ಬ್ರೇಕಿಂಗ್ ನ್ಯೂಸ್
24-03-26 12:10 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 24: ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಇರಾನ್ ನಿಂದ ಕಠಿಣ ಬೆದರಿಕೆಗಳು ಹೊರಬಂದಿವೆ. ‘ನಮ್ಮ ವಿದ್ಯುತ್ ಘಟಕಗಳಿಗೆ ದಾಳಿ ಮಾಡಿದರೆ, ನಾವು ಸಹ ಅದನ್ನೇ ಮಾಡುತ್ತೇವೆ. ಕರಾವಳಿ ಮತ್ತು ದ್ವೀಪಗಳನ್ನು ಗುರಿಯಾಗಿಸಿದರೆ, ಪರ್ಶಿಯನ್ ಕೊಲ್ಲಿಯಲ್ಲಿ ಸಮುದ್ರ ಸ್ಫೋಟಕಗಳನ್ನು ಅಳವಡಿಸುತ್ತೇವೆ’ ಎಂದು ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕೋರ್ ಸ್ಪಷ್ಟಪಡಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 48 ಗಂಟೆಯೊಳಗೆ ಹೋರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವಂತೆ ಬೆದರಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಇರಾನ್, “ನಮ್ಮ ವಿದ್ಯುತ್ ಘಟಕಗಳಿಗೆ ಹಾನಿ ಮಾಡಿದರೆ ಪ್ರತಿದಾಳಿ ಖಚಿತ” ಎಂದು ತಿಳಿಸಿದೆ. ಇರಾನ್ ರಕ್ಷಣಾ ಮಂಡಳಿಯು ಕರಾವಳಿ ಮತ್ತು ದ್ವೀಪಗಳ ಮೇಲೆ ದಾಳಿ ಮಾಡಲು ಯತ್ನಿಸಿದರೆ, ಎಲ್ಲಾ ಪ್ರವೇಶ ಮಾರ್ಗಗಳಲ್ಲಿ ಸ್ಫೋಟಕಗಳ ಹಾನಿ ಸಂಭವಿಸಲಿದೆ ಎಂದು ಎಚ್ಚರಿಸಿದೆ.
ಇರಾನ್ ವಿದೇಶಾಂಗ ಇಲಾಖೆ ಮತ್ತು ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಘೇರ್ ಈ ಸಂದರ್ಭ ಯಾವುದೇ ಅಮೆರಿಕ–ಇರಾನ್ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದು, ಅಮೆರಿಕದ ಹೇಳಿಕೆ ‘ಇಂಧನ ಬೆಲೆ ನಿಯಂತ್ರಣ ತಂತ್ರ’ ಮಾತ್ರ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರ 5 ದಿನದ ಕದನವಿರಾಮ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವಾಲಯ, ‘ಟೆಹ್ರಾನ್ ಮತ್ತು ವಾಷಿಂಗ್ಟನ್ ನಡುವೆ ಯಾವುದೇ ಮಾತುಕತೆಗಳು ನಡೆದಿಲ್ಲ. ಟ್ರಂಪ್ ಅವರ ಹೇಳಿಕೆಯು, ಏರುತ್ತಿರುವ ಇಂಧನ ಬೆಲೆಗಳನ್ನು ಕಡಿಮೆ ಮಾಡುವ ತಂತ್ರವಾಗಿದೆ’ ಎಂದು ಸ್ಪಷ್ಟಪಡಿಸಿದೆ. ಇದಕ್ಕೂ ಮುನ್ನ, ’ಇರಾನ್ನ ಪ್ರತಿದಾಳಿ ಬೆದರಿಕೆಗೆ ಬಗ್ಗಿ ಟ್ರಂಪ್ ಕದನವಿರಾಮದ ಮಾತು ಆಡಿದ್ದಾರೆ’ ಎಂದು ಇರಾನ್ ಸರ್ಕಾರಿ ಟಿವಿ ವರದಿ ಮಾಡಿತ್ತು.
ಈ ನಡುವೆ ಭಾರತೀಯ ಧ್ವಜ ಹೊತ್ತ ಎಲ್ಪಿಜಿ ಹಡಗುಗಳು ಪರ್ಶಿಯನ್ ಕೊಲ್ಲಿಯಿಂದ ಭಾರತಕ್ಕೆ ಪ್ರಯಾಣ ಆರಂಭಿಸಿವೆ. ಲಾರ್ಕ್ ಮತ್ತು ಕೆಶ್ಮ್ ದ್ವೀಪಗಳ ಹತ್ತಿರ ಹಡಗುಗಳು ಸಾಗುತ್ತಿದ್ದು, ಹೋರ್ಮುಜ್ ದಾಟುವ ಮೊದಲು ಇರಾನಿನ ಅಧಿಕಾರಿಗಳಿಗೆ ಗುರುತಿನ ಮಾಹಿತಿ ನೀಡಲು ನಿಧಾನಿಸಬಹುದೆಂದು ತಿಳಿಯುತ್ತಿದೆ. ಶಿವಾಲಿಕ್, ನಂದಾದೇವಿ, ಜಗ್ ಲಾಡ್ಕಿ ಮತ್ತು ಜಗ್ ಪ್ರಕಾಶ್ ಹಡಗುಗಳು ಈಗಾಗಲೇ ಭಾರತದತ್ತ ಸಾಗಿವೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm