ಬ್ರೇಕಿಂಗ್ ನ್ಯೂಸ್
27-03-26 04:07 pm HK News Staffer ದೇಶ - ವಿದೇಶ
ವಾಷಿಂಗ್ಟನ್, ಮಾರ್ಚ್ 27: ಯುದ್ಧದಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಜತಾಂತ್ರಿಕ ಹೆಜ್ಜೆ ಇಟ್ಟಿದ್ದಾರೆ. ಇರಾನ್ ತನ್ನ ಷರತ್ತುಗಳಿಗೆ ಬಗ್ಗದಿದ್ದರೆ ದೊಡ್ಡ ಮಟ್ಟದ ದಾಳಿ ನಡೆಸುತ್ತೇವೆ ಎಂದಿದ್ದ ಟ್ರಂಪ್, ಇದೀಗ ದಾಳಿ ಗಡುವನ್ನು ಹತ್ತು ದಿನಕ್ಕೆ ಮುಂದೂಡಿದ್ದಾರೆ.
ಇಂಧನ ಮೂಲಗಳನ್ನು ಗುರಿಯಾಗಿಸಿ ಸೇನಾ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧವಾಗಿದ್ದ ಅಮೆರಿಕ, ದಿಢೀರ್ ಎನ್ನುವಂತೆ 10 ದಿನಗಳ ಗಡುವು ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ದೊಡ್ಡ ಮಟ್ಟದ ಯುದ್ಧದ ಆತಂಕವನ್ನು ಕೆಲವು ದಿನಗಳ ಕಾಲ ದೂರ ಮಾಡಿದ್ದಾರೆ. ಆದರೆ, ಈ ನಿರ್ಧಾರವನ್ನು ಇರಾನ್ ವಿನಂತಿಯ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಇರಾನ್ ಜೊತೆಗೆ ಮಾತುಕತೆಗೆ ಇನ್ನಷ್ಟು ಸಮಯ ನೀಡುವುದರಿಂದ ಸಮಸ್ಯೆಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬಹುದು ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಈ ಅವಧಿಯಲ್ಲಿ ಇರಾನ್ ತನ್ನ ನಿಲುವಿನಲ್ಲಿ ಬದಲಾವಣೆ ತರಬಹುದು ಮತ್ತು ಅಮೆರಿಕ ನೀಡಿದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಬಹುದು ಎಂಬ ನಿರೀಕ್ಷೆ ವ್ಯಕ್ತವಾಗುತ್ತಿದೆ. ಆದರೆ, ಇರಾನ್ ಟ್ರಂಪ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಅಮೆರಿಕ ನೀಡಿದ ಪ್ರಸ್ತಾವನೆಗಳು ಏಕಪಕ್ಷೀಯ ಮತ್ತು ತಮ್ಮ ಹಿತಾಸಕ್ತಿಗಳಿಗೆ ಅನುಕೂಲಕರವಾಗಿಲ್ಲ ಎಂದು ಇದಕ್ಕೂ ಮುನ್ನ ಟೀಕಿಸಿತ್ತು.
ನೇರ ಮಾತುಕತೆ ಬದಲು ಪರೋಕ್ಷ ಮಾತುಕತೆ ನಡೆಯುತ್ತಿರುವುದರಿಂದ ಶಾಂತಿ ಒಪ್ಪಂದದ ಬಗ್ಗೆ ಅನುಮಾನಗಳು ಮೂಡತೊಡಗಿವೆ. ಈ ಹಿನ್ನೆಲೆಯಲ್ಲಿ ಟ್ರಂಪ್ ಅವರ 'ಇರಾನ್ ಜೊತೆಗಿನ ಮಾತುಕತೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದೆ' ಎಂಬ ಹೇಳಿಕೆ ಮತ್ತು ಇರಾನ್ ಪ್ರತಿಕ್ರಿಯೆ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ಇದೇ ವೇಳೆ, ಯುದ್ಧದ ಪರಿಣಾಮಗಳು ಜಾಗತಿಕ ಮಟ್ಟದಲ್ಲಿ ತೀವ್ರವಾಗಿ ಪರಿಣಾಮ ಬೀರಿವೆ. ಇಂಧನ ಕ್ಷೇತ್ರದಲ್ಲಿ ಅಸ್ಥಿರತೆ ಹೆಚ್ಚಿದ್ದು, ತೈಲ ಬೆಲೆಗಳಲ್ಲಿ ಏರಿಳಿತ ಕಂಡುಬರುತ್ತಿದೆ. ಯುದ್ದದಿಂದಾಗಿ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಭದ್ರತೆ ಮೇಲೂ ಪರಿಣಾಮ ಬೀರಿದೆ.
ಟ್ರಂಪ್ ಅವರ ಈ ತೀರ್ಮಾನವನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಕೆಲವರು ಇದನ್ನು ಶಾಂತಿ ಮಾತುಕತೆಗಳಿಗೆ ಅವಕಾಶ ನೀಡುವ ಧೈರ್ಯಶಾಲಿ ರಾಜತಾಂತ್ರಿಕ ಹೆಜ್ಜೆ ಎಂದು ಹೊಗಳುತ್ತಿದ್ದಾರೆ. ಇನ್ನೂ ಕೆಲವರು ಇದನ್ನು ಕೇವಲ ಸೈನಿಕ ಒತ್ತಡವನ್ನು ಮುಂದುವರಿಸಿ ಸಮಯ ಗೆಲ್ಲುವ ತಂತ್ರ ಎಂದು ಟೀಕಿಸುತ್ತಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm