ಬ್ರೇಕಿಂಗ್ ನ್ಯೂಸ್
23-03-26 09:46 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 23: ಕಳೆದ 24 ದಿನಗಳಿಂದ ನೀನಾ ನಾನಾ ಎಂದು ಯುದ್ಧ ನಡೆಸುತ್ತಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಸದ್ಯಕ್ಕೆ ಶಮನಗೊಳ್ಳುವ ಮುನ್ಸೂಚನೆ ಸಿಕ್ಕಿದೆ. ದಿಢೀರ್ ಎನ್ನುವಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐದು ದಿನಗಳ ಕದನ ವಿರಾಮ ಘೋಷಿಸಿದ್ದಾರೆ. ಇರಾನ್ ಇಂಧನ ಮತ್ತು ವಿದ್ಯುತ್ ಸ್ಥಾವರಗಳ ಮೇಲೆ ನಡೆಸಲು ಯೋಜಿಸಿದ್ದ ಮಿಲಿಟರಿ ದಾಳಿಯನ್ನು ಐದು ದಿನಗಳ ಕಾಲ ಮುಂದೂಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಟ್ರಂಪ್, “ಕಳೆದ ಎರಡು ದಿನಗಳಿಂದ ವಾಷಿಂಗ್ಟನ್ ಮತ್ತು ಇರಾನ್ ನಡುವೆ ಅತ್ಯಂತ ರಚನಾತ್ಮಕ ಮಾತುಕತೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಇರಾನ್ನ ಇಂಧನ ಮೂಲಸೌಕರ್ಯಗಳ ಮೇಲೆ ನಡೆಸಬೇಕಿದ್ದ ಎಲ್ಲಾ ದಾಳಿಗಳನ್ನು ಐದು ದಿನಗಳ ಕಾಲ ಸ್ಥಗಿತಗೊಳಿಸುವಂತೆ ಮಿಲಿಟರಿ ಇಲಾಖೆಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳನ್ನು ನಾಶ ಪಡಿಸುವುದಾಗಿ ಟ್ರಂಪ್ ಈ ಹಿಂದೆ 48 ಗಂಟೆಗಳ ಗಡುವು ನೀಡಿದ್ದರು. ಈ ಗಡುವು ಭಾರತ ಕಾಲಮಾನ ಮಾರ್ಚ್ 24ರ ಬೆಳಗ್ಗೆ 5 ಗಂಟೆಗೆ ಮುಗಿಯಲಿದೆ. ಇದರ ನಡುವಲ್ಲೇ, ಟ್ರಂಪ್ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಅಮೆರಿಕದ ಬೆದರಿಕೆಗೆ ಪ್ರತಿಯಾಗಿ ಇರಾನ್ ಕೂಡ ಅಮೆರಿಕದ ನೆಲೆಗಳ ಮೇಲೆ ದಾಳಿ ನಡೆಸುವ ಎಚ್ಚರಿಕೆ ನೀಡಿತ್ತು. ಆದರೆ, ಈಗ ಎರಡೂ ದೇಶಗಳು ಮಾತುಕತೆಯ ಹಾದಿ ಹಿಡಿದಿರುವುದು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಸಮಾಧಾನ ತಂದಿದೆ.
ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಘೋಷಣೆಗೆ ಇರಾನ್ ಅಧಿಕೃತವಾಗಿ ಪ್ರತಿಕ್ರಿಯೆ ನೀಡದಿದ್ದರೂ, ಇತರೇ ಮೂಲಗಳು ಟ್ರಂಪ್ ಮಂಡಿಯೂರಿದ್ದಾರೆ ಎಂದು ಕಟಕಿಯಾಡಿವೆ. ಆಫ್ಘಾನಿಸ್ತಾನದಲ್ಲಿರುವ ಇರಾನ್ ರಾಯಭಾರ ಕಚೇರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಖಾರವಾಗಿ ಪ್ರತಿಕ್ರಿಯೆ ನೀಡಿದೆ. ಇರಾನ್ನ ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ. ಒಂದು ವೇಳೆ ನಮ್ಮ ಮೂಲಸೌಕರ್ಯದ ಮೇಲೆ ದಾಳಿ ಮಾಡಿದರೆ ಅದೇ ರೀತಿಯ ಪ್ರತಿ ದಾಳಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದೆವು. ಈ ಎಚ್ಚರಿಕೆ ನೀಡಿದ ಬೆನ್ನಲ್ಲೇ ಟ್ರಂಪ್ ದಾಳಿಯಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಿದೆ.
ಇದಕ್ಕೂ ಮುನ್ನ ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಪ್ರತಿಕ್ರಿಯಿಸಿ, ನಾವು ಯಾವುದೇ ಶಾಂತಿ ಮಾತುಕತೆಯನ್ನು ನಡೆಸಿಲ್ಲ. ಯುದ್ಧವನ್ನು ನಿಲ್ಲಿಸಬೇಕಾದರೆ ನೀವು ಅಮೆರಿಕದ ಜೊತೆ ಮಾತನಾಡಿ. ನಾವೆಂದೂ ದಾಳಿ ಮಾಡಿಲ್ಲ. ಅವರು ದಾಳಿ ಮಾಡಿದ್ದಕ್ಕೆ ಉತ್ತರ ನೀಡಿದ್ದೇವಷ್ಟೆ ಎಂದು ಗಲ್ಫ್ ದೇಶಗಳಿಗೆ ಸೂಚಿಸಿದ್ದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm