ಬ್ರೇಕಿಂಗ್ ನ್ಯೂಸ್
04-01-21 01:01 pm Headline Karnataka News Network ದೇಶ - ವಿದೇಶ
ಲಕ್ನೋ, ಜ. 3 : ಗಾಜಿಯಾಬಾದಿನ ಮುರಾದ್ ನಗರದಲ್ಲಿ ಭಾರೀ ದುರಂತ ಸಂಭವಿಸಿದ್ದು ಸ್ಮಶಾನದ ಮೇಲ್ಛಾವಣಿ ಕುಸಿದು 25 ಮಂದಿ ಮೃತಪಟ್ಟಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದಯಾನಂದ್ ಕಾಲೋನಿಯ ನಿವಾಸಿಯಾಗಿದ್ದ ರಾಮ್ ಧನ್ ಅಲಿಯಾಸ್ ದಯಾರಾಮ್ ಎಂಬವರ ಅಂತ್ಯಕ್ರಿಯೆಗೆ ನೂರಾರು ಮಂದಿ ಆಗಮಿಸಿದ್ದು ಸ್ಮಶಾನದ ತಂಗುದಾಣದಲ್ಲಿ ಅನೇಕ ಮಂದಿ ನಿಂತಿದ್ದರು. ಈ ತಂಗುದಾಣದ ಮೇಲ್ಛಾವಣಿ ದಿಢೀರ್ ಆಗಿ ಕುಸಿದು ಬಿದ್ದುದರಿಂದ ಅನೇಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಗಾಜಿಯಾಬಾದ್ (ಗ್ರಾಮೀಣ) ಎಸ್ಪಿ ಐರಾಜ್ ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ದುರಂತದಲ್ಲಿ ಮಡಿದವರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲು ಸೂಚಿಸಿದ್ದಾರೆ.
ಘಟನೆಯಲ್ಲಿ 25 ಮಂದಿ ಮೃತಪಟ್ಟಿದ್ದಾರೆ, 38 ಮಂದಿಯನ್ನು ರಕ್ಷಿಸಲಾಗಿದೆ. 45 ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಹಾಗೂ ಶೀಘ್ರದಲ್ಲಿ ವರದಿ ಸಲ್ಲಿಸಲಾಗುವುದು ಎಂದು ಮೀರತ್ ಜಿಲ್ಲಾಧಿಕಾರಿ ಅನೀತಾ ಸಿ ಮೇಶ್ರಮ್ ಸುದ್ದಿಗಾರರಿಗೆ ತಿಳಿಸಿದರು.
At least 25 people have died and 45 persons were injured after a roof collapsed at a crematorium in Uttar Pradesh's Muradnagar.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm