ಬ್ರೇಕಿಂಗ್ ನ್ಯೂಸ್
15-03-26 05:37 pm HK News Desk ದೇಶ - ವಿದೇಶ
ಟೆಹ್ರಾನ್, ಮಾರ್ಚ್ 15: ಇಸ್ರೇಲ್ ಮತ್ತು ಅಮೆರಿಕದ ಗುಪ್ತಚರ ಸಂಸ್ಥೆಗಳ ಹದ್ದಿನ ಕಣ್ಣು ಹಾಗೂ ಸರಣಿ ಬಾಂಬ್ ದಾಳಿಯ ಮಧ್ಯೆಯೇ ಇರಾನ್ ಪರಮೋಚ್ಚ ನಾಯಕ ಮೊಜ್ತಬಾ ಅಲಿ ಖಮೇನಿ ಅವರು ಸದ್ದಿಲ್ಲದೆ ರಷ್ಯಾಕ್ಕೆ ಎಸ್ಕೇಪ್ ಆಗಿದ್ದಾರೆ. ಅವರನ್ನು ರಷ್ಯಾದ ರಾಡಾರ್ ಕಣ್ಣಿಗೆ ಸಿಗದ ವಿಮಾನವೊಂದು ಇರಾನ್ ರಾಜಧಾನಿಗೆ ಬಂದು ರೊಯ್ಯನೆ ತನ್ನ ದೇಶಕ್ಕೆ ಕರೆದೊಯ್ದು ಚಿಕಿತ್ಸೆಗೆ ವ್ಯವಸ್ಥೆ ಮಾಡಿದೆ ಎಂದು ಅಲ್ ಜರೀದಾ ಎನ್ನುವ ಗಲ್ಫ್ ಮೂಲದ ಪತ್ರಿಕೆಯೊಂದು ವರದಿ ಮಾಡಿದೆ.
ಫೆ.28ರಂದು ಇಸ್ರೇಲ್ ದಾಳಿಯಲ್ಲಿ ಇರಾನ್ ನಾಯಕ ಅಯತೊಲ್ಲಾ ಖಮೇನಿ ಮತ್ತು ಅವರ ಕುಟುಂಬಸ್ಥರು ಸಾವಿಗೀಡಾಗಿದ್ದರು. ಅದೇ ಸಂದರ್ಭದಲ್ಲಿ ಪುತ್ರ ಮೊಜ್ತಬಾ ಖಮೇನಿಗೂ ತೀವ್ರ ಗಾಯಗಳಾಗಿದ್ದವು. ಆದರೆ ಈ ನಡುವೆ, ಅವರನ್ನೇ ಮುಂದಿನ ಪರಮೋಚ್ಚ ನಾಯಕನಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಅವರು ಜೀವಂತ ಇದ್ದಾರೆಯೇ, ಸೀರಿಯಸ್ ಸ್ಥಿತಿಯಲ್ಲಿ ಉಳಿದುಕೊಂಡಿದ್ದಾರೆಯೇ ಎಂಬ ಬಗ್ಗೆ ವದಂತಿಗಳಿದ್ದವು. ಹೀಗಾಗಿ ಮೊಜ್ತಾಬಾ ಎಲ್ಲಿದ್ದಾರೆಂದು ತಿಳಿಯಲು ಅಮೆರಿಕ- ಇಸ್ರೇಲ್ ಹದ್ದಿನ ಕಣ್ಣಿಟ್ಟಿದ್ದವು.
ಇದೇ ಸಮಯದಲ್ಲಿ, ರಷ್ಯಾದ ವಿಶೇಷ ಮಿಲಿಟರಿ ವಿಮಾನವೊಂದು ಇರಾನ್ನಿಂದ ಹಾರಾಟ ನಡೆಸಿರುವುದು ಪತ್ತೆಯಾಗಿದೆ. ಶತ್ರು ದೇಶಗಳ ಕ್ಷಿಪಣಿ ನಿರೋಧಕ ವ್ಯವಸ್ಥೆಗಳನ್ನು ಮತ್ತು ರಾಡಾರ್ಗಳನ್ನು ವಂಚಿಸಿ, ಬಾಂಬ್ ಸುರಿಮಳೆ ನಡುವೆಯೇ ಈ ವಿಮಾನವು ಮೊಜ್ತಾಬಾ ಅವರನ್ನು ಸುರಕ್ಷಿತವಾಗಿ ರಷ್ಯಾಕ್ಕೆ ತಲುಪಿಸಿದೆ ಎಂದು ಕುವೈತ್ ಪತ್ರಿಕೆ ಅಲ್-ಜರಿದಾ ವರದಿಯೊಂದು ಹೇಳಿದ್ದು ಇಸ್ರೇಲ್- ಅಮೆರಿಕ ಪಾಲಿಗೆ ಮುಖಕ್ಕೆ ಹೊಡೆದಂತಾಗಿದೆ.
ಆರೋಗ್ಯದ ಸ್ಥಿತಿ ಮತ್ತು ಶಸ್ತ್ರಚಿಕಿತ್ಸೆ !
ವರದಿಗಳ ಪ್ರಕಾರ, ಮೊಜ್ತಾಬಾ ಅವರಿಗೆ ಕಾಲುಗಳ ಭಾಗದಲ್ಲಿ ಬಲವಾದ ಪೆಟ್ಟು ಬಿದ್ದಿದ್ದು, ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿತ್ತು. ಇರಾನ್ನಲ್ಲಿ ಭದ್ರತಾ ದೃಷ್ಟಿಯಿಂದ ಚಿಕಿತ್ಸೆ ನೀಡುವುದು ಅಪಾಯಕಾರಿ ಎಂದು ಭಾವಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅವರಿಗೆ ಮಾಸ್ಕೋದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಅವರು ಮಾಸ್ಕೋದ ರಹಸ್ಯ ಸ್ಥಳವೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಇರಾನ್ ಸರ್ಕಾರ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.
ಇರಾನಿನ ಇತರ ನಾಯಕರು, "ಮೊಜ್ತಬಾ ಖಮೇನಿ ಸುರಕ್ಷಿತವಾಗಿದ್ದಾರೆ ಮತ್ತು ದೇಶದಲ್ಲೇ ಇದ್ದಾರೆ" ಎಂದು ಹೇಳುತ್ತಿದ್ದರೂ, ಮೊಜ್ತಾಬಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಮತ್ತು ಇದೇ ವೇಳೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಖಮೇನಿ ಜೀವಂತ ಇದ್ದಾರೆ ಅಷ್ಟೇ ಎಂದು ಹೇಳಿದ್ದು ಅವರ ದೈಹಿಕ ಸ್ಥಿತಿಯ ಸಂಶಯ ಹುಟ್ಟಿಕೊಳ್ಳುವಂತೆ ಮಾಡಿತ್ತು. ಇತ್ತ ರಷ್ಯಾ ಕೂಡ ಈ ಬಗ್ಗೆ ಮೌನ ತಾಳಿದ್ದು, ಕುತೂಹಲ ಕೆರಳಿಸಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am