ಬ್ರೇಕಿಂಗ್ ನ್ಯೂಸ್
22-03-26 03:14 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 22: ಅಮೆರಿಕ- ಇಸ್ರೇಲ್ ದಾಳಿಯಲ್ಲಿ ತನ್ನ ನಟಾಂಜಾ ಪರಮಾಣು ಸ್ಥಾವರವನ್ನು ಗುರಿಯಾಗಿಸಿದ್ದಕ್ಕೆ ಇರಾನ್ ಕೂಡ ಇಸ್ರೇಲ್ ನ್ಯೂಕ್ಲಿಯರ್ ರಿಯಾಕ್ಟರ್ ಗುರಿಯಾಗಿಸಿ ದಾಳಿ ನಡೆಸಿದೆ. ಶನಿವಾರ ರಾತ್ರಿ ಮಿಸೈಲ್ ದಾಳಿ ನಡೆಸಿರುವ ಇರಾನ್, ಇಸ್ರೇಲ್ ನಲ್ಲಿರುವ ಪ್ರಮುಖ ಅಣು ಸ್ಥಾವರ ಡಿಮೋನಾ ಮತ್ತು ಅರಾದ್ ನಲ್ಲಿ ಭಾರೀ ನಷ್ಟ ಉಂಟು ಮಾಡಿದೆ.
ಮುಯ್ಯಿಗೆ ಮುಯ್ಯಿ ಎನ್ನುವಂತೆ ಇರಾನ್, ಡಿಮೋನಾದಲ್ಲಿರುವ ಶಿಮೋನ್ ಪೆರೇಸ್ ನೆಗೆವ್ ನ್ಯೂಕ್ಲಿಯರ್ ರೀಸರ್ಚ್ ಸೆಂಟರ್ ಮತ್ತು ಅರಾದ್ ನ್ಯೂಕ್ಲಿಯರ್ ಘಟಕದ ಮೇಲೆ ದಾಳಿ ನಡೆಸಿದೆ. ಅಲ್ಲಿರುವ ಜನವಸತಿ ಕಟ್ಟಡಗಳು ಮತ್ತು ಇತರ ಕಟ್ಟಡಗಳ ಮೇಲೆ ಎರಡು ಬ್ಯಾಲಿಸ್ಟಿಕ್ ಮಿಸೈಲ್ ಅಪ್ಪಳಿಸಿದ್ದು ನೂರಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ. ಮಿಸೈಲ್ ವಿರೋಧಿ ವ್ಯವಸ್ಥೆಯ ಹೊರತಾಗಿಯೂ ಎರಡು ಕ್ಷಿಪಣಿಗಳು ಶನಿವಾರ ರಾತ್ರಿ ನೇರವಾಗಿ ಬಂದು ಬಿದ್ದಿದ್ದು ಇಸ್ರೇಲ್ ದೊಡ್ಡ ಮಟ್ಟದ ಹಾನಿ ಅನುಭವಿಸಿದೆ. ಮಾಹಿತಿ ಪ್ರಕಾರ, ಅರಾದ್ ನಲ್ಲಿ 84 ಜನ ಗಾಯಗೊಂಡಿದ್ದು, ಅದರಲ್ಲಿ 10 ಮಂದಿ ತೀವ್ರ ಗಾಯಗೊಂಡಿದ್ದಾರೆ. ಡಿಮೋನಾದಲ್ಲಿ 33 ಮಂದಿ ಗಾಯಗೊಂಡಿದ್ದಾರೆ.
ಕಟ್ಟಡ ಪೂರ್ತಿ ನಾಶಗೊಂಡಿರುವುದರಿಂದ ದೊಡ್ಡ ಮಟ್ಟದ ಹಾನಿಯಾಗಿರುವ ಬಗ್ಗೆ ಶಂಕೆಯಿದೆ. ಮಿಸೈಲ್ ದಾಳಿಯಾಗಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕಾಶದಿಂದ ಬೆಂಕಿಯುಂಡೆ ನುಗ್ಗಿ ಬಂದಿರುವಂತೆ ತೋರಿದೆ. ದಾಳಿ ಘಟನೆಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಈ ದಿನ ಭಾರೀ ಕಷ್ಟದ ಸಂಜೆಯಾಗಿತ್ತು ಎಂದು ಹೇಳಿದ್ದಾರೆ. ತುರ್ತು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದು ಜನರು ಭದ್ರತಾ ಪಡೆಗಳ ಸೂಚನೆಯನ್ನು ಪಾಲಿಸಬೇಕೆಂದು ಸೂಚಿಸಿದ್ದಾರೆ. ಇದೇ ವೇಳೆ, ಶತ್ರುಗಳ ಮೇಲಿನ ದಾಳಿಯು ಇನ್ನಷ್ಟು ತೀವ್ರಗೊಳ್ಳಲಿದೆ ಎಂದವರು ಹೇಳಿದ್ದಾರೆ.


ಶನಿವಾರ ಇರಾನ್ ದೇಶದ ಅತಿದೊಡ್ಡ ಪರಮಾಣು ರಿಯಾಕ್ಟರ್ ಇರುವ ನಟಾಂಜ್ ಮೇಲೆ ಅಮೆರಿಕ ದಾಳಿ ನಡೆಸಿತ್ತು. ಯುದ್ಧ ಮೊದಲ್ಗೊಂಡ 22 ದಿನಗಳ ಬಳಿಕ ಮೊದಲ ಬಾರಿಗೆ ಅಮೆರಿಕ ನ್ಯೂಕ್ಲಿಯರ್ ಸ್ಥಾವರಗಳನ್ನು ಗುರಿಯಾಗಿಸಿತ್ತು. ಘಟನೆಯಲ್ಲಿ ಹಲವಾರು ಕಟ್ಟಡಗಳಿಗೆ ಹಾನಿಯಾಗಿದ್ದರೂ, ಅಣು ಸ್ಥಾವರಕ್ಕೆ ಹಾನಿಯಾಗಿಲ್ಲ, ಅದರಿಂದ ವಿಕಿರಣ ಹೊರಬಂದಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm