ಬ್ರೇಕಿಂಗ್ ನ್ಯೂಸ್
07-04-26 08:01 pm HK News Staffer ದೇಶ - ವಿದೇಶ
ಇಸ್ಲಮಾಬಾದ್, ಎಪ್ರಿಲ್ 7: ಗಲ್ಫ್ ಯುದ್ಧದಿಂದಾಗಿ ಹಲವು ರಾಷ್ಟ್ರಗಳು ಪತರಗುಟ್ಟಿ ಹೋಗಿದ್ದು ಇಂಧನ ಪೂರೈಕೆ ಅವ್ಯವಸ್ಥೆಯಿಂದಾಗಿ ಪರ್ಯಾಯ ಚಿಂತನೆಯಲ್ಲಿ ತೊಡಗಿವೆ. ಇದೇ ವೇಳೆ, ಇಂಧನದ ಕಾರಣಕ್ಕೆ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನ ಆಂಶಿಕ ಲಾಕ್ಡೌನ್ ಮಾಡಲು ಮುಂದಾಗಿದೆ. ಇದರಂತೆ, ರಾತ್ರಿ 8 ಗಂಟೆಗೆ ಎಲ್ಲಾ ಮಾರುಕಟ್ಟೆಗಳು ಮತ್ತು ಮಾಲ್ಗಳನ್ನು ಮುಚ್ಚುವಂತೆ ಪಾಕಿಸ್ತಾನ ಸರ್ಕಾರ ಆದೇಶ ಹೊರಡಿಸಿದೆ.
ಯುದ್ಧದಿಂದ ಹೆಚ್ಚುತ್ತಿರುವ ಜಾಗತಿಕ ಇಂಧನ ವೆಚ್ಚಗಳನ್ನ ನಿರ್ವಹಿಸಲು ಸಾಧ್ಯವಾಗದೇ ಪಾಕಿಸ್ತಾನ ಈ ಕಠಿಣ ನಿರ್ಧಾರಕ್ಕೆ ಮುಂದಾಗಿದೆ. ರಾತ್ರಿ 8 ಗಂಟೆ ವರೆಗೂ ಮಾತ್ರ ಅಂಗಡಿ, ವ್ಯಾಪಾರಿ ಸಂಕೀರ್ಣಗಳನ್ನು ತೆರೆದಿಡುವಂತೆ ಆದೇಶ ಹೊರಡಿಸಿದೆ. ಭಾಗಶಃ ಲಾಕ್ಡೌನ್ ಅಡಿಯಲ್ಲಿ, ಮಾರುಕಟ್ಟೆಗಳು ಮತ್ತು ಮಾಲ್ಗಳು 8 ಗಂಟೆಗೆ, ರೆಸ್ಟೋರೆಂಟ್ಗಳು 10 ಗಂಟೆಗೆ ಮತ್ತು ಖಾಸಗಿ ಮದುವೆ ಕಾರ್ಯಕ್ರಮಗಳನ್ನು ರಾತ್ರಿ 10 ಗಂಟೆಗೆ ಬಂದ್ ಮಾಡಲು ಸೂಚಿಸಿದೆ. ಈಗಾಗಲೇ ಶಾಲೆಗಳನ್ನು ಒಂದು ತಿಂಗಳ ಕಾಲ ಬಂದ್ ಮಾಡಲಾಗಿದೆ.
ಪ್ರಧಾನಿ ಶೆಹಬಾಜ್ ಷರೀಫ್ ಅಧ್ಯಕ್ಷತೆಯಲ್ಲಿ ನಡೆದ ಪೆಟ್ರೋಲಿಯಂ ಉತ್ಪನ್ನಗಳ ಕುರಿತ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರದ ಆದೇಶಗಳ ಪ್ರಕಾರ, ಖೈಬರ್ ಪಖ್ತುಂಖ್ವಾ, ಬಲೂಚಿಸ್ತಾನ್, ಇಸ್ಲಮಾಬಾದ್, ಪಾಕಿಸ್ತಾನ ಆಕ್ರಮಿತ ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಮಾರುಕಟ್ಟೆಗಳು, ಶಾಪಿಂಗ್ ಮಾಲ್ ಗಳು, ಸರ್ಕಾರಿ ಮಳಿಗೆಗಳು ಮತ್ತು ಅಂಗಡಿಗಳನ್ನು ರಾತ್ರಿ 8 ಗಂಟೆಗೆ ಮುಚ್ಚಲು ಸೂಚಿಸಲಾಗಿದೆ. 8 ಗಂಟೆ ಬಳಿಕ ಯಾವುದೇ ಅಂಗಡಿ ತೆರೆಯುವಂತಿಲ್ಲ.
ನಿರ್ಬಂಧಗಳಿಂದ ವೈದ್ಯಕೀಯ ಸೌಲಭ್ಯ ಹಾಗೂ ಔಷಧಾಲಯಗಳಿಗೆ ವಿನಾಯಿತಿ ನೀಡಲಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳಿಂದಾಗಿ ಪೂರೈಕೆ ಸರಪಳಿಗಳು ಬುಡಮೇಲಾಗಿದ್ದು ಜಾಗತಿಕವಾಗಿ ತೈಲ ಮತ್ತು ಇಂಧನ ಬೆಲೆಗಳು ಏರುತ್ತಿದೆ. ಪಾಕಿಸ್ತಾನದ ಆರ್ಥಿಕತೆ ತೀವ್ರ ಹದಗೆಟ್ಟಿದ್ದು, ಇಂಧನ ಆಮದಿನ ಮೌಲ್ಯ ಒಟ್ಟು ಆಮದು ವಹಿವಾಟಿಗಿಂತ 22 ಶೇ. ಹೆಚ್ಚಿದೆ. ಹೀಗಾಗಿ ಭಾಗಶಃ ಲಾಕ್ಡೌನ್ ಕ್ರಮಗಳನ್ನು ಜಾರಿಗೊಳಿಸಿ ಪರೋಕ್ಷವಾಗಿ ಇಂಧನ ಬಳಕೆಯ ಮೇಲೆ ನಿಯಂತ್ರಣ ವಿಧಿಸಲು ಮುಂದಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm