ಬ್ರೇಕಿಂಗ್ ನ್ಯೂಸ್
31-03-26 03:30 pm HK News Staffer ದೇಶ - ವಿದೇಶ
ಇಸ್ಲಾಮಾಬಾದ್, ಮಾರ್ಚ್ 31: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಮೊಹಮ್ಮದ್ ತಾಹಿರ್ ಅನ್ವರ್ ನಿಗೂಢ ರೀತಿಯಲ್ಲಿ ಹತ್ಯೆಗೀಡಾಗಿದ್ದಾನೆ. ಆತನ ಅಂತ್ಯಕ್ರಿಯೆ ಜೈಶ್ ಉಗ್ರರ ತಾಣ ಬಹಾವಲ್ಪುರದಲ್ಲಿ ನಡೆದಿದೆ.
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಐವರು ಸಹೋದರರಿದ್ದು ತಾಹಿರ್ ಅನ್ವರ್ ಹಿರಿಯ ಸೋದರ. ಸಂಘಟನೆಯ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ತಾಹಿರ್ ಈಗ ನಿಗೂಢವಾಗಿ ಸಾವನ್ನಪ್ಪಿದ್ದಾನೆ, ಕಳೆದ ಕೆಲವು ತಿಂಗಳುಗಳಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿರುವ ಹಲವರನ್ನು ಹತ್ಯೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತಾಹಿರ್ ಸಾವಿನ ಬಗ್ಗೆ ವಿವಿಧ ರೀತಿಯ ಊಹಾಪೋಹಗಳು ಹರಡುತ್ತಿವೆ. ಆತನ ಮೇಲೆ ದಾಳಿ ನಡೆದಿದೆಯೇ ಎನ್ನುವ ಬಗ್ಗೆ ದೃಢ ಮಾಹಿತಿ ಲಭ್ಯವಿಲ್ಲ.
ಇತ್ತೀಚಿನ ದಿನಗಳಲ್ಲಿ ಮಸೂದ್ ಅಜರ್ ಕುಟುಂಬದಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಭಾರತದ ಆಪರೇಷನ್ ಸಿಂಧೂರ್ ವೇಳೆ ಬಹಾವಲ್ಪುರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಮಸೂದ್ ಕುಟುಂಬದ ಹತ್ತು ಸದಸ್ಯರು ಮತ್ತು ಕೆಲವು ಸಹಚರರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಆತನ ಸಹೋದರಿ, ಸೋದರಳಿಯ ಹಾಗೂ ಹತ್ತಿರದ ಕುಟುಂಬ ಸದಸ್ಯರು ಸೇರಿದ್ದಾರೆ.
ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ 2001ರ ಸಂಸತ್ ದಾಳಿ, 2008 ರ ಮುಂಬೈ ದಾಳಿ, 2016 ರ ಪಠಾಣ್ಕೋಟ್ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಗಳನ್ನು ನಡೆಸಿರುವ ಗಂಭೀರ ಆರೋಪಗಳನ್ನು ಎದುರಿಸುತ್ತಿದೆ. ಇದರ ಮುಖ್ಯಸ್ಥ ಮಸೂದ್ ಅಜರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿಯಲ್ಲಿದ್ದರೂ, ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ಆತನ ಆರೋಗ್ಯ ಬಗ್ಗೆ ವದಂತಿಗಳು ಹರಡುತ್ತಿವೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm