ಬ್ರೇಕಿಂಗ್ ನ್ಯೂಸ್
28-03-26 02:58 pm HK News Staffer ದೇಶ - ವಿದೇಶ
ಕಾಠ್ಮಂಡು, ಮಾರ್ಚ್ 28: ನೇಪಾಳದಲ್ಲಿ ಹೊಸತಾಗಿ ಬಾಲೇಂದ್ರ ಶಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಳೆದ ವರ್ಷ ದೇಶಾದ್ಯಂತ ನಡೆದಿದ್ದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಬಂಧಿಸಲಾಗಿದೆ, ಬಾಲೇಂದ್ರ ಶಾ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ದಿನದಲ್ಲಿ ಓಲಿಯನ್ನು ನೇಪಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವರದಿಗಳ ಪ್ರಕಾರ, ಗೌರಿಬಹಾದೂರ್ ಕರ್ಕಿ ನೇತೃತ್ವದ ತನಿಖಾ ಆಯೋಗವು ಭದ್ರಾ ಪ್ರದೇಶದಲ್ಲಿ ನಡೆದ ಝೆನ್ ಜಿ ಪ್ರತಿಭಟನೆ ಹತ್ತಿಕ್ಕಿದ್ದಕ್ಕಾಗಿ ಓಲಿ ಮತ್ತು ಲೇಖಕ್ ಸೇರಿದಂತೆ ಇತರರನ್ನ ತಪ್ಪಿತಸ್ಥರೆಂದು ಘೋಷಿಸಿದೆ. ಅಲ್ಲದೇ ತನಿಖಾ ಆಯೋಗವು ಪ್ರತಿಭಟನೆ ಸಂದರ್ಭದಲ್ಲಿನ ನೇಪಾಳ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಚಂದ್ರಕುಬೇರ್ ಖಪುಂಗ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದೆ.
ಇಂದು ಬೆಳಗ್ಗೆ ಮಾಜಿ ಪ್ರಧಾನಿ ಹಾಗೂ ಮಾಜಿ ಗೃಹಸಚಿವರನ್ನ ಬಂಧಿಸಲಾಗಿದ್ದು, ಕಾನೂನು ಪ್ರಕಾರವೇ ಕ್ರಮ ಮುಂದುವರಿಯುತ್ತದೆ ಎಂದು ಕಠ್ಮಂಡು ಕಣಿವೆ ಪೊಲೀಸ್ ಓಂ ಅಧಿಕಾರಿ ತಿಳಿಸಿದ್ದಾರೆ. ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಹಾಲಿ ಗೃಹಸಚಿವ ಸುಡಾನ್ ಗುರುಂಗ್, ಭರವಸೆ ಅಂದ್ರೆ ಭರವಸೆ, ಕಾನೂನಿಗಿಂತ ಯಾರೂ ಮೇಲಲ್ಲ ಎಂದು ತಿಳಿಸಿದ್ದಾರೆ. ನಾವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಮಾಜಿ ಗೃಹಸಚಿವ ರಮೇಶ್ ಲೇಖಕ್ ಅವರನ್ನ ಬಂಧಿಸಿದ್ದೇವೆ. ಇದು ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವ ಕ್ರಮವಲ್ಲ. ನ್ಯಾಯದ ಆರಂಭ ಮಾತ್ರ. ಈಗ ದೇಶವು ಹೊಸ ದಿಕ್ಕಿನತ್ತ ಸಾಗುತ್ತಿದೆ ಎಂದು ನಾನು ನಂಬುತ್ತೇನೆ ಎಂಬುದಾಗಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಕಳೆದ ಸೆಪ್ಟೆಂಬರ್ನಲ್ಲಿ ನೇಪಾಳದಲ್ಲಿ ಯುವಕರ ಕ್ರಾಂತಿ ಭುಗಿಲೆದ್ದಿತ್ತು. ಈ ವೇಳೆ, ಪ್ರತಿಭಟನೆಗಳನ್ನು ನಿಗ್ರಹಿಸುವ ವೇಳೆ ನಡೆದ ಕ್ರಿಮಿನಲ್ ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm