ಬ್ರೇಕಿಂಗ್ ನ್ಯೂಸ್
16-03-26 12:34 pm HK News Staffer ದೇಶ - ವಿದೇಶ
ಕಟಕ್, ಮಾರ್ಚ್ 16: ಒಡಿಶಾ ರಾಜ್ಯದ ಕಟಕ್ ನಗರದಲ್ಲಿರುವ ಎಸ್ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10 ರೋಗಿಗಳು ಮೃತಪಟ್ಟಿದ್ದು, 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿ ಗಾಯಗೊಂಡಿದ್ದಾರೆ.
ಮಧ್ಯರಾತ್ರಿ 2.30ರಿಂದ 3 ಗಂಟೆಯ ಅವಧಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಘಟನೆಯ ವೇಳೆ ಐಸಿಯುನಲ್ಲಿ ಗಂಭೀರವಾಗಿ ಗಾಯಗೊಂಡ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಬೆಂಕಿ ಅವಘಡದ ಪರಿಣಾಮ ಐಸಿಯುನಲ್ಲಿದ್ದ 10 ರೋಗಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೋಗಿಗಳನ್ನು ರಕ್ಷಿಸಲು ಯತ್ನಿಸಿದ ಆಸ್ಪತ್ರೆ ಸಿಬ್ಬಂದಿಯಲ್ಲಿ 11 ಮಂದಿಗೆ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿ ಅವಘಡದ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಬಳಿಕ ಐಸಿಯುನಲ್ಲಿದ್ದ ಇತರ ರೋಗಿಗಳನ್ನು ತುರ್ತಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಸ್ಥಳಾಂತರಿಸಲಾಗಿದೆ. ಒಟ್ಟು 23 ರೋಗಿಗಳನ್ನು ಬೇರೆ ವಾರ್ಡ್ಗಳಿಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರ್ಘಟನೆ ಹಿನ್ನೆಲೆಯಲ್ಲಿ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹಾಗೂ ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಆಸ್ಪತ್ರೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮೃತಪಟ್ಟ ರೋಗಿಗಳ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಜೊತೆಗೆ ಗಾಯಗೊಂಡಿರುವ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರಕುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am