ಬ್ರೇಕಿಂಗ್ ನ್ಯೂಸ್
26-03-26 09:00 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 26 : ಇರಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದ್ದು ಐಆರ್ ಜಿಸಿ ನೌಕಾ ಪಡೆಯ ಮುಖ್ಯಸ್ಥ ಅಲಿರೆಜಾ ತಂಗ್ಸಿರಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲಿ ಸೇನಾಧಿಕಾರಿಗಳು ತಿಳಿಸಿದ್ದಾರೆ, ಹೊರ್ಮುಜ್ ಜಲಸಂಧಿಯಲ್ಲಿ ನೂರಾರು ಹಡಗುಗಳನ್ನು ತಡೆಯುವಲ್ಲಿ ಅಲಿರೆಜಾ ಅವರದೇ ನಿರ್ಧಾರ ಪ್ರಮುಖವಾಗಿತ್ತು.
ಇರಾನ್ ಬಂದರು ಅಬ್ಬಾಸ್ನಲ್ಲಿ ನಡೆದ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾಪಡೆಯ ಕಮಾಂಡರ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಗೆ ತಂಗ್ಸಿರಿ ಅವರೇ ಕಾರಣ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
ಈ ಬಗ್ಗೆ ಇರಾನ್ನಿಂದ ತಕ್ಷಣದ ದೃಢೀಕರಣ ಬಂದಿಲ್ಲ ಮತ್ತು ಇಸ್ರೇಲ್ ರಕ್ಷಣಾ ಪಡೆಗಳು ವರದಿಯಾದ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹತ್ಯೆ ದೃಢಪಟ್ಟರೆ, ಇರಾನ್ ಮಿಲಿಟರಿ ನಾಯಕತ್ವಕ್ಕೆ, ವಿಶೇಷವಾಗಿ ಕಾರ್ಯತಂತ್ರದ ಮಹತ್ವದ ಪರ್ಷಿಯನ್ ಕೊಲ್ಲಿಯಲ್ಲಿನ ಅದರ ನೌಕಾ ಕಾರ್ಯಾಚರಣೆಗಳಿಗೆ ದೊಡ್ಡ ಹೊಡೆತ ಬೀಳಲಿದೆ.
ಅಲಿರೇಜಾ ತಂಗ್ಸಿರಿ ಯಾರು?
ದಕ್ಷಿಣ ಇರಾನ್ನ ಬುಶೆಹರ್ ಪ್ರಾಂತ್ಯದಲ್ಲಿ ಜನಿಸಿದ ಅಲಿರೆಜಾ ತಂಗ್ಸಿರಿ, ಇರಾನ್-ಇರಾಕ್ ಯುದ್ಧ ಮತ್ತು 1980 ರ ದಶಕದಲ್ಲಿ ಇರಾನ್ನೊಂದಿಗೆ ಯುನೈಟೆಡ್ ಸ್ಟೇಟ್ಸ್ನ ಮೊದಲ ಸಂಘರ್ಷವಾದ ಟ್ಯಾಂಕರ್ ಯುದ್ಧಗಳ ಸಮಯದಲ್ಲಿ ಸೇವೆ ಸಲ್ಲಿಸಿದ್ದರು. ನಂತರ IRGC ನೌಕಾಪಡೆಗೆ ನೇಮಕವಾಗಿದ್ದರು. ಆಬಳಿಕ ತಂಗ್ಸಿರಿ ಬಂದರ್ ಅಬ್ಬಾಸ್ನಲ್ಲಿರುವ ಐಆರ್ಜಿಸಿ ನೌಕಾಪಡೆಯ 1ನೇ ನೌಕಾ ಜಿಲ್ಲೆಗೆ 2010 ರಿಂದ 2018ರ ವರೆಗೆ ಉಪ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದು ನಂತರ ನೌಕಾ ಪಡೆಯ ಮುಖ್ಯಸ್ಥರಾಗಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm