ಬ್ರೇಕಿಂಗ್ ನ್ಯೂಸ್
25-03-26 06:15 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 25: ಅಮೆರಿಕ- ಇರಾನ್ ಶಾಂತಿ ಮಾತುಕತೆಯ ಸಲುವಾಗಿ ಪಾಕಿಸ್ತಾನ ಮಧ್ಯವರ್ತಿ ಕೆಲಸವನ್ನು ಮಾಡಲು ಮುಂದಾಗಿದ್ದು, ಅಮೆರಿಕದ ಕಡೆಯಿಂದ 15 ಅಂಶಗಳ ಶರತ್ತುಗಳೊಂದಿಗೆ ಕದನ ವಿರಾಮ ಪ್ರಸ್ತಾಪವನ್ನು ಇರಾನ್ ನಾಯಕರಿಗೆ ತಲುಪಿಸಿದೆ. ಆದರೆ ಈ ಪ್ರಸ್ತಾಪಗಳಿಗೆ ಇರಾನ್ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಅಂತಾರಾಷ್ಟ್ರೀಯ ನಿರ್ಬಂಧಗಳು, ನಾಗರಿಕ ಪರಮಾಣು ಸಹಕಾರ, ಇರಾನ್ ನ್ಯೂಕ್ಲಿಯರ್ ಅಸ್ತ್ರಗಳ ಪರಿಶೀಲನೆ, ಅಂತಾರಾಷ್ಟ್ರೀಯ ಅಟಾಮಿಕ್ ಎನರ್ಜಿ ಏಜನ್ಸಿಯಿಂದ ತಪಾಸಣೆ, ಮಿಸೈಲ್ ನಿರ್ಬಂಧ ಹಾಗೂ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರ ಇತ್ಯಾದಿ ಅಂಶಗಳನ್ನು ಒಳಗೊಂಡ ಪ್ರಸ್ತಾಪವನ್ನು ಅಮೆರಿಕದ ಪರವಾಗಿ ಪಾಕಿಸ್ತಾನಿ ಅಧಿಕಾರಿಗಳು ತಯಾರಿಸಿದ್ದು, ಅದಕ್ಕೆ ಇರಾನ್ ನಾಯಕರನ್ನು ಒಪ್ಪಿಸಲು ಪಾಕ್ ಮುಂದಾಗಿದೆ.
ಒಂದೆಡೆ ಅಮೆರಿಕ ಶಾಂತಿ ಒಪ್ಪಂದಕ್ಕೆ ಮಾತುಕತೆ ಎನ್ನುತ್ತಿದ್ದರೆ, ಮತ್ತೊಂದೆಡೆ ಹೆಚ್ಚುವರಿ ಮಿಲಿಟರಿ ಪಡೆಗಳನ್ನು ಇರಾನ್ ಸುತ್ತಲಿನ ಸಮುದ್ರದಲ್ಲಿ ನಿಯೋಜನೆ ಮಾಡುತ್ತಿದೆ. ಶಾಂತಿ ಮಾತುಕತೆಯ ವಿಚಾರವನ್ನು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಮಾಡಲಾಗುತ್ತಿದ್ದರೂ, ಅದರ ಹಿಂದೆ ಯಾರಿದ್ದಾರೆ, ಏನೆಲ್ಲ ಶರತ್ತುಗಳಿವೆ ಎನ್ನುವ ಬಗ್ಗೆ ಅಧಿಕೃತವಾಗಿ ಹೇಳಲು ಮುಂದಾಗಿಲ್ಲವಾದರೂ, ಈ ರೀತಿಯ ಪ್ರಸ್ತಾಪವನ್ನು ಸಲ್ಲಿಸಲಾಗಿದೆ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ಅಸೋಸಿಯೇಟೆಡ್ ಪ್ರೆಸ್ ಸಂಸ್ಥೆಗೆ ತಿಳಿಸಿದ್ದಾರೆ.
ಇಸ್ರೇಲ್ ದಾಳಿ ಮುಂದುವರಿಕೆ:
ಇದೇ ವೇಳೆ, ಇಸ್ರೇಲ್ ಕಡೆಯಿಂದ ಇರಾನ್ ಮೇಲೆ ಬಾಂಬ್ ದಾಳಿ ಮುಂದುವರಿದಿದ್ದು ದಕ್ಷಿಣ ಇರಾನ್ ಮೇಲಿನ ದಾಳಿಯಲ್ಲಿ 12 ಮಂದಿ ಸತ್ತಿದ್ದು 28 ಮಂದಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಇದಲ್ಲದೆ, ಲೆಬನಾನ್ ಮತ್ತು ಗಾಜಾ ಪಟ್ಟಿ ಮೇಲೆಯೂ ಇಸ್ರೇಲ್ ಬಾಂಬ್ ದಾಳಿ ಮಾಡಿದೆ. ಇದೇ ಸಂದರ್ಭದಲ್ಲಿ ಕುವೈತ್ ಅಂತಾರಾಷ್ಟ್ರೀಯ ಏರ್ಪೋರ್ಟ್ ಬಳಿ ನಿಲ್ಲಿಸಿದ್ದ ಇಂಧನ ಹೊತ್ತಿದ್ದ ಟ್ಯಾಂಕ್ ಡ್ರೋಣ್ ದಾಳಿಗೆ ಬೆಂಕಿ ಹತ್ತಿಕೊಂಡು ಸುಟ್ಟು ಹೋಗಿದೆ. ಕುವೈತ್ ಸೇನೆಯ ಪ್ರಕಾರ, ನಿರಂತರ ದಾಳಿಗೆ ಪ್ರತಿಯಾಗಿ ಇಲ್ಲಿಗೆ ಡ್ರೋಣ್ ದಾಳಿಯಾಗಿದೆ ಎಂದಿದೆ.
ಮತ್ತೊಂದೆಡೆ ಅಮೆರಿಕದ ಬೃಹತ್ ಯುದ್ಧ ನೌಕೆಗಳು, ಎಫ್-35 ವಿಮಾನಗಳು ಗಲ್ಫ್ ದೇಶಗಳತ್ತ ಬಂದಿದ್ದು ಇವೆಲ್ಲದನ್ನು ನಾವು ಗಮನಿಸುತ್ತಿದ್ದೇವೆ, ಆದರೆ ಅಮೆರಿಕದ ಬೃಹತ್ ಯುದ್ದ ಹಡಗು ಅಬ್ರಹಾಂ ಲಿಂಕನ್ ನಮ್ಮ ವ್ಯಾಪ್ತಿಗೆ ಅದನ್ನು ಹೊಡೆಯುತ್ತೇವೆ ಎಂದು ಇರಾನ್ ಸೇನಾಧಿಕಾರಿಯೊಬ್ಬರು ಅಲ್ಲಿನ ಮಾಧ್ಯಮಕ್ಕೆ ತಿಳಿಸಿದ್ದಾರೆ. ಯುದ್ಧ ಆರಂಭಗೊಂಡ ಬಳಿಕದ ಒಂದು ತಿಂಗಳಲ್ಲಿ ನಾವು 15 ಸಾವಿರ ಬಾಂಬ್ ಗಳನ್ನು ಇರಾನ್ ಮೇಲೆ ಸುರಿದಿದ್ದಾಗಿ ಇಸ್ರೇಲ್ ಹೇಳಿಕೊಂಡಿದ್ದು, ಇದರಿಂದಾಗಿ ದೊಡ್ಡ ಮಟ್ಟದ ನಷ್ಟ ಉಂಟಾಗಿರುವುದಾಗಿ ಹೇಳಿದೆ.
ಪಾಕಿಸ್ತಾನಕ್ಕೆ ಯಾಕೆ ಯುದ್ಧ ನಿಲ್ಲಲೇಬೇಕು !
ಗಲ್ಫ್ ಯುದ್ಧದಿಂದ ಭಾರತ ಸೇರಿದಂತೆ ಏಷ್ಯನ್ ದೇಶಗಳಿಗೆ ಎಷ್ಟು ನಷ್ಟ ಆಗಿದೆಯೋ ಅದಕ್ಕಿಂತ ಹೆಚ್ಚಿನ ನಷ್ಟ ಪಾಕಿಸ್ತಾನ ಮೇಲಾಗಿದೆ. ತೈಲ ದರ ಏರಿಕೆಯಿಂದಾಗಿ ಅಲ್ಲಿನ ಆರ್ಥಿಕತೆಯೇ ಬುಡಮೇಲಾಗಿದೆ. ಇದಲ್ಲದೆ, ಅಮೆರಿಕ ಆರ್ಥಿಕ ನೆರವು ನೀಡುವ ಮಿತ್ರರಾಷ್ಟ್ರ ಎನ್ನುವುದು ಒಂದೆಡೆಯಾದರೆ ಇರಾನ್ ಬಹುಕಾಲದ ಆಪ್ತಮಿತ್ರ. ಎರಡು ಕಡೆಯೂ ಬಿಡಲಾಗದ ಸ್ಥಿತಿ ಪಾಕಿಸ್ತಾನದ್ದು. ಇದರ ನಡುವೆ ಸೌದಿ ಅರೇಬಿಯಾ ಯುದ್ಧಕ್ಕೆ ಎಂಟ್ರಿಯಾದರೆ ಪಾಕಿಸ್ತಾನ ಅವರ ಜೊತೆ ನಿಲ್ಲಬೇಕಾಗುತ್ತದೆ. ಯಾಕಂದ್ರೆ ಆಪತ್ಕಾಲದ ಮಿತ್ರನಾಗಿ ಸೌದಿ ಇದೆ. ಇಂತಹ ಸಂದಿಗ್ಧ ಸ್ಥಿತಿಯಿಂದ ಪಾರಾಗಲು ಅಮೆರಿಕ ಮತ್ತು ಇರಾನ್ ಮನವೊಲಿಸಿ ಯುದ್ಧ ನಿಲ್ಲಿಸುವುದಕ್ಕೆ ಪಾಕ್ ಮುಂದಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm