ಬ್ರೇಕಿಂಗ್ ನ್ಯೂಸ್
04-01-21 01:01 pm Headline Karnataka News Network ದೇಶ - ವಿದೇಶ
ಲಕ್ನೋ, ಜ. 3 : ಗಾಜಿಯಾಬಾದಿನ ಮುರಾದ್ ನಗರದಲ್ಲಿ ಭಾರೀ ದುರಂತ ಸಂಭವಿಸಿದ್ದು ಸ್ಮಶಾನದ ಮೇಲ್ಛಾವಣಿ ಕುಸಿದು 25 ಮಂದಿ ಮೃತಪಟ್ಟಿದ್ದು, 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದಯಾನಂದ್ ಕಾಲೋನಿಯ ನಿವಾಸಿಯಾಗಿದ್ದ ರಾಮ್ ಧನ್ ಅಲಿಯಾಸ್ ದಯಾರಾಮ್ ಎಂಬವರ ಅಂತ್ಯಕ್ರಿಯೆಗೆ ನೂರಾರು ಮಂದಿ ಆಗಮಿಸಿದ್ದು ಸ್ಮಶಾನದ ತಂಗುದಾಣದಲ್ಲಿ ಅನೇಕ ಮಂದಿ ನಿಂತಿದ್ದರು. ಈ ತಂಗುದಾಣದ ಮೇಲ್ಛಾವಣಿ ದಿಢೀರ್ ಆಗಿ ಕುಸಿದು ಬಿದ್ದುದರಿಂದ ಅನೇಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಗಾಜಿಯಾಬಾದ್ (ಗ್ರಾಮೀಣ) ಎಸ್ಪಿ ಐರಾಜ್ ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ದುರಂತದಲ್ಲಿ ಮಡಿದವರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲು ಸೂಚಿಸಿದ್ದಾರೆ.
ಘಟನೆಯಲ್ಲಿ 25 ಮಂದಿ ಮೃತಪಟ್ಟಿದ್ದಾರೆ, 38 ಮಂದಿಯನ್ನು ರಕ್ಷಿಸಲಾಗಿದೆ. 45 ಮಂದಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಹಾಗೂ ಶೀಘ್ರದಲ್ಲಿ ವರದಿ ಸಲ್ಲಿಸಲಾಗುವುದು ಎಂದು ಮೀರತ್ ಜಿಲ್ಲಾಧಿಕಾರಿ ಅನೀತಾ ಸಿ ಮೇಶ್ರಮ್ ಸುದ್ದಿಗಾರರಿಗೆ ತಿಳಿಸಿದರು.
At least 25 people have died and 45 persons were injured after a roof collapsed at a crematorium in Uttar Pradesh's Muradnagar.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm