ವಾಯುಪ್ರದೇಶದ ನಿರ್ಬಂಧಗಳಿಂದ ವಿಮಾನ ಕಾರ್ಯಾಚರಣೆಗಳು ಹೆಚ್ಚು ಸವಾಲಿನದ್ದಾಗಿವೆ ಎಂದು ತಜ್ಞರು ತಿಳಿಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm