ಬ್ರೇಕಿಂಗ್ ನ್ಯೂಸ್
31-03-26 11:00 pm HK News Staffer ದೇಶ - ವಿದೇಶ
ಟೆಹ್ರಾನ್, ಮಾರ್ಚ್ 31: ಯುದ್ಧ ವಿರಾಮ ಘೋಷಣೆ ನಡುವೆಯೂ ಅಮೆರಿಕ- ಇಸ್ರೇಲ್ ಇರಾನ್ ದೇಶದ ರಾಜಧಾನಿ ಟೆಹ್ರಾನ್ ಮತ್ತು ಪರಮಾಣು ಸ್ಥಾವರಗಳಿರುವ ಇಶ್ಫಹಾನ್ ಮೇಲೆ ಭಾರೀ ಬಾಂಬ್ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಪ್ರತಿಯಾಗಿ ಇರಾನಿನ ಐಆರ್ ಜಿಸಿ ಪಡೆ ಅಮೆರಿಕ ಮೂಲದ ಕಂಪನಿಗಳನ್ನು ಟಾರ್ಗೆಟ್ ಮಾಡುವುದಾಗಿ ಬೆದರಿಕೆ ಹಾಕಿದೆ.
ಅಮೆರಿಕ ತಾಂತ್ರಿಕ ದೈತ್ಯ ಕಂಪನಿಗಳಾದ ಮೈಕ್ರೋಸಾಫ್ಟ್, ಗೂಗಲ್, ಏಪಲ್, ಇಂಟೆಲ್, ಬೋಯಿಂಗ್ ಸೇರಿದಂತೆ 18 ಬಹು ರಾಷ್ಟ್ರೀಯ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಐಆರ್ ಜಿಸಿ ಹೇಳಿಕೊಂಡಿದ್ದು, ಕೂಡಲೇ ಅದರಲ್ಲಿರುವ ಉದ್ಯೋಗಿಗಳು ಕಚೇರಿ ತೊರೆಯುವಂತೆ ಸೂಚನೆ ನೀಡಿದೆ. ಎಪ್ರಿಲ್ 1ರಂದೇ ಅಮೆರಿಕದ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಐಆರ್ ಜಿಸಿ ಹೇಳಿದೆ. ಈ ಹಿನ್ನೆಲೆಯಲ್ಲಿ ಸೌದಿ, ದುಬೈನಲ್ಲಿರುವ ಅಮೆರಿಕದ ಕಂಪನಿಗಳಿಗೆ ನಡುಕ ಶುರುವಾಗಿದೆ.
ಅಲ್ಲದೆ, ಅಮೆರಿಕ- ಇಸ್ರೇಲ್ ದಾಳಿಯನ್ನು ಭಯೋತ್ಪಾದಕ ದಾಳಿಯೆಂದು ಐಆರ್ ಜಿಸಿ ಹೇಳಿದ್ದು, ಇವರ ಪ್ರತಿ ದಾಳಿಗೂ ಪ್ರತಿಯಾಗಿ ಅಮೆರಿಕ ಮೂಲದ ಕಂಪನಿಗಳನ್ನು ಟಾರ್ಗೆಟ್ ಮಾಡಲಾಗುವುದು ಎಂದು ಹೇಳಿದೆ. ಇದೇ ವೇಳೆ, ಇಸ್ರೇಲ್ ಇರಾನ್ ದೇಶದ ಫಾರ್ಮಾ ಕಂಪನಿಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದನ್ನು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಖಂಡಿಸಿದ್ದು, ಇಸ್ರೇಲ್ ಯುದ್ಧಾಪರಾಧವನ್ನು ಮಾಡುತ್ತಿದ್ದು ಫಾರ್ಮಾ ಕಂಪನಿಗಳ ಮೇಲೆ ಬಾಂಬ್ ದಾಳಿ ನಡೆಸುತ್ತಿದೆ. ಅವರ ಗುರಿ ಕ್ಲೀಯರ್ ಆಗಿ ಕಾಣುತ್ತಿದೆ ಎಂದಿದ್ದಾರೆ.
ಇದೇ ವೇಳೆ, ಪಾಕಿಸ್ತಾನ ಮತ್ತು ಚೀನಾವು ಕೂಡಲೇ ಯುದ್ಧ ನಿಲ್ಲಿಸಿ ಶಾಂತಿ ಸ್ಥಾಪನೆ ಮಾತುಕತೆ ನಡೆಸುವಂತೆ ಆಗ್ರಹಿಸಿವೆ. ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ತಾವು ಜೊತೆಯಾಗುವುದಾಗಿ ಜಂಟಿ ಹೇಳಿಕೆ ನೀಡಿವೆ. ಇದೇ ವೇಳೆ ಅಮೆರಿಕದಲ್ಲಿ ಯುದ್ಧ ನಿಲ್ಲಿಸುವಂತೆ ಆಗ್ರಹಿಸಿ ಅಧ್ಯಕ್ಷ ಟ್ರಂಪ್ ವಿರುದ್ಧ ಭಾರೀ ಸಂಖ್ಯೆಯಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ. ದೇಶಾದ್ಯಂತ ಕಳೆದ 3-4 ದಿನಗಳಲ್ಲಿ 3 ಸಾವಿರಕ್ಕೂ ಹೆಚ್ಚು ಕಡೆಗಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm