ಬ್ರೇಕಿಂಗ್ ನ್ಯೂಸ್
24-03-26 12:10 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 24: ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಇರಾನ್ ನಿಂದ ಕಠಿಣ ಬೆದರಿಕೆಗಳು ಹೊರಬಂದಿವೆ. ‘ನಮ್ಮ ವಿದ್ಯುತ್ ಘಟಕಗಳಿಗೆ ದಾಳಿ ಮಾಡಿದರೆ, ನಾವು ಸಹ ಅದನ್ನೇ ಮಾಡುತ್ತೇವೆ. ಕರಾವಳಿ ಮತ್ತು ದ್ವೀಪಗಳನ್ನು ಗುರಿಯಾಗಿಸಿದರೆ, ಪರ್ಶಿಯನ್ ಕೊಲ್ಲಿಯಲ್ಲಿ ಸಮುದ್ರ ಸ್ಫೋಟಕಗಳನ್ನು ಅಳವಡಿಸುತ್ತೇವೆ’ ಎಂದು ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕೋರ್ ಸ್ಪಷ್ಟಪಡಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 48 ಗಂಟೆಯೊಳಗೆ ಹೋರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವಂತೆ ಬೆದರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಇರಾನ್, “ನಮ್ಮ ವಿದ್ಯುತ್ ಘಟಕಗಳಿಗೆ ಹಾನಿ ಮಾಡಿದರೆ ಪ್ರತಿದಾಳಿ ಖಚಿತ” ಎಂದು ತಿಳಿಸಿದೆ. ಇರಾನ್ ರಕ್ಷಣಾ ಮಂಡಳಿಯು ಕರಾವಳಿ ಮತ್ತು ದ್ವೀಪಗಳ ಮೇಲೆ ದಾಳಿ ಮಾಡಲು ಯತ್ನಿಸಿದರೆ, ಎಲ್ಲಾ ಪ್ರವೇಶ ಮಾರ್ಗಗಳಲ್ಲಿ ಸ್ಫೋಟಕಗಳ ಹಾನಿ ಸಂಭವಿಸಲಿದೆ ಎಂದು ಎಚ್ಚರಿಸಿದೆ.
ಇರಾನ್ ವಿದೇಶಾಂಗ ಇಲಾಖೆ ಮತ್ತು ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಘೇರ್ ಈ ಸಂದರ್ಭ ಯಾವುದೇ ಅಮೆರಿಕ–ಇರಾನ್ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದು, ಅಮೆರಿಕದ ಹೇಳಿಕೆ ‘ಇಂಧನ ಬೆಲೆ ನಿಯಂತ್ರಣ ತಂತ್ರ’ ಮಾತ್ರ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರ 5 ದಿನದ ಕದನವಿರಾಮ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವಾಲಯ, ‘ಟೆಹ್ರಾನ್ ಮತ್ತು ವಾಷಿಂಗ್ಟನ್ ನಡುವೆ ಯಾವುದೇ ಮಾತುಕತೆಗಳು ನಡೆದಿಲ್ಲ. ಟ್ರಂಪ್ ಅವರ ಹೇಳಿಕೆಯು, ಏರುತ್ತಿರುವ ಇಂಧನ ಬೆಲೆಗಳನ್ನು ಕಡಿಮೆ ಮಾಡುವ ತಂತ್ರವಾಗಿದೆ’ ಎಂದು ಸ್ಪಷ್ಟಪಡಿಸಿದೆ. ಇದಕ್ಕೂ ಮುನ್ನ, ’ಇರಾನ್ನ ಪ್ರತಿದಾಳಿ ಬೆದರಿಕೆಗೆ ಬಗ್ಗಿ ಟ್ರಂಪ್ ಕದನವಿರಾಮದ ಮಾತು ಆಡಿದ್ದಾರೆ’ ಎಂದು ಇರಾನ್ ಸರ್ಕಾರಿ ಟಿವಿ ವರದಿ ಮಾಡಿತ್ತು.
ಈ ನಡುವೆ ಭಾರತೀಯ ಧ್ವಜ ಹೊತ್ತ ಎಲ್ಪಿಜಿ ಹಡಗುಗಳು ಪರ್ಶಿಯನ್ ಕೊಲ್ಲಿಯಿಂದ ಭಾರತಕ್ಕೆ ಪ್ರಯಾಣ ಆರಂಭಿಸಿವೆ. ಲಾರ್ಕ್ ಮತ್ತು ಕೆಶ್ಮ್ ದ್ವೀಪಗಳ ಹತ್ತಿರ ಹಡಗುಗಳು ಸಾಗುತ್ತಿದ್ದು, ಹೋರ್ಮುಜ್ ದಾಟುವ ಮೊದಲು ಇರಾನಿನ ಅಧಿಕಾರಿಗಳಿಗೆ ಗುರುತಿನ ಮಾಹಿತಿ ನೀಡಲು ನಿಧಾನಿಸಬಹುದೆಂದು ತಿಳಿಯುತ್ತಿದೆ. ಶಿವಾಲಿಕ್, ನಂದಾದೇವಿ, ಜಗ್ ಲಾಡ್ಕಿ ಮತ್ತು ಜಗ್ ಪ್ರಕಾಶ್ ಹಡಗುಗಳು ಈಗಾಗಲೇ ಭಾರತದತ್ತ ಸಾಗಿವೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm