ಬ್ರೇಕಿಂಗ್ ನ್ಯೂಸ್
06-04-26 06:09 pm HK News Staffer ದೇಶ - ವಿದೇಶ
ನವದೆಹಲಿ, ಎಪ್ರಿಲ್ 6: ಪಶ್ಚಿಮ ಏಷ್ಯಾದಲ್ಲಿ ಯುದ್ಧ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಮೇ 31 ರವರೆಗೆ ಇಸ್ರೇಲ್ಗೆ ತನ್ನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿದೆ. ನವದೆಹಲಿ- ಟೆಲ್ ಅವೀವ್ ಮಾರ್ಗದಲ್ಲಿ ಮೇ 31ರ ವರೆಗೂ ವಿಮಾನ ಯಾನವನ್ನು ಸ್ಥಗಿತಗೊಳಿಸಿದೆ.
ಎಲ್ ಅಲ್ ಇಸ್ರಾಏರ್, ಅರ್ಕಿಯಾ ಮತ್ತು ಏರ್ ಹೈಫಾದಂತಹ ಇಸ್ರೇಲಿ ವಿಮಾನಗಳು ಮಾತ್ರ ತೀವ್ರ ನಿರ್ಬಂಧಗಳ ನಡುವೆಯೂ ಕಾರ್ಯ ನಿರ್ವಹಿಸುತ್ತವೆ. ಆದರೆ ಹೆಚ್ಚಿನ ಪ್ರಮುಖ ವಿಮಾನಯಾನ ಸಂಸ್ಥೆಗಳು ಟೆಲ್ ಅವಿವ್ ಮಾರ್ಗದಲ್ಲಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.
ವೈಯಕ್ತಿಕ ಅಥವಾ ವೃತ್ತಿಪರ ಕಾರಣಗಳಿಗಾಗಿ ಭಾರತಕ್ಕೆ ಬರಲು ಬಯಸುತ್ತಿರುವ ಇಸ್ರೇಲ್ನಲ್ಲಿ ವಾಸಿಸುವ 40,000 ಕ್ಕೂ ಹೆಚ್ಚು ಭಾರತೀಯರಲ್ಲಿ ವಿಮಾನ ಸಂಚಾರ ಸ್ಥಗಿತ ಚಿಂತೆಗೀಡು ಮಾಡಿದೆ. ಇಸ್ರೇಲ್ ತೊರೆಯಲು ಬಯಸುವ ಭಾರತೀಯರು ಜೋರ್ಡಾನ್ ಅಥವಾ ಈಜಿಪ್ಟ್ ಮೂಲಕ ಎರಡು ದೇಶಗಳ ಭೂ ಗಡಿ ದಾಟುವ ಮೂಲಕ ಪ್ರವೇಶಿಸಬೇಕು. ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ವಿವಿಧ ಮಾರ್ಗಗಳ ಮೂಲಕ ಭಾರತಕ್ಕೆ ತೆರಳಲು ನೆರವು ನೀಡುತ್ತಿದೆ. ಇದೇ ವೇಳೆ, ರಾಯಭಾರ ಕಚೇರಿ ಭಾರತೀಯ ಸಮುದಾಯದೊಂದಿಗೆ ನಿಯಮಿತ ಸಂಪರ್ಕವನ್ನು ಹೊಂದಿದ್ದು, 24x7 ತುರ್ತು ಸಹಾಯವಾಣಿ ತೆರೆದಿದೆ ಮತ್ತು ಬೃಹತ್ ನೋಂದಣಿ ಕಾರ್ಯವನ್ನು ಸಹ ಪ್ರಾರಂಭಿಸಿದೆ.
ಇದೇ ವೇಳೆ, ಭಾರತದ ಇಸ್ರೇಲ್ ರಾಯಭಾರಿ ಜೆಪಿ ಸಿಂಗ್ ಮತ್ತು ಸಿಬಂದಿ ಇಸ್ರೇಲ್ನಲ್ಲಿರುವ ಭಾರತೀಯರ ಸಮಸ್ಯೆ ಆಲಿಸಲು ವರ್ಚುವಲ್ ಚರ್ಚೆಯನ್ನು ನಡೆಸಿತು. ಬಿಕ್ಕಟ್ಟಿನ ಸಂದರ್ಭದಲ್ಲಿ ಮತ್ತು ಅದರಾಚೆಗೂ ಅವರಿಗೆ ನಿರಂತರ ಬೆಂಬಲದ ಭರವಸೆ ನೀಡಿದೆ ಎಂದು ಮಿಷನ್ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ತಿಳಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm