ಬ್ರೇಕಿಂಗ್ ನ್ಯೂಸ್
11-08-20 04:50 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 11: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೇಹಸ್ಥಿತಿ ಗಂಭೀರವಾಗಿದೆ. ಸದ್ಯಕ್ಕೆ ಮುಖರ್ಜಿಯವರನ್ನು ಎಮರ್ಜೆನ್ಸಿ ವೆಂಟಿಲೇಟರ್ ನಲ್ಲಿ ಇರಿಸಲಾಗಿದ್ದು ಆರೋಗ್ಯ ವಿಷಮವಾಗುತ್ತಿದೆ ಎಂದು ಅವರನ್ನು ಸರ್ಜರಿಗೆ ಒಳಪಡಿಸಿದ ದೆಹಲಿಯ ಸೇನಾ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.
ನಿನ್ನೆಯಷ್ಟೇ ಪ್ರಣಬ್ ಮುಖರ್ಜಿ ಅವರನ್ನು ಬ್ರೈನ್ ಸರ್ಜರಿಗೆ ಒಳಪಡಿಸಲಾಗಿತ್ತು. ಆದರೆ, ಸರ್ಜರಿ ಬಳಿಕ ಅವರು ಕೋಮಾ ಸ್ಥಿತಿಯಿಂದ ಹೊರಬಂದಿಲ್ಲ. ವೆಂಟಿಲೇಟರ್ ಮೂಲಕ ಶ್ವಾಸ ಪ್ರಕ್ರಿಯೆ ಮುಂದುವರಿಸಲಾಗಿತ್ತು. ಇಂದು ದೇಹಸ್ಥಿತಿ ಮತ್ತಷ್ಟು ವಿಷಮವಾಗಿದೆ ಎಂದು ಆರ್ ಆರ್ ಆಸ್ಪತ್ರೆಯಿಂದ ನೀಡಿರುವ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಸರ್ಜರಿಗೂ ಮುನ್ನ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಪಾಸಿಟಿವ್ ಆಗಿದ್ದರು. ಈ ಬಗ್ಗೆ ಪ್ರಣಬ್ ಮುಖರ್ಜಿಯವರ ಟ್ವಿಟರ್ ಖಾತೆಯಲ್ಲಿ ಅಧಿಕೃತವಾಗಿ ಹೇಳಿಕೊಳ್ಳಲಾಗಿತ್ತು. ಆನಂತ್ರ ಮುಖರ್ಜಿ ಅವರನ್ನು ಮೆದುಳಿನಲ್ಲಿ ರಕ್ತಸ್ರಾವ ಹಿನ್ನೆಲೆಯಲ್ಲಿ ತುರ್ತಾಗಿ ಶಸ್ತ್ರಕ್ರಿಯೆಗೆ ಒಳಪಡಿಸಲಾಗಿತ್ತು. ದುರದೃಷ್ಟ ಅಂದ್ರೆ ಶಸ್ತ್ರಚಿಕಿತ್ಸೆ ಬಳಿಕ ಕೋಮಾಕ್ಕೆ ಜಾರಿದ 84 ವರ್ಷದ ಮುಖರ್ಜಿ ಮರಳಿ ವಾಸ್ತವಕ್ಕೆ ಬಂದಿಲ್ಲ.
ಪ್ರಣಬ್ ಮುಖರ್ಜಿಯವರು ಭಾರತದ 13 ನೇ ರಾಷ್ಟ್ರಪತಿಯಾಗಿದ್ದು 2012ರಿಂದ 2017ರ ವರೆಗೆ ಈ ಹುದ್ದೆಯಲ್ಲಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇರುವ ಕೆಲವೇ ಕೆಲವು ನಿಷ್ಠಾವಂತ ಮತ್ತು ಅಪಾರ ಜ್ಞಾನವುಳ್ಳ ಮುತ್ಸದ್ಧಿಗಳಲ್ಲಿ ಮುಖರ್ಜಿ ಒಬ್ಬರು..
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm